ಗೋವಾದಲ್ಲಿ ಗೋಮಾಂಸಕ್ಕೆ ಯೆಸ್…ಇಲ್ಲಿ ನೋ…! ಇದು ನಿಮ್ಮ ಹಿಂದುತ್ವವೇ…?

: ರಾಜ್ಯಪಾಲರ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ-ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ನಡುವಿನ ಮಾತಿನ ಸಮರ ಎಂದಿನಂತೆ ಮುಂದುವರೆದಿದ್ದು, ರಾಜ್ಯಪಾಲರು ಆರ್’ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಅನುಸರಿಸಲಿ ಎಂದು ಉದ್ಧವ್ ಠಾಕ್ರೆ ಸಲಹೆ ನೀಡಿದ್ದಾರೆ. 

uddhav thackeray

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ನಡುವಿನ ಮಾತಿನ ಸಮರ ಎಂದಿನಂತೆ ಮುಂದುವರೆದಿದ್ದು, ರಾಜ್ಯಪಾಲರು ಆರ್’ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಅನುಸರಿಸಲಿ ಎಂದು ಉದ್ಧವ್ ಠಾಕ್ರೆ ಸಲಹೆ ನೀಡಿದ್ದಾರೆ. 

ವಿಜಯದಶಮಿ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ವೈರಸ್ ಕಾರಣದಿಂದಾದಿ ನಾವಿನ್ನೂ ಮಂದಿರಗಳನ್ನು ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಹಿಂದುತ್ವದ ಬಗ್ಗೆ ನಮಗೆ ಪ್ರಶ್ನೆ ಮಾಡುತ್ತಿದ್ದಾರೆಂದು ರಾಜ್ಯಪಾಲರ ಹೆಸರನ್ನು ಉಲ್ಲೇಖಿಸದೆಯೇ ವಾಗ್ದಾಳಿ ನಡೆಸಿದ್ದಾರೆ. 

ನೀವು ನಮ್ಮ ಹಿಂದುತ್ವದ ಬಗ್ಗೆ ಮಾತನಾಡುತ್ತಿದ್ದೀರಿ. ಆದ್ದರಿಂದ ಮಹಾರಾಷ್ಟ್ರದಲ್ಲಿ ನೀವು ಗೋಮಾಂಸವನ್ನು ನಿಷೇಧಿಸುತ್ತೀರಿ. ಆದರೆ, ಗೋವಾದಲ್ಲಿ ನಿಮಗೆ ಗೋಮಾಂಸ ಏನೂ ಮಾಡುವುದಿಲ್ಲ. ಇದು ನಿಮ್ಮ ಹಿಂದುತ್ವವೇ..? ಎಂದು ಪ್ರಶ್ನಿಸಿದ್ದಾರೆ. 

ಇದೇ ವೇಳೆ ಮೋಹನ್ ಭಾಗವತ್ ಅವರ ಭಾಷಣವನ್ನು ಉಲ್ಲೇಖಿಸಿರುವ ಠಾಕ್ರೆಯವರು, ಭಾಗವತ್ ಅವರು ಇಂದು ಹಿಂದುತ್ವವು ಪೂಜೆಗಳೊಂದಿಗೆ ಮಾತ್ರ ಸಂಬಂಧವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಕೆಲವರು ಕಪ್ಪು ಟೋಪಿ ಧರಿಸಿ ನಮ್ಮ ನಂಬಿಕೆಗಳನ್ನು ಪ್ರಶ್ನಿಸಿ ನಮ್ಮನ್ನು ಜಾತ್ಯಾತೀತ ಎಂದು ಕರೆಯುತ್ತಿದ್ದಾರೆ. ಅಂತವಹು ಭಾಗವತ್ ಅವರ ಭಾಷಣವನ್ನು ಕೇಳಲಿ ಎಂದು ಹೇಳಿದ್ದಾರೆ. 

ಯಾರಾದರೂ ನಮಗೆ ಸವಾಲು ಹಾಕಲು ಬಯಸಿದರೆ, ಅಪಾಯವನ್ನು ಮೈಮೇಲೆ ಎಳೆದುಕೊಂಡಂತೆ ಎಂದು ಇದೇ ವೇಳೆ ಎಚ್ಚರಿಸಿದ್ದಾರೆ. 

ಹಿಂದುತ್ವಕ್ಕೆ ಧಾರ್ಮಿಕ ಅರ್ಥ ಸೇರಿದ ಅದನ್ನು ವಿರೂಪಗೊಳಿಸಲಾಗಿದೆ ಎಂದು ಇದೇ ವೇಳೆ ಠಾಕ್ರೆ ಬೇಸರ ವ್ಯಕ್ತಪಡಿಸಿದ್ದಾರೆ. 

ಹಿಂದುತ್ವದ ತಪ್ಪು ಕಲ್ಪನೆಯನ್ನು ಸಂಘ ಉತ್ತೇಜಿಸುವುದಿಲ್ಲ. ಇದು ನಮ್ಮ ಗುರುತನ್ನು ವ್ಯಕ್ತಪಡಿಸುವ ಪದವಾಗಿದೆ. ಆಧ್ಯಾತ್ಮಿಕತೆ ಆಧಾರಿತ ಸಂಪ್ರದಾಯಗಳ ನಿರಂತರತೆ ಮತ್ತು ಭಾರತದ ಭೂಮಿಯಲ್ಲಿನ ಮೌಲ್ಯ ವ್ಯವಸ್ಥೆ, ಸಂಪೂರ್ಣ ಸಂಪ ತ್ತು ಎಂದು ಭಾಗವತ್ ಅವರು ಹಿಂದುತ್ವದ ಕುರಿತು ವಿವರಿಸಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *