bhoomi hunnime or seegehunnime- ಭೂಮಿ ಬಯಕೆ ತೀರಿಸುವ ಬೂಮಣಿ ಹಬ್ಬ

ಭೂಮಿ ಹಬ್ಬ, ಭೂಮಣಿ ಹಬ್ಬ ಎಂದು ಕರೆಯುವ ಭೂಮಿ, ಬೆಳೆಯ ಪೂಜೆಯ ಹಬ್ಬವನ್ನು ಮಲೆನಾಡಿನಲ್ಲಿ ಭೂಮಿ ಹುಣ್ಣಿಮೆ, ಬಯಲುನಾಡಿನಲ್ಲಿ ಸೀಗೆ ಹುಣ್ಣಿಮೆ ಎಂದು ಕರೆಯುತ್ತಾರೆ. ಎತ್ತು ಓಡಿಸುವ, ಬೆಂಕಿಯ ಮೇಲೆ ಹೋರಿ ನಡೆಸುವ ಬಯಲುಸೀಮೆಯ ಸೀಗೆ ಹುಣ್ಣಿಮೆ, ಭೂಮಿ ತಾಯಿಗೆ ಬಯಕೆ ನೀಡುವ ಭೂಮಿ ತಾಯಿಯ ಬಯಕೆಯ ಸೀಮಂತವನ್ನು ನಡೆಸುವ ಮಲೆನಾಡಿನ ಬೂಮಣಿ ಹಬ್ಬ ಆಚರಣೆಯಲ್ಲಿ ತುಸು ಭಿನ್ನ.

ಮಲೆನಾಡೆಂದರೆ…. ಕಾಡು, ಪರಿಸರ, ಸಸ್ಯ, ಮಳೆ, ಬೆಳೆ ಇವುಗಳೆಲ್ಲದರ ಒಟ್ಟಂದದದ ಬದುಕೇ ಬುಡಕಟ್ಟು ಬದುಕು. ಮಲೆನಾಡಿನ ಮೂಲನಿವಾಸಿಗಳು, ಕೆಳವರ್ಗಗಳು ಪ್ರಕೃತಿ ಆರಾಧನೆಯ ಈ ಭೂಮಿ ಹುಣ್ಣಿಮೆಯನ್ನು ವಿಶಿಷ್ಟವಾಗಿ ಆಚರಿಸುತ್ತಾರೆ. ಒಂದೆರಡು ವಾರಗಳ ಮೊದಲು ಬೂಮಣಿ ಬುಟ್ಟಿ ಅಲಂಕಾರ ಪ್ರಾರಂಭಿಸುವ ಮಹಿಳೆಯರು ಸಾಂಪ್ರದಾಯಿಕ ಚಿತ್ತಾರವನ್ನು ರಚಿಸುತ್ತಾರೆ. ನಂತರ ಮನೆಯ ಯಜಮಾನ ಹಬ್ಬದ ಅಗತ್ಯ ವಸ್ತುಗಳನ್ನು ಸಂಗ್ರಹಿಸುತ್ತಾನೆ. ಇಂಥ ಸಂಗ್ರಹಿಸಿದ ವಸ್ತುಗಳನ್ನು ಚರಗ ಅಥವಾ ಹಂಚೆಬ್ಲಿ ಹಾಗೂ ಎಡೆಯ ಪದಾರ್ಥಗಳಾಗಿ ವಿಂಗಡಿಸಲಾಗುತ್ತದೆ.

ಸೊಪ್ಪು-ಕಾಯಿಗಳ ಹಸಿರು ಚರಗವನ್ನು ರೈತ ಮುಂಜಾನೆ ಜಮೀನು-ಬೆಳೆಗಳಿಗೆ ಬೀರಿ ಸಸ್ಯ, ಪ್ರಾಣಿ, ಪಕ್ಷಿಗಳಿಗೆ ನೀಡುತ್ತಾನೆ. ನಂತರ ಭೂಮಿಯೆಂದರೆ ನೆಲ, ನೆಲದ ಬೆಳೆಗಳಿಗೆ ಪೂಜೆ ಮಾಡಿ ಅಲ್ಲಿ ಕಡಬು-ಕಜ್ಜಾಯಗಳ ಥರಾವರಿ ಆಹಾರವನ್ನಿಟ್ಟು ನೈವೇದ್ಯ ಮಾಡಿ, ಎಡೆಹಾಕಿ, ತಾನೇ ತಿಂದು ಒಂದು ಎಡೆಯನ್ನು ಭೂಮಿಯಲ್ಲಿ ಹೂತು ಬೆಳೆ-ಭೂಮಿಯ ಬಯಕೆ ತೀರಿಸುತ್ತಾನೆ.

ಮುಂಜಾನೆ ಚರ ಬೀರುವಾಗ ಹಾಡು, ಘೋಷಣೆಯೊಂದಿಗೆ ಚರ ಬೀರುವ ರೈತ ನಂತರ ಭೂಮಿ-ಬೆಳೆಪೂ ಜೆಯ ನಂತರ ಎಡೆಯನ್ನು ನೀರು, ಕಾಗೆ ಗಳಿಗೆ ನೀಡುತ್ತಾನೆ. ಹೀಗೆ ಒಂದೆರಡು ವಾರಗಳ ಪೂರ್ವತಯಾರಿಯ ಹಬ್ಬಕ್ಕಾಗಿ ಬಿಡುವುಮಾಡಿಕೊಳ್ಳುವ ರೈತ ತಾನು ತಿಂದು, ಸಸ್ಯ, ಪ್ರಾಣಿ, ಪಕ್ಷಿಗಳಿಗೆ ತಿನ್ನಿಸಿ ಸಂಬ್ರಮಿಸುತ್ತಾನೆ. ಪ್ರದೇಶ, ಜನಾಂಗೀಯವಾರು ತುಸು ಭಿನ್ನತೆಯಿಂದ ಆಚರಿಸುವ ಈ ಹಬ್ಬ ಪ್ರಕೃತಿ, ಬೆಳೆ, ಮಳೆ,ಜಲ ಫಸಲು ಭರಿತ ಬೆಳೆಯ ಬಯಕೆ ತೀರಿಸುವ ಸೀಮಂತದ ಹಬ್ಬ. (-ಕನ್ನೇಶ್)

ಇವತ್ತು ಬೆಳಗ್ಗೆ ಭೂಮಿ ಹುಣ್ಣಿಮೆ ಎಂದು ಶಿಷ್ಟಭಾಷೆಯಲ್ಲಿ ಕರೆಯುವ, ಭೂಮಣ್ಣಿ ಹಬ್ಬ ಎಂದು ನಮ್ಮ ಮಾತಲ್ಲಿ ಹೇಳುವ ಅನ್ನ ಕೊಡುವ ಭೂಮಿಯನ್ನು ಪೂಜಿಸುವ ಹಬ್ಬ ಮುಗಿಸಿ ಕೂತಿರುವೆ.

ಸಂಜೆ ಇಳಿಬಿಸಿಲಿನ ಹೊತ್ತಲ್ಲಿ ಅವ್ವನ ಜೊತೆ ಲೋಕಾಭಿರಾಮ ಮಾತನಾಡುತ್ತಾ ಕುಳಿತವನಿಗೆ ನಿನ್ನೆ ರಾತ್ರಿ ಬೆಳಗಿನ ಜಾವದವರೆಗೆ ಹಬ್ಬದ ಅಡುಗೆ ಮಾಡಿದ ಅವ್ವ, ಬೇಗ ಊಟ ಮಾಡಿ ಮಲಗಾನ.. ಎಂದಾಗ ಭೂಮಣ್ಣಿ ಹಬ್ಬ ಎಂಬ ಮಣ್ಣಿನಮಕ್ಕಳ ಸಂಭ್ರಮದ ಮಜಲುಗಳು ಕಣ್ಣಮುಂದೆ ಬಂದುಹೋದವು.

ಹಾಗೆ ನೋಡಿದರೆ ನಿನ್ನೆಯಿಂದಲೇ ಈ ಹಬ್ಬದ ಕುರಿತು ಮಲೆನಾಡು ಮತ್ತು ಬಯಲುಸೀಮೆ ಕಡೆಯ ಗೆಳೆಯರು ಇಲ್ಲಿ ಸಾಕಷ್ಟು ಬರೆದಿದ್ದಾರೆ. ತಮ್ಮ ತಮ್ಮ ಕಡೆಯ ಹಬ್ಬದ ವೈಶಿಷ್ಟ್ಯಗಳ ಬಗ್ಗೆ ಸಂಭ್ರಮದಿಂದಲೇ ಎಲ್ಲ ಹಂಚಿಕೊಂಡಿದ್ದಾರೆ. ನಮ್ಮ ಸಾಗರ, ಸೊರಬ, ಹೊಸನಗರ, ತೀರ್ಥಹಳ್ಳಿ ಕಡೆಯಂತೂ ಬಹುತೇಕರ ವಾಟ್ಸಪ್ ಸ್ಟೇಟಸ್ ಮತ್ತು ಗುಂಪುಗಳಲ್ಲಿ ಭೂಮಣ್ಣಿ ಹಬ್ಬದ ಫೋಟೊ, ವಿಡಿಯೋ, ಶುಭಾಶಯ ಕಾರ್ಡುಗಳ ಹೊಳೆ ಹರಿದಿದೆ.

ಹಾಗಾಗಿ ಈ ನೆಲಮೂಲದ ಆಚರಣೆಯ ಕುರಿತ ಸಾಮಾನ್ಯ ಸಂಗತಿಗಳ ಬದಲು, ನಮ್ಮಲ್ಲಿ ನಾವು ಸಾಂಪ್ರದಾಯಿಕವಾಗಿ ರೂಢಿಯಲ್ಲಿರುವ ಕೆಲವು ನಿರ್ದಿಷ್ಟ ಆಚರಣೆಗಳ ಬಗ್ಗೆ ಹೇಳುವೆ;

ನಮ್ಮ ಮನೆಗಳಲ್ಲಿ ಈ ಹಬ್ಬದ ಅಚರಣೆ ಶುರುವಾಗುವುದು ಮಹಾನವಮಿ ದಿನದಿಂದಲೇ. ಮಹಾನವಮಿಗೆ ಮೂರ್ನಾಲ್ಕು ದಿನ ಇರುವಾಗಲೇ ಭೂಮಣ್ಣಿ ಬುಟ್ಟಿ ಎನ್ನುವ ಒಂದು ದೊಡ್ಡದು ಮತ್ತು ಒಂದು ಚಿಕ್ಕದು ಸೇರಿ ಎರಡು ಬುಟ್ಟಿಗಳಿಗೆ ಮೆಂತೆ ಹಿಟ್ಟು, ನ್ಯೂಸ್ ಪೇಪರ್ ಕಲಸಿಟ್ಟು ತುಸು ಕೊಳೆಸಿದ ಪೇಸ್ಟ್ ಮಾಡಿ ಬಳಿದು, ನಂತರ ಕೆಮ್ಮಣ್ಣು ಬಳಿದು ಒಣಗಿಸಿ ಚಿತ್ರ ಬರೆಯಲು ಸಜ್ಜುಗೊಳಿಸಿಡುತ್ತಾರೆ.

ಮಹಾನವಮಿಯ ದಿನ ಪೂಜೆ ಮಾಡಿದ ಬಳಿಕ ಆ ಜೋಡಿ ಬುಟ್ಟಿಗಳ ಮೇಲೆ ಹಸೆ ಚಿತ್ತಾರ ಮೂಡಿಸುತ್ತಾರೆ. ಸಾಮಾನ್ಯವಾಗಿ ನಮ್ಮಲ್ಲಿ ಎರಡು ಬಗೆಯ ಭೂಮಣ್ಣಿ ಬುಟ್ಟಿ ಬಳಕೆಯಲ್ಲಿದ್ದು, ಅವರವರ ಮನೆತನದ ಸಂಪ್ರದಾಯದಂತೆ ಕೆಮ್ಮಣ್ಣು ಬಳಿದ ಬುಟ್ಟಿಯ ಮೇಲೆ ಅಕ್ಕಿಹಿಟ್ಟಿನ ಬಿಳಿ ಬಣ್ಣದ ಚಿತ್ತಾರ ಬರೆಯುತ್ತಾರೆ. ಮತ್ತೆ ಕೆಲವರು ಕೆಮ್ಮಣ್ಣಿನ ಬುಟ್ಟಿ ಕ್ಯಾನವಾಸ್ ಮೇಲೆ ಗುಡ್ಡೆಗೇರು ಕಾಯಿ ರಸವನ್ನು ಬಳಸಿ ಕಪ್ಪು ಬಣ್ಣದಲ್ಲಿ ಚಿತ್ತಾರ ಮೂಡಿಸುತ್ತಾರೆ.

ಮಹಾನವಮಿಯಿಂದ ಭೂಮಿ ಹುಣ್ಣಿಮೆ ನಡುವಿನ ಐದು ದಿನದಲ್ಲಿ ಬುಟ್ಟಿ ಚಿತ್ತಾರ ಮುಗಿದು, ಹಬ್ಬದ ಹಿಂದಿನ ದಿನ ಬುಟ್ಟಿ ಸಿದ್ಧವಾಗಬೇಕು.

ಹಬ್ಬದ ಅಡುಗೆಗಳದ್ದೇ ಒಂದು ಬಹಳ ಕುತೂಹಕರ ಲೋಕ. ಕಾಡು ಗೆಣಸಿನಿಂದ ಹಿಡಿದು ಊರ ಅಮಟೆಕಾಯಿವರೆಗೆ ಭೂಮಣ್ಣಿ ಹಬ್ಬಕ್ಕೆ ಮಾಡಲೇಬೇಕಾದ ಅಡುಗೆಗಳ ಪಟ್ಟಿ ದೊಡ್ಡದಿದೆ.

ಒಂಥರಾ ಆಧುನಿಕ ಮಂಚೂರಿಯನ್ ಹೋಲುವ ಅಮಟೆಕಾಯಿ ಪಲ್ಯದ ರುಚಿಯೇ ಅದ್ಭುತ. ಬೆಳೆದ ಅಮಟೆಕಾಯನ್ನು ಗೊರಟುಸಹಿತ ಕೊಚ್ಚಿ ಚಿಕ್ಕ ಚೂರು ಮಾಡಿ ಅದಕ್ಕೆ ಬೆಲ್ಲ, ಹಸಿಮೆಣಸು, ಕಾರದಪುಡಿ ಹಾಕಿ ಮಾಡುವ ಅದು ಸಿಹಿ ಹುಳಿ ಕಾರ ಮಿಶ್ರಿತ ಕಟ್ಟಾಮೀಠಾ ರುಚಿ. ಭೂತಾಯಿ ಪೂಜಾ ಎಡೆಗೆ ಹಾಕಿದ ಮೇಲೆ ಸುಮಾರು ಹದಿನೈದು ಇಪ್ಪತ್ತು ದಿನ ಇದರ ರುಚಿ ಸವಿಯುವ ಮಜಾನೇ ಬೇರೆ.

ಹಾಗೇ ಕಾಡಿನಲ್ಲಿ ಸಿಗುವ ನೂರೆ ಗೆಣಸು ಕೂಡ ಎಡೆ ಮಾಡುವುದು ವಾಡಿಕೆ. ಹಾಗಾಗಿ ಮಲೆನಾಡಿನ ಬೇಲಿಸಾಲಲ್ಲಿ ಈ ಗೆಣಸಿನ ಮೊದಲ್ಲೆಲ್ಲ ಅಭಯವಿತ್ತು. ಈಗ ಎಲ್ಲೆಡೆ ತಂತಿ ಮತ್ತು ಐಬೆಕ್ಸ್ ಬೇಲಿ ಬಂದು ಅದೂ ಅಪರೂಪವಾಗಿದೆ.

ಮತ್ತೊಂದು ವಿಶಿಷ್ಟ ಖಾದ್ಯ, ಸೌತೆಕಾಯಿ ಮತ್ತು ಚೀನಿಕಾಯಿ ಕರೆಯುವ ಚಿನ್ನಿಕಾಯಿ ಕಡುಬು. ಅವರೆಡೂ ಈ ಹಬ್ಬಕ್ಕೆ ಬೇಕು. ಸೌತೆ ಕಾಯಿ ಕಡುಬು ಒಂದಕ್ಕೆ ಸಾಕಷ್ಟು ತುಪ್ಪ ಹಾಕಿ, ಬಾಳೆ ಎಲೆಯಲ್ಲಿ ಸುತ್ತಿ, ನೀರು ಒಳಹೋಗದಂತೆ ಭದ್ರಪಡಿಸಿ, ಸಸಿ ಪೂಜೆ(ಭೂಮಿ ಪೂಜೆ) ಬಳಿಕ ಅದನ್ನು ಹಸಿ ಭತ್ತದ ಗದ್ದೆಯ ಕೆಸರಲ್ಲಿ ಹೂತಿಟ್ಟು ಗುರುತು ಮಾಡುತ್ತಾರೆ. ಗದ್ದೆ ಕೊಯ್ಲು ಮುಗಿದ ಬಳಿಕ ಮಾಡುವ ಭೂತನಹಬ್ಬ(ಗೊಣಬೆ-ಬಣವೆ ಪೂಜೆ) ಹಬ್ಬದ ದಿನ ಆ ಹೂತಿಟ್ಟ ಕಡುಬು ತೆಗೆದು ನೈವೇಧ್ಯ ಮಾಡುತ್ತಾರೆ.

ಇನ್ನು ಸೌತೆಕಾಯಿ ಪಚಡಿ ಸೇರಿದಂತೆ ಏಳು ಬಗೆಯ ತರಕಾರಿ ಪಲ್ಯ, ನೂರೆಂಟು ಸೊಪ್ಪು, ಅಮಟೆಕಾಯಿ ಹಾಕಿದ ಹಚ್ಚಂಬ್ಲಿ(ಬೆರೆಕೆಸೊಪ್ಪಿನ ಪಲ್ಯ), ಹೋಳಿಗೆ ಮತ್ತಿತರ ನಾಲ್ಕಾರು ಬಗೆಯ ಸಿಹಿ, ಕೊಟ್ಟೆ ಕಡುಬು ಇವೆಲ್ಲಾ ಮಾಡಲೇಬೇಕಾದ ಭೂತಾಯಿಯ ಬಯಕೆಯ ಪದಾರ್ಥಗಳು.

ಹಾಗಾಗಿ ಭೂಮಿ ಮತ್ರು ಭೂಮಿ ಮಕ್ಕಳಾದ ರೈತರ ನಡುವಿನ ವಿಶೇಷ ಕಕ್ಕುಲತೆಯ, ಕಳ್ಳುಬಳ್ಳಿಯ ಹಬ್ಬಕ್ಕೆ ಭೂಮಿಯ ಒಡಲಲ್ಲಿ ಬೆಳೆಯುವ, ಮನುಷ್ಯ ತಿನ್ನಬಹುದಾದ ಬಹುತೇಕ ಎಲ್ಲಾ ಸೊಪ್ಪು, ತರಕಾರಿ, ಗೆಡ್ಡೆಗೆಣಸುಗಳು ಆಕೆಗೆ ಪೂಜೆಗೆ ಪರಮಾನ್ನ. ಭೂತಾಯಿ ಮಕ್ಕಳ ಕಲಾ ನೈಪುಣ್ಯತೆ, ಅಡುಗೆ ಪರಿಣತಿ, ಭೂಮಿಯೊಂದಿಗಿನ ಅವರ ತಾಯಿಮಕ್ಕಳ ಅನುಬಂಧಕ್ಕೆ ಈ ಹಬ್ಬ ಒಂದು ನಿದರ್ಶನ..

#ಶಶಿ_ಸಂಪಳ್ಳಿ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *