ಹೊರನಾಡ ಕನ್ನಡ ಕುಟುಂಬ

ಕನೆಟಿಕಟ್ ಕುರಿತ ಬಹಗಳಲ್ಲಿ ಇದನ್ನ ಎರಡನೇಯದಾಗಿ ಪೋಸ್ಟ್ ಮಾಡುವ ಯೋಚನೆ ಮಾಡಿದ್ದೆ. ಆದರೆ ಇಂದು ರಾಜ್ಯೋತ್ಸವವಾದ ಕಾರಣ ಇದನ್ನೇ ಮೊದಲು ಹಾಕುತ್ತಾ ಇದ್ದೇನೆ.

ಕರ್ನಾಟಕದ ಹೊರಗೆ ಇದುವರೆಗೂ ನಾನು ಸುಮಾರು ಆರು ವರ್ಷಗಳನ್ನ ಕಳೆದಿದ್ದೇನೆ. ನಾವು ಊರ ಹೊರಗಾಗಲೀ ಅಥವಾ ನಾಡ ಹೊರಗಾಗಲೀ ಇದ್ದಾಗ ಅತೀ ಹೆಚ್ಚು ನಮ್ಮನ್ನ ಕಾಡುವುದು ನಮ್ಮ ಭಾಷೆ. ಅದರಲ್ಲೂ ಹೊಸದಾಗಿ ಹೋದಾಗ ಒಂದು ರೀತಿಯ ಅನಾಥ ಪ್ರಜ್ಞೆ ನಮ್ಮನ್ನ ಕಾಡುತ್ತದೆ. ಹೀಗಿರುವಾಗ ನಮ್ಮ ನುಡಿ ಕೇಳಿದಾಗ ಆಗುವ ಸಂತೋಷವೇ ಬೇರೆ. ಕನ್ನಡವನ್ನು, ಅದರಲ್ಲೂ ಹವಿಗನ್ನಡವನ್ನೋ ಅಥವಾ ಸಿದ್ದಾಪುರದ ಸ್ಥಳೀಯ ಕನ್ನಡವನ್ನೋ ಕೇಳಿದಾಗ ನನಗೆ ಸ್ವರ್ಗ ಸಿಕ್ಕಷ್ಟೇ ಖುಷಿಯಾಗುತ್ತದೆ.

ಮುಂಬೈಯಲ್ಲಿ ದಕ್ಷಿಣ ಕನ್ನಡಿಗರನ್ನ ಬಿಟ್ಟಿರೆ, ಉಳಿದೆಡೆ ಕನ್ನಡಿಗರು ದೊಡ್ಡ ಪ್ರಮಾಣದಲ್ಲಿ ತಮ್ಮ ಛಾಪನ್ನ ಮೂಡಿಸಿದ್ದು. ತಮ್ಮ ಅಸ್ಮಿತೆಯನ್ನ ಉಳಿಸಿಕೊಂಡು ಒಂದು ಸಮುದಾಯವಾಗಿ ರೂಪುಗೊಂಡಿದ್ದು ಕಡಿಮೆ. ಹೊರದೇಶಗಳಲ್ಲೂ ಮಲಯಾಳಿಗಳಿಗೆ, ತೆಲುಗರಿಗೆ, ಗುಜರಾತಿ ತಮಿಳು ಪಂಜಾಬಿಗಳಿಗೆ ಹೋಲಿಸಿದರೆ ಸಂಖ್ಯಾತ್ಮಕವಾಗಿ ನಾವಲ್ಲಿ ಬಹಳ ಚಿಕ್ಕವರು (ಸ್ವಲ್ಪ ಮಟ್ಟಿಗೆ ಕೊಲ್ಲಿ ದೇಶಗಳು ಇದಕ್ಕೆ ಅಪವಾದ). ಆದರೂ ಅನೇಕ ಕನ್ನಡ ಕನ್ನಡಿಗರ ಸಂಘಟನೆಗಳು ಉತ್ತಮ ಕಾರ್ಯ ಮಾಡುತ್ತಿವೆ.

ನಾಡಿನ ಹೊರಗಿದ್ದಾಗ ಕಾರಣಾಂತರಗಳಿಂದ ಅಲ್ಲಿನ ಸ್ಥಳೀಯ ಕನ್ನಡ ಕೂಟಗಳಲ್ಲಿ ಕೆಲಸ ಮಾಡೋ ಕಿಂಚಿತ್ ಅವಕಾಶವೂ ಸಿಕ್ಕಿರಲಿಲ್ಲ. ಆ ಬೇಸರವನ್ನು ನೀಗಿಸಿದ್ದು ಕನೆಟಿಕಟ್. ಅಲ್ಲಿನ ‘ಹೊಯ್ಸಳ ಕನ್ನಡ ಕೂಟ’ವು ಬಹಳ ಆಪ್ತವಾಗಿತ್ತು, ಕನಿಷ್ಟ ಒಂದು ದಿನವಾದರೂ ಚೂರು ಕೆಲಸ ಮಾಡೋ ಅವಕಾಶ ಸಿಕ್ಕಿತ್ತು.

ಇದು ಚಿಕ್ಕ ರಾಜ್ಯವಾದ ಕಾರಣ ಇಡೀ ರಾಜ್ಯಕ್ಕೆ ಇಲ್ಲಿರುವುದು ಒಂದೇ ಕನ್ನಡ ಕೂಟ. ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುವ ಕೂಟಗಳಲ್ಲಿ ಒಂದು. ಈ ರಾಜ್ಯದಲ್ಲಿ ನೆಲೆಸಿರುವ ನಮ್ಮೂರ ಅಕ್ಕನ ಮೂಲಕ ಮೊದಲ ಬಾರಿಗೆ ಕೂಟದ ಸಂಪರ್ಕವಾಯಿತು. ಯುಗಾದಿಯ ಸಂಭ್ರಮಕ್ಕೆ ಅತಿಥಿಯಾಗಿ ಬಂದವರು ಪ್ರವೀಣ್ ಗೋಡ್ಕಿಂಡಿ. ಕಾರ್ಯಕ್ರಮ ಬಹಳ ಅಚ್ಚುಕಟ್ಟಾಗಿತ್ತು. ಸುಮಾರು ೫೦೦ ರ ಮೇಲೆ ಜನರಾಗಿದ್ದರೂ ಹೊಸಬರನ್ನ ಥಟ್ಟನೆ ಗುರುತಿಸಿ ಪರಿಚಯ ಮಾಡಿಕೊಂಡ ಕೂಟದ ನಾಯಕತ್ವದ ನಡೆ ಬಹಳ ಇಷ್ಟವಾಗಿತ್ತು.‌ ಒಂಥರಾ ಮನೆಗೆ ಹೊಸದಾಗಿ ಬಂದ ಅತಿಥಿಗಳ ಸ್ವಾಗತಿಸುವ ಹಾಗೇ. ಅಲ್ಲಿದ್ದಷ್ಟು ಕಾಲವು ಒಂದೂ ಕಾರ್ಯಕ್ರಮ ತಪ್ಪದಂತೆ ಹೋಗಲು ಕಾರಣವೂ ಕನ್ನಡ ಕೂಟದ ಪದಾಧಿಕಾರಿಗಳೇ.

ಕನ್ನಡಿಗರನ್ನ ಸಾಂಸ್ಕೃತಿಕವಾಗಿ ಒಂದಾಗಿಡಲು ಮತ್ತು ಪರಸ್ಪರ ಬೆರೆಯಲು ಯುಗಾದಿ, ದಸರಾ/ದೀಪಾವಳಿ, ಹೇಮಂತಗಾನ, ಪಿಕ್‌ನಿಕ್ ಮುಂತಾದ ಕಾರ್ಯಕ್ರಮಗಳನ್ನ ಆಯೋಜಿಸುತ್ತಾರೆ. ಕರ್ನಾಟಕದ ವಿವಿಧ ಪ್ರದೇಶ, ಸಮುದಾಯ, ಉಪಭಾಷೆಗಳಿಂದ ಬಂದ ಜನರು ಕೇವಲ ಕನ್ನಡದ ಹೆಸರಿನಲ್ಲಿ ಒಂದುಗೂಡುತ್ತಾರೆ. ಅಲ್ಲೇ ನೆಲೆ ನಿಲ್ಲುವ ಮುಂದಿನ ಪೀಳಿಗೆ ಕನ್ನಡತನದಿಂದ ದೂರ ಸರಿಯದಿರಲು ವಾರಾಂತ್ಯದ ಕನ್ನಡ ತರಗತಿಗಳ ನಡೆಸುತ್ತಾರೆ, ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ.

ನಾಳೆ ನೀವು ಕನೆಟಿಕಟ್ಟಿಗೆ ಹೋದರೆ ನೀವಾಗೆ ಅವರ ಸಂಪರ್ಕಿಸಲು ಕಾಯೋಲ್ಲ. ಅವರೇ ನಿಮ್ಮನ್ನ ಹುಡುಕಿ ಕರೆಮಾಡಿ ಏನಾದರೂ ಸಹಾಯ ಬೇಕೇ ಎಂದು ಕೇಳುತ್ತಾರೆ. ನಾವು ನಮ್ಮ ನಾಡ ಹೊರಗಿದ್ದಾಗ ಇರಬೇಕಾಗಿದ್ದು ಕೂಡಾ ಹೀಗೆಯೇ. ಕನ್ನಡಿಗರೆಲ್ಲ ಒಂದು ಕುಟುಂಬವಾಗಿ.

  • ಪಟದಲ್ಲಿರುವುದು ಇಲ್ಲಿನ ಕನ್ನಡ ಕೂಟದ ಸಾಂಸ್ಕೃತಿಕ ಕಾರ್ಯಕ್ರಮದ ಒಂದು ದೃಷ್ಯ.

ನಾನುನೋಡಿದಸ್ಟೇಟುಗಳು #ಕನೆಟಿಕಟ್

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *