ಬೀದಿಗೆ ಬಿತ್ತು ಜೆಡಿಎಸ್ ದಾಯಾದಿ ಕಲಹ!ಕುಟುಂಬ ರಾಜಕಾರಣದ ಮಾದರಿಗೆ ಮಸಿ?

ಉಪಚುನಾವಣೆ ಫಲಿತಾಂಶದ ಮೇಲೆ ಎಫೆಕ್ಟ್!ಶಿರಾ ಮತ್ತು ಆರ್ ಆರ್ ನಗರ ಉಪಚುನಾವಣೆ ಜೆಡಿಎಸ್ ಗೆ ನಿರ್ಣಾಯಕವಾಗಿದೆ. ಆದರೆ ಇದೇ ಹೊತ್ತಲ್ಲಿ ಜೆಡಿಎಸ್ ಕೌಟುಂಬಿಕ ಕಲಹ
ಬಹಿರಂಗಗೊಂಡಿದೆ. ದಶಕಗಳಿಂದಲೂ ಕುಮಾರಸ್ವಾಮಿ ಮತ್ತು ಎಚ್ ಡಿ ರೇವಣ್ಣ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

nkhil and Hd Kumaraswamy

ಬೆಂಗಳೂರು: ಶಿರಾ ಮತ್ತು ಆರ್ ಆರ್ ನಗರ ಉಪಚುನಾವಣೆ ಜೆಡಿಎಸ್ ಗೆ ನಿರ್ಣಾಯಕವಾಗಿದೆ. ಆದರೆ ಇದೇ ಹೊತ್ತಲ್ಲಿ ಜೆಡಿಎಸ್ ಕೌಟುಂಬಿಕ ಕಲಹ ಬಹಿರಂಗಗೊಂಡಿದೆ. ದಶಕಗಳಿಂದಲೂ ಕುಮಾರಸ್ವಾಮಿ ಮತ್ತು ಎಚ್ ಡಿ ರೇವಣ್ಣ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.  ಆದರೆ ಭಾನುವಾ ಶಿರಾ ಉಪಚುನಾವಣೆ ಪ್ರಚಾರದ ವೇಳೆ ದಾಯಾದಿ ಕಲಹ ಬೀದಿಗೆ ಬಿದ್ದಿದೆ.

ಭಾನುವಾರ ನಡೆದ ರ್ಯಾಲಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವೇದಿಕೆಯಲ್ಲಿದ್ದ ಎಲ್ಲಾ ಗಣ್ಯರ ಹೆಸರನ್ನು ಪಟ್ಟಿ ಮಾಡಿ ಹೇಳಿದರು, ಆದರೆ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರ ಹೆಸರನ್ನು ಹೇಳಲಿಲ್ಲ, ಇದರಿಂದ ಆಕ್ರೋಶಗೊಂಡ ರೇವಣ್ಣ ಬೆಂಬಲಿಗರು, ವೇದಿಕೆ ಮೇಲೆ ಹತ್ತಿ ಮೈಕ್ ಕಸಿದುಕೊಂಡು ಕೆಲಕಾಲ ಗೊಂದಲ ಸೃಷ್ಠಿಸಿದರು, ನಂತರ ರೇವಣ್ಣ ಅವರನ್ನು ಸಮಾಧಾನ ಪಡಿಸಿದರು. ಘಟನೆಗೆ ಸಂಬಂಧಿಸಿದಂತೆ ನಿಖಿಲ್ ಕ್ಷಮೆ ಕೋರಿದ್ದಾರೆ. ಇದು ಉದ್ದೇಶಪೂರ್ವಕವಲ್ಲ,
ಬಾಯ್ತಪ್ಪಿನಿಂದ ಆಗಿರುವುದು ಎಂದು ಜೆಡಿಎಸ್ ವಕ್ತಾರ ಟಿ.ಎ ಶರವಣ ಹೇಳಿದ್ದಾರೆ. 

2018ರ ವಿಧಾನಸಭೆ ಚುನಾವಣೆಯಲ್ಲಿ ಪ್ರಜ್ವಲ್ ಆರ್ ಆರ್ ನಗರ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದರು. ಆದರೆ ಟಿಕೆಟ್ ನೀಡಲಿಲ್ಲ, ಆದರೆ ಇದೇ ವೇಳೆ ನಿಖಿಲ್ ಗೆ ಮಂಡ್ಯ ಲೋಕಸಭಾ ಚುನಾವಣೆ ಟಿಕೆಟ್ ನೀಡಲಾಯಿತು. ರಾಜ್ಯದ ಪ್ರಮುಖ ಪಕ್ಷವಾದ ಜೆಡಿಎಸ್ ಎರಡು ಕುಟುಂಬಗಳ ಮಧ್ಯೆ ಇರುವ ಬಿರುಕು ಆಗಲೇ ಕಾಣಿಸಿಕೊಂಡಿತ್ತು.

ಪ್ರಜ್ವಲ್ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರ ನಿಖಿಲ್ ಸೋತರು,. ರೇವಣ್ಣ ಕುಮಾರಸ್ವಾಮಿಗಿಂತ ಹಿರಿಯರು, ಆದರೆ ಎರಡು ಬಾರಿ ಸಿಎಂ
ಆಗುವ ಮೂಲಕ ಕುಮಾರಸ್ವಾಮಿ ರೇವಣ್ಣ ಅವರಿಗೆ ಮುಜುಗರ ಉಂಟು ಮಾಡಿದರು, ಈಗ ಸದ್ಯ ಎರಡು ಕುಟುಂಬಗಳ ನಡುವಿನ ತಿಕ್ಕಾಟ ಆರ್ ಆರ್ ನಗರ ಮತ್ತು ಶಿರಾ ಉಪ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಸೋತನಂತರ ಎರಡು ಕುಟುಂಬಗಳು ಪರಸ್ಪರ ನಿಂದಿಸಿಕೊಂಡಿದ್ದು ಜನರಿಗೆ ತಿಳಿದಿತ್ತು.  ಇದರ ಜೊತೆಗೆ ರೇವಣ್ಣ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೆ ಆಪ್ತ ರಾಗಿದ್ದು ಮಾಜಿ ಪಿಎಂ ದೇವೇಗೌಡ ಮತ್ತು ಕುಮಾರಸ್ವಾಮಿ ಅವರಿಗೆ ಮುಜುಗರಕ್ಕೆ ಕಾರಣವಾಯಿತು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *