the week- ಈ ವಾರದ ಸುದ್ದಿ-ಚಿತ್ರ ವಿಶೇಶ

ಕನ್ನಡ ನಾಡಲ್ಲಿ ಹುಟ್ಟಿದ್ದೇ ನಮ್ಮ ಪುಣ್ಯ -ವಸಂತ ನಾಯ್ಕ
ಸಿದ್ದಾಪುರ-
ನಮ್ಮ ಕನ್ನಡ ನಾಡು ಸಂಪತ್ಭರಿತವಾಗಿದೆ. ಈ ಕರುನಾಡಲ್ಲಿ ನಾವು ಹುಟ್ಟಿದ್ದು ನಮ್ಮ ಪುಣ್ಯ ನಾಡು-ನುಡಿ ನೆಲಜಲದ ಸಮಸ್ಯೆಯುಂಟಾದಾಗ ನಾವು ಕನ್ನಡಿಗರೆಲ್ಲ ಒಗ್ಗಟ್ಟಾಗಿ ಹೋರಾಡೋಣ ಹಾಗೂ ಸದಾ ಎಚ್ಚರವಹಿಸೋಣ.ಕನ್ನಡದ ಮೇರು ಗಾಯಕ ಡಾ.ಎಸ್ಪಿಬಿ.ಕವಿ ನಿಸಾರ್ ಅಹಮ್ಮದ್,ಖ್ಯಾತ ಸಂಗೀತ ನಿರ್ದೇಶಕ ರಾಜನ್ ಕನ್ನಡ ನಾಡಿಗೆ ಅಮೂಲ್ಯವಾದ ಕೊಡುಗೆಗಳನ್ನು ನೀಡಿ ಅಮರರಾಗಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿಯ ತಾಲೂಕಾಧ್ಯಕ್ಷರಾದ ವಸಂತ ಎಲ್.ನಾಯ್ಕ ಮನಮನೆ ಹೇಳಿದರು.

ಅವರು ಸ್ಥಳೀಯ ಯಶಸ್ವೀ ಸುಮಧುರ ಸಂಗೀತ ತಂಡ ಹಾಳದಕಟ್ಟಾದ ಜಗದ್ಗುರು ಶ್ರೀ ಮುರುಘರಾಜೇಂದ್ರ ಅಂಧರ ಶಾಲೆಯ ದಿ.ಡಾ.ಮಧುಸೂದನ ಶಾಮೈನ್ ವೇದಿಕೆಯಲ್ಲಿ ಕರುನಾಡ ತಾಯಿ ಸದಾ ಚಿನ್ಮಯಿ ಕನ್ನಡ ರಾಜ್ಯೋತ್ಸವ ಹಾಗೂ ನಮ್ಮನ್ನಗಲಿದ ಡಾ. ಎಸ್ಪಿಬಿ ಡಾ. ಕೆ.ಎಸ್. ನಿಸಾರ್ ಅಹಮ್ಮದ್‍ ದಿ.ರಾಜನ್‍ರಿಗೆ ಗೀತನಮನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ ತಾಲೂಕ ಪಂಚಾಯತ ಸದಸ್ಯ ನಾಸೀರ್ ಖಾನ್ ನೆಜ್ಜೂರು ಮಕ್ಕಳನ್ನು ಅವರ ಪೋಷಕರು ಕನ್ನಡ ಮಾಧ್ಯಮ ಶಾಲೆಗಳಿಗೆ ಕಳಿಸದೇ ಇಂಗ್ಲೀಷ್ ಮಾಧ್ಯಮ ಶಾಲೆಗೆ ಕಳಿಸುತ್ತಿದ್ದಾರೆ. ಕನ್ನಡವೇ ಉಸಿರಾಗಿರುವ ನಮಗೆ ಮುಂದಿನ ದಿನಗಳಲ್ಲಿ ಕನ್ನಡಕ್ಕೆ ಹೆಚ್ಚಿನ ಪ್ರಾಧಾನ್ಯ ನೀಡೋಣ ಕನ್ನಡ ಉಳಿವಿಗಾಗಿ ಶ್ರಮಿಸೋಣ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಣಧೀರಪಡೆಯ ಉ.ಕ. ಜಿಲ್ಲಾಧ್ಯಕ್ಷ ಹೇಮಂತ ನಾಯ್ಕ ಕನ್ನಡ ನಾಡು-ನುಡಿ ನೆಲಜಲಕ್ಕಾಗಿ ನಮ್ಮ ಹೋರಾಟ ಅವಿರತವಾಗಿರಲಿ. ಮುಂದಿನ ಯುವಪೀಳಿಗೆ ಕನ್ನಡ ನಾಡು ನುಡಿಗಾಗಿ ತಮ್ಮ ಅತ್ಯಮೂಲ್ಯ ಕೊಡುಗೆ ನೀಡುವಂತಾಗಲಿ ಎಂದರು.
ಪ್ರಾರಂಭದಲ್ಲಿ ನಮನ್ನಗಲಿದ ಮಹಾನ್ ಗಾಯಕ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ನಿತ್ಯೋತ್ಸವ ಕವಿ ನಾಡೋಜ ಡಾ.ಕೆ.ಎಸ್.ನಿಸಾರ್ ಅಹಮ್ಮದ್ ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇವರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು.
ವೆಂಕಟೇಶ ಕೊಂಡ್ಲಿ ಪ್ರಾರ್ಥಿಸಿದರು. ಅಸ್ಲಂ ಶೇಖ್ ಸ್ವಾಗತಿಸಿದರು, ಟಿ.ಕೆ.ಎಂ.ಆಜಾದ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶುೃತಿ ನಾಯ್ಕ ನಿರ್ವಹಿಸಿದರು. ರಾಘವೇಂದ್ರ ನಾಯ್ಕ ವಂದಿಸಿದರು. ಗಾಯಕಿ ಆಶಾಲಕ್ಷ್ಮೀ ಕೊಂಡ್ಲಿ, ಗಾಯಕರಾದ ನಾಸೀರ್ ಖಾನ್,ಮೊಹಮ್ಮದ್ ಅಜೀಮ್ ಶೇಖ್, ರಮೇಶ ಹೊಸಳ್ಳಿ, ವಾಸು ನಾಯ್ಕ ಗೋಳಗೋಡ, ಪ್ರಶಾಂತ ಬಳಗಾರ, ಡಾ. ಎಸ್.ಪಿ.ಬಿ. ಅವರ ಜನಪ್ರಿಯ ಗೀತೆಗಳನ್ನು ಹಾಡಿ ಜನಮನ ರಂಜಿಸುವಲ್ಲಿ ಯಶಸ್ವಿಯಾದರು.

ಸಾಧಕ ವಿದ್ಯಾರ್ಥಿಗೆ ಸನ್ಮಾನ- ಸ್ಥಳೀಯ ಪ್ರಶಾಂತಿ ಪ್ರೌಢಶಾಲೆಯ ವಿದ್ಯಾರ್ಥಿ, ಹಾಳದಕಟ್ಟಾ ವಾಜಪೇಯಿ ನಗರ ನಿವಾಸಿಯಾಗಿರುವ ಹಿಂದುಳಿದ ವರ್ಗದ ಕು. ಸುದೀಪ್ ಧರ್ಮಪ್ಪ ಭಂಡಾರಿ ಈ ಸಾಲಿನ ಎಸ್.ಎಸ್.ಎಲ್.ಸಿ.ಯಲ್ಲಿ ಶೇಕಡಾ 97.16 ರಷ್ಟು ಅಂಕಗಳಿಸಿ ಸಾಧನೆ ಮಾಡಿ ಶಾಲೆಗೆ ಹಾಗೂ ತಾಲೂಕಿಗೆ ಹೆಮ್ಮೆಯ ತಂದಿರುವುದಕ್ಕೆ ಕನ್ನಡ ರಾಜ್ಯೋತ್ಸವದ ಶುಭದಿನದಂದು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷರಾದ ಇಲಿಯಾಸ್ ಇಬ್ರಾಹಿಂ ಸಾಬ ಹಾಗೂ ನಾಡದೇವಿ ಜೈ ಭುವನೇಶ್ವರಿ ಅಭಿಮಾನಿ ಬಳಗದ ಪರವಾಗಿ ಕು.ಸುದೀಪ್ ಸ್ವಗೃಹಕ್ಕೆ ತೆರಳಿ ಶಾಲುಹೊದಿಸಿ ಫಲತಾಂಬೂಲದೊಂದಿಗೆ ಗೌರವಧನ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಳಗದ ಸದಸ್ಯರಾದ ಮೊಹಮ್ಮದ್ ಅಜೀಮ ಶೇಖ್, ಅಸ್ಲಂ ಶೇಖ್, ಟಿ.ಕೆ.ಎಂ. ಆಜಾದ್, ಧರ್ಮಪ್ಪ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.

ಹಾರ್ಸಿಕಟ್ಟಾ ಸುದ್ದಿ- ಸಿದ್ಧಾಪುರ ತಾಲೂಕಿನ ಹಾರ್ಸಿಕಟ್ಟಾದಲ್ಲಿ ಇಲ್ಲಿಯ ಯಕ್ಷತರಂಗಿಣಿ ಮತ್ತು ರಾಜ್ಯ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ತರಬೇತಿ ಕಾರ್ಯಾಗಾರ ಪ್ರಾರಂಭವಾಯಿತು. ಈ ಕಾರ್ಯಾಗಾರದಲ್ಲಿ ಯಕ್ಷಗಾನ ಅಕಾಡೆಮಿಯ ನಿರ್ಮಲಾ ಹೆಗಡೆ, ರವೀಂದ್ರ ಹೆಗಡೆ ಹಿರೇಕೈ, ಜಯಕುಮಾರ ಮೆಣಸಿ, ಎಸ್.ಆರ್. ಹೆಗಡೆ, ಲಕ್ಷ್ಮಣ ಜಿ. ನಾಯ್ಕ ಬೇಡ್ಕಣಿ ಪಾಲ್ಗೊಂಡಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *