ಸೂಪಾ ಹಿನ್ನೀರಿನ ‘ಸೂರ್ಯಾಸ್ತ ಪಾಯಿಂಟ್’ ತೆರೆಯುವಂತೆ ಹೆಚ್ಚಿದ ಬೇಡಿಕೆ

ಜೋಯಿಡಾದ ಬಾಪೆಲಿ ಕ್ರಾಸ್ ಸರ್ಕಲ್ ನಲ್ಲಿರುವ ಸುಪಾ ಅಣೆಕಟ್ಟು ಹಿನ್ನೀರಿನಲ್ಲಿ ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಸೂರ್ಯಾಸ್ತದ ಸ್ಥಳಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದ ನಂತರ ಉತ್ತರ ಕನ್ನಡ ಜಿಲ್ಲೆ ಪ್ರವಾಸೋದ್ಯಮಕ್ಕೆ ಮತ್ತೊಂದು ಹೊಡೆತ ಬಿದ್ದಿದೆ.

Supa dam

ಕಾರವಾರ: ಜೋಯಿಡಾದ ಬಾಪೆಲಿ ಕ್ರಾಸ್ ಸರ್ಕಲ್ ನಲ್ಲಿರುವ ಸುಪಾ ಅಣೆಕಟ್ಟು ಹಿನ್ನೀರಿನಲ್ಲಿ ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಸೂರ್ಯಾಸ್ತದ ಸ್ಥಳಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದ ನಂತರ ಉತ್ತರ ಕನ್ನಡ ಜಿಲ್ಲೆ ಪ್ರವಾಸೋದ್ಯಮಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಅಣೆಕಟ್ಟು ಸ್ಥಳಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ಜಿಲ್ಲಾ ಪೊಲೀಸರು ನಿರ್ಬಂಧಿಸಿ ನಿಷೇಧ ಹೇರಿದ್ದಾರೆ.

ಪ್ರವಾಸಿಗರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಲಾಗಿದೆ, ಲಾಕ್ ಡೌನ್ ನಂತರ ಪ್ರವಾಸೋದ್ಯಮ ಚಟುವಟಿಕೆಗಳು ಸಹಜ ಸ್ಥಿತಿಗೆ ಬರುತ್ತಿದ್ದು, ಪ್ರವಾಸಿಗರು ನಿಧಾನವಾಗಿ  ಹೋಮ್ ಸ್ಟೇ ಮತ್ತು ನೇಚರ್ ಕ್ಯಾಂಪ್ ಗಳತ್ತ ಬರುತ್ತಿದ್ದಾರೆ. 

ದಾಂಡೇಲಿ, ಜೊಯಿಡಾ, ಅಥವಾ ಗಂಡೇಶ್‌ಗುಡಿಗೆ ಭೇಟಿ ನೀಡುವ ಹಲವಾರು ಪ್ರವಾಸಿಗರು ಸುಪಾ ಅಣೆಕಟ್ಟು ಹಿನ್ನೀರಿನ ಸೂರ್ಯಾಸ್ತದ ಸ್ಥಳವನ್ನು ಬಯಸುತ್ತಿದ್ದಾರೆ. 

ಹಗಲಿನಲ್ಲಿ ಪ್ರವಾಸಿಗರು ಉಳವಿ ಮತ್ತು ಗಣೇಶಗುಡಿಯಲ್ಲಿ ವಾಟರ್ ಸ್ಪೋರ್ಟ್ ನಲ್ಲಿ ಕಾಲ ಕಳೆದು ಸಂಜೆ ಅವರು ಸೂರ್ಯಾಸ್ತದ ಸ್ಥಳಕ್ಕೆ ಭೇಟಿ ನೀಡಲು ಬಾಪೆಲಿ ಕ್ರಾಸ್‌ನಲ್ಲಿ ಸೇರುತ್ತಿದ್ದರು.

ಆದರೆ ಸದ್ಯ ನಿರ್ಬಂಧ ಹೇರಿರುವ ಕಾರಣ ಹೋಮ್ ಸ್ಟೇ ಮಾಲೀಕರು ಮಾಜಿ ಸಚಿವ ಆರ್ ವಿ ದೇಶಪಾಂಡೆ ಅವರನ್ನು ಭೇಟಿ ಮಾಡಿ ಮಧ್ಯ ಪ್ರವೇಶಿಸುವಂತೆ ಕೋರಲು ನಿರ್ಧರಿಸಿದ್ದಾರೆ.

 ಪ್ರವಾಸಿಗರಿಗೆ ಸೂರ್ಯಾಸ್ತದ ಸ್ಥಳಕ್ಕೆ ಭೇಟಿ ನೀಡಲು ಅವಕಾಶ ನೀಡುವಂತೆ ಕೋರಿ ಅವರು ಕೆಪಿಸಿಎಲ್‌ಗೆ ನಿಯೋಗವನ್ನು ಕರೆದೊಯ್ಯಲು ಯೋಜಿಸುತ್ತಿದ್ದು. ನಾವು ಅಧಿಕಾರಿಗಳನ್ನು ಭೇಟಿಯಾಗುತ್ತೇವೆ ಎಂದು ಕಾಳಿ ಪ್ರವಾಸೋದ್ಯಮ ಸಂಘದ ಅಧ್ಯಕ್ಷ ಸುನಿಲ್ ದೇಸಾಯಿ ತಿಳಿಸಿದ್ದಾರೆ.

ಅಣೆಕಟ್ಟು ಅಧಿಕಾರಿಗಳಿಂದ ಆದೇಶವಿದೆ ಮತ್ತು ಭಾರತದ ಇತರ ಜಲಾಶಯಗಳಲ್ಲಿ ಮಾಡಿದಂತೆ ಭದ್ರತಾ ಕಾರಣಗಳಿಗಾಗಿ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ಸ್ಪಷ್ಟಪಡಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *