ಕಾಡೆಮ್ಮೆ ಸಾವು- ನಾಟಕ, ಅಂಬಳಿಕೆಯಲ್ಲಿ ಈ ವರ್ಷ ವರ್ಷತೊಡಕಿನ ಪೂಜೆ ಇಲ್ಲ.

ಸಿದ್ಧಾಪುರ ತಾಲೂಕಿನ ಅರೆಂದೂರಿನಲ್ಲಿ ಕಾಡುಎಮ್ಮೆಯೊಂದರ ಶವ ಪತ್ತೆಯಾಗಿದ್ದು,ಸ್ಥಳಿಯ ಅರಣ್ಯಾಧಿಕಾರಿಗಳು ಅಂತಿಮವಿಧಿ ಪೂರೈಸಿದ್ದಾರೆ. 6 ವರ್ಷದ ಈ ಕಾಡೆಮ್ಮೆ ಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಸ್ಥಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಗಣೇಶ ಮಂಟಪದಲ್ಲಿ ರಂಗ ಸೌಗಂಧ ಸಿದ್ದಾಪುರ ದಿಂದ ಗಳೆಯರ ಬಳಗ ಹಾಗೂ ಗಜಾನನೋತ್ಸವ ಸಮಿತಿ ಆಶ್ರಯದಲ್ಲಿ ದೇವಿಯ ದೀವಿಗೆ ಐತಿಹಾಸಿಕ ನಾಟಕ ಮಂಗಳವಾರ ಪ್ರದರ್ಶನಗೊಂಡಿತು.
ಟಿಎಸ್‍ಎಸ್‍ನ ಮಾಜಿ ನಿರ್ದೇಶಕ ರವೀಂದ್ರ ಹೆಗಡೆ ಹಿರೇಕೈ ಕಾರ್ಯಕ್ರಮ ಉದ್ಘಾಟಿಸಿ ಕರೊನಾ ಮಾರಕ ಸಾಂಕ್ರಮಿಕ ರೋಗ ವಿಶ್ವದ ಎಲ್ಲ ಕಡೆ ಹರಡಿದ್ದರಿಂದ ವಿವಿಧ ಕಲಾ ಸಂಘಟನೆಗಳು ಹಾಗೂ ಕಲಾವಿದರು ಸಂಕಷ್ಟ ಅನುಭವಿಸುವಂತಾಗಿ ಈಗ ಸ್ವಲ್ಪ ಮಟ್ಟಿಗೆ ಉಸಿರಾಡುವಂತಾಗಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಜನರು ಪಾಲ್ಗೊಳ್ಳುವುದಕ್ಕೆ ಅವಕಾಶ ಇಲ್ಲದ್ದರಿಂದ ಇಂದಿನ ತಾಂತ್ರಿಕ ದಿನದ ಉಪಯೋಗದ ಮೂಲಕ ನಾಟಕವನ್ನು ಲೈವ್ ಆಗಿ ನೋಡುವುದಕ್ಕೆ ಅವಕಾಶ ನೀಡಿರುವುದು ಪ್ರಸ್ತುತ ದಿನದಲ್ಲಿ ಅತ್ಯವಶ್ಯವಾಗಿದೆ.ರಂಗ ಸೌಗಂಧ ತಂಡ ಪ್ರತಿ ವರ್ಷ ಉತ್ತಮ ನಾಟಕ ಆಯ್ದುಕೊಂಡು ಪ್ರದರ್ಶನ ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಅವರು ಹೇಳಿದರು.
ಅಘನಾಶಿನಿ ಸಾಂಬಾರು ಮಂಡಳಿ ಅಧ್ಯಕ್ಷ ಎಸ್.ಆರ್.ಹೆಗಡೆ ಕುಂಬಾರಕುಳಿ,ವರ್ತಕ ಅನಂತ ಶಾನಭಾಗ ಉಪಸ್ಥಿತರಿದ್ದರು. ನಂತರ ರಂಗಸೌಗಂಧ ತಂಡದವರಿಂದ ಎಸ್.ವಿ.ಹೆಗಡೆ ಮಗೇಗಾರ ರಚನೆಯ ಗಣಪತಿ ಹೆಗಡೆ ಹುಲಿಮನೆ ನಿರ್ದೇಶನದ ದೇವಿಯ ದೀವಿಗೆ ನಾಟಕ ಪ್ರದರ್ಶನಗೊಂಡಿತು. ರಂಗದಲ್ಲಿ ಗಣಪತಿ ಹೆಗಡೆ ಗುಂಜಗೋಡ, ರಾಜಾರಾಮ ಭಟ್ಟ ಹೆಗ್ಗಾರಳ್ಳಿ, ನಾಗಪತಿ ಭಟ್ಟ ವಡ್ಡಿನಗದ್ದೆ, ಅಜಿತ್ ಭಟ್ಟ ಹೆಗ್ಗಾರಳ್ಳಿ, ರಾಮ ಅಂಕೋಲೇಕರ, ಪ್ರವೀಣಾ ಹೆಗಡೆ ಗುಂಜಗೋಡ, ಶಮಂತ ಶಿರಳಗಿ,ಐ.ಕೆ.ಸುಂಗೊಳ್ಳಿಮನೆ,ಕು.ಪ್ರಥಮ ರಾಜು ಭಟ್ಟ,ಕು.ದೀಕ್ಷಾ ಹೆಗಡೆ, ಕು.ಪಂಚಮಿ ಎನ್.ಭಟ್ಟ, ಕು.ಶಕ್ತಿಧರ ಯು.ಭಟ್ಟ, ಕು.ಮಾನಸ ಹೆಗಡೆ, ಕು.ಸಂಪತ್ ಡಿ.ಭಟ್ಟ ಇವರು ವಿವಿಧ ಪಾತ್ರ ನಿರ್ವಹಿಸಿದರು.
ಶ್ರೀಪಾದ ಹೆಗಡೆ ಕೋಡನಮನೆ ವಿನ್ಯಾಸ,ರಾಜೇಂದ್ರ ಕೊಳಗಿ,ಜಯರಾಮ ಭಟ್ಟ ಹೆಗ್ಗಾರಳ್ಳಿ ಸಂಗೀತ, ನಾಗರಾಜ ಭಂಡಾರಿ ಹಾಗೂ ಉದಯ ಶಿರಸಿ ಇವರು ಧ್ವನಿ ಹಾಗೂ ಬೆಳಕಿನಲ್ಲಿ ಸಹಕರಿಸಿದರು.
ಶ್ರೀಪಾದ ಹೆಗಡೆ ಹಾಗೂ ರಂಗನಿರ್ದೇಶಕ ಗಣಪತಿ ಹೆಗಡೆ ಹುಲಿಮನೆ ನಿರ್ವಹಿಸಿದರು.

ಅಂಬಳಕೆಯಲ್ಲಿ ಪೂಜೆ ಇಲ್ಲ- ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕ ಹುಕ್ಕಳಿ ಹಾಗೂ ಬೇಡ್ಕಣಿ ಗೌಡರ ಕುಟುಂಬದವರು ಸಾರ್ವಜನಿಕ ಭಕ್ತಾದಿಗಳಿಗೆ ತಿಳಿಸುವುದೇನೆಂದರೆ,
ಪ್ರತಿ ದೀಪಾವಳಿ ನಂತರ ವರುಷದೊಡಕು ಹಬ್ಬದ ದಿನ ಅಂಬಳಕೆ (ಮಿಣಸಿ ಕ್ರಾಸ್ ಹತ್ತಿರ) ಶ್ರೀ ಬಸವಣ್ಣ ದೇವಸ್ಥಾನದಲ್ಲಿ ಪ್ರತಿ ವರ್ಷ ಸದ್ರಿ ದಿವಸ ನಮ್ಮ ಕುಟುಂಬದವರು ಅನಾದಿ ಕಾಲದಿಂದ ಪೂಜೆ ಸಲ್ಲಿಸಿ ಪ್ರಸಾದ ವಿತರಿಸುವ ಕಾರ್ಯಕ್ರಮವನ್ನು ಮಾಡಿಕೊಂಡು ಬರುತ್ತಿದ್ದೇವೆ. ಈ ಪೂಜೆಗೆ ತಾಲೂಕಿನ ಭಕ್ತಾಧಿಗಳಲ್ಲದೆ ಹೊರ ಜಿಲ್ಲೆಯಿಂದ ಸಹ ಹೆಚ್ಚಿನ ಭಕ್ತರು ಆಗಮಿಸುತ್ತಿದ್ದಾರೆ. ಆದರೆ ಈ ವರ್ಷ ಎಲ್ಲೆಡೆ ಕರೋನಾ ಸೋಂಕು ಹಬ್ಬುತ್ತಿರುವುದರಿಂದ ಇಂತಹ ಜನ-ಜಾತ್ರೆ ಮಾಡುವುದು ಸರಿಯಲ್ಲ ಎಂತಾ ಸರ್ಕಾರದ ಆದೇಶ ಇರುವುದರಿಂದ ಸಾಮಾಜಿಕ ಅಂತರ ಕಾಪಾಡುವುದು ಕಷ್ಟ ಸಾಧ್ಯ ಎಂತಾ ತಿಳಿದು, ಹುಕ್ಕಳಿ ಹಾಗೂ ಬೇಡ್ಕಣಿ ಗೌಡರ ಕುಟುಂಬದಿಂದ ಆಚರಿಸುತ್ತಿದ್ದ ಈ ಪೂಜಾ ಕಾರ್ಯಕ್ರಮವನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ರದ್ದುಪಡಿಸಿರುತ್ತೇವೆ. ಕಾರಣ ಭಕ್ತಾಧಿಗಳು ಸಹಕರಿಸಬೇಕಾಗಿ ವಿನಂತಿ.
ಮನುಕುಲಕ್ಕೆ ಕಂಟಕವಾಗಿರುವ ಈ ಮಹಾಮಾರಿಯಿಂದ ಜಗತ್ತಿನ ಸಕಲ ಜೀವಿಗಳಿಗೂ ಮುಕ್ತಿ ದೊರೆಯಲಿ. ಜನರ ಬದುಕು ಮೊದಲಿನಂತೆ ಹಸನಾಗಲಿ ಎಂದು ಶ್ರೀ ಬಸವಣ್ಣ ದೇವರಲ್ಲಿ ಪ್ರಾರ್ಥಿಸುತ್ತೇವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *