ತಹಸಿಲ್ಧಾರ ಮಧ್ಯಸ್ಥಿತಿಕೆಯಲ್ಲಿ ವಿವಾದ ಬಗೆಹರಿಸಲು ಗಡುವು ನೀಡಿದ ನಂತರ ಕಾಲೇಜಿಗೆ ಬೀಗಜಡಿಯುವ ನಿರ್ಧಾರ ಕೈ ಬಿಟ್ಟ ಪ್ರತಿಭಟನಾಕಾರರು

ಸಿದ್ಧಾಪುರ ತಾಲೂಕಿನ ಬಿಳಗಿಯಲ್ಲಿರುವ ಜ್ಞಾನಸಾಗರ ಪದವಿಪೂರ್ವ ಕಾಲೇಜಿಗೆ ಬೀಗ ಜಡಿಯುವ ಉದ್ದೇಶದಿಂದ ಹಿಂದೆ ಸರಿದಿರುವ ಪ್ರತಿಭಟನಾಕಾರರು ತಹಸಿಲ್ಧಾರರ ಮಧ್ಯಸ್ಥಿತಿಕೆಯಲ್ಲಿ ಈ ತಿಂಗಳ ಅಂತ್ಯದೊಳಗೆ ಇಲ್ಲಿಯ ವಿವಾದ ಇತ್ಯರ್ಥಪಡಿಸಿ ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿದ್ದಾರೆ.

ಬಿಳಗಿಯ ಜ್ಞಾನಸಾಗರ ಪದವಿಪೂರ್ವಕಾಲೇಜು ಚೌಡೇಶ್ವರಿ ಎಸ್.ಸಿ.ಎಸ್.ಟಿ.ಸಂಸ್ಥೆ ಯ ಹೆಸರಿನಲ್ಲಿ ನಡೆಯುತ್ತಿದೆ. ಈ ಕಾಲೇಜು ಪ್ರಾರಂಭವಾದ 1994 ರ ನಂತರ ಈವರೆಗೆ ಎರಡುಬಾರಿ ಆಡಳಿತ ಮಂಡಳಿ ಬದಲಾಗಿದೆ. ಅನುದಾನ ರಹಿತ ಸಮಯದಲ್ಲಿ ಶ್ರಮವಹಿಸಿದ್ದ ಕಾಲೇಜು ಆಡಳಿತ ಸಮೀತಿ ರದ್ದು ಮಾಡಿ, ಅಲ್ಲಿಯ ಪ್ರಾರಂಭಿಕ ಉಪನ್ಯಾಸಕರನ್ನು ಕೆಲಸದಿಂದ ತೆಗೆದು ಉಪನ್ಯಾಸಕರಿಗೆ ಕಿರುಕುಳ ನೀಡಲಾಗುತ್ತಿದೆ. ಈ ಅವ್ಯವಸ್ಥೆಗಳ ಹಿನ್ನೆಲೆಯಲ್ಲಿ ಸ್ಥಳಿಯರನ್ನು ವಿಶ್ವಾಸಕ್ಕೆ ಪಡೆಯದೆ ದೌರ್ಜನ್ಯ ನಡೆಸಲಾಗುತ್ತಿದೆ. ಈ ತೊಂದರೆಯನ್ನು ಆಡಳಿತಮಂಡಳಿ ಅಧ್ಯಕ್ಷರು, ಸದಸ್ಯರ ಉಪಸ್ಥಿತಿಯಲ್ಲಿ ಇತ್ಯರ್ಥ ಪಡಿಸಬೇಕು. ಈ ಕಾಲೇಜಿನ ಅಭಿವೃದ್ಧಿಗೆ ದುಡಿದ ಉಪನ್ಯಾಸಕ ಗಣೇಶ್ ನಾಯ್ಕರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳಬೇಕೆಂದು ಆಗ್ರಹಿಸಲು ಇಂದು ಪ್ರತಿಭಟನೆ ನಡೆಸಿದ ಕಾಲೇಜಿನ ಹಿತರಕ್ಷಣಾ ಸಮೀತಿ ಮತ್ತು ಹಳೆಯ ವಿದ್ಯಾರ್ಥಿಗಳ ಬಳಗ ಕಾಲೇಜಿಗೆ ಬೀಗ ಜಡಿದು ಲಾಕ್ ಔಟ್ ಮಾಡಲು ನಿರ್ಧರಿಸಿತ್ತು. ಆದರೆ ಈ ಪ್ರತಿಭಟನೆ, ಶಾಂತಿ-ಸುವ್ಯವಸ್ಥೆ ರಕ್ಷಣೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಸಿದ್ಧಾಪುರ ತಹಸಿಲ್ಧಾರರು ಪ್ರತಿಭಟನಾ ನಿರತರ ಮನವಿ ಪಡೆದು ಅವರ ಬೇಡಿಕೆಯಾದ ಆಡಳಿತ ಮಂಡಳಿ ಜೊತೆಗಿನ ಮೂಖಾಮುಖಿ ಚರ್ಚೆಗೆ ಈ ತಿಂಗಳ 25 ರ ವರೆಗೆ ಗಡುವು ನೀಡಿದ ಮೇಲೆ ಕಾಲೇಜಿಗೆ ಬೀಗ ಹಾಕುವ ನಿರ್ಧಾರದಿಂದ ಹಿಂದೆ ಸರಿದರು.

ಈ ಸಮಯದಲ್ಲಿ ಆಡಳಿತ ಮಂಡಳಿ ಪರವಾಗಿ ವಿಡಿಯೋ ಮಾಡಿ ನೇರ ಪ್ರಸಾರ ಮಾಡುತಿದ್ದ ವ್ಯಕ್ತಿಯೊಬ್ಬ ಪ್ರತಿಭಟನಾಕಾರರ ವಿರೋಧಕ್ಕೆ ತುತ್ತಾದ ಪ್ರಸಂಗವೂ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ. ಮಾಜಿ ಸದಸ್ಯ ವಿ.ಎನ್. ನಾಯ್ಕ ಚೌಡೇಶ್ವರಿ ಎಸ್,ಸಿ. ಎಸ್.ಟಿ. ಆಡಳಿತ ಸಮೀತಿ ಸರ್ಕಾರದ ಕಾನೂನು, ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಸ್ಥಳಿಯರು, ಸಂಸ್ಥಾಪಕ ಉಪನ್ಯಾಸಕ ವೃಂದಕ್ಕೆ ಕಿರುಕುಳ ಕೊಡುವುದರಿಂದ ಸಂಸ್ಥೆಯನ್ನು ಸರ್ಕಾರದ ವಶಕ್ಕೆ ಪಡೆದು ಈಗಿನ ಆಡಳಿತ ಮಂಡಳಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದರು.

ಇದೇ ಸಮಯದಲ್ಲಿ ಮಾತನಾಡಿದ ತಾಲೂಕಾ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಆಡಳಿತ ಮಂಡಳಿಯ ಅವ್ಯವಸ್ಥೆ, ದೌರ್ಜನ್ಯ ಅಂಧಾದರ್ಬಾರ್ ಮಿತಿಮೀರಿದೆ. ಈ ಬಗ್ಗೆ ವಿಚಾರಿಸಲು ಕರೆಮಾಡಿದರೆ ಪೊಲೀಸ್ ಅಧಿಕಾರಿಗಳಿಂದ ಪರಿಶಿಷ್ಟರ ದೌರ್ಜನ್ಯದ ಕಾನೂನಿನಡಿ ಬಂಧಿಸುವ ಧಮಕಿ ಹಾಕುತ್ತಾರೆ. ಇಂಥ ಅಧ್ಯಕ್ಷರು, ಆಡಳಿತಮಂಡಳಿ ಗಣೇಶ್ ನಾಯ್ಕರನ್ನು ನಡೆಸಿಕೊಂಡಿರುವ ರೀತಿ ಸರಿಇಲ್ಲ, ಈ ಬಗ್ಗೆ ಈ ತಿಂಗಳ ಅಂತ್ಯದೊಳಗೆ ತಹಸಿಲ್ಧಾರರ ಮಧ್ಯಸ್ಥಿಕೆಯಲ್ಲಿ ವಿವಾದ ಇತ್ಯರ್ಥವಾಗದಿದ್ದರೆ ಇಲ್ಲಿಯ ಆಡಳಿತ ಮಂಡಳಿ ಪರಿಣಾಮ ಕೆಟ್ಟದಾಗುವ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಆಡಳಿತ ಸಮೀತಿಯ ಪರವಾಗಿ ವಿವರಣೆ ನೀಡಿದ ಪ್ರಾಂಶುಪಾಲರು ಪೋರ್ಜರಿ ದಾಖಲೆ ಸೃಷ್ಟಿಸಿ, ಉಪನ್ಯಾಸಕರಾಗಿದ್ದಾರೆ. ಅವರ ವಿವರಣೆ ಅಕ್ರಮ ಆಡಳಿತ ಸಮೀತಿ ಪರವಾಗಿರುತ್ತದೆ ಎಂದು ವಿರೋಧಿಸಿದ ಪ್ರತಿಭಟನಾಕಾರರು ಕಳೆದ ಕೆಲವು ವರ್ಷಗಳಿಂದ ಸ್ಥಳಿಯರು,ಹಳೆಯ ವಿದ್ಯಾರ್ಥಿಗಳು, ಕಾಲೇಜು ಹಿತರಕ್ಷಣಾ ಸಮೀತಿ ಚರ್ಚೆಗೆ ಕರೆದರೆ ಆಡಳಿತ ಸಮೀತಿ ಬರುತ್ತಿಲ್ಲ. ಇಂಥ ಅವ್ಯವಸ್ಥೆಗಳ ಕಾಲೇಜು ಆಡಳಿತ ಸಮೀತಿ ಮಾನ್ಯತೆ ರದ್ದು ಮಾಡಿ ಈ ಆಡಳಿತ ಸಮೀತಿಯಿಂದ ನೊಂದ ಅನೇಕರಿಗೆ ನ್ಯಾಯ ಒದಗಿಸಿ ಈ ಪ.ಪೂ. ಮಹಾವಿದ್ಯಾಲಯವನ್ನು ಸರ್ಕಾರದ ವಶಕ್ಕೆ ಪಡೆಯಬೇಕೆಂದು ಆಗ್ರಹಿಸಲಾಯಿತು.

ಕಾಲೇಜಿನಸ್ಥಾಪನೆ ಧ್ಯೇಯ ಉದ್ದೇಶಗಳಿಗೆ ವಿರುದ್ಧವಾಗಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸ್ಥಳೀಯರು, ಕಾಲೇಜಿನ ಸಿಬ್ಬಂದಿಗಳಿಗೂ ವಿರೋಧವಿದೆ. ಈ ಬಗ್ಗೆ ನಿಯೋಗ ಒಯ್ದು ಬಸವರಾಜ್ ಹೊರಟ್ಟಿಯವರ ಗಮನ ಸೆಳೆಯುತ್ತೇವೆ. ಕಾನೂನು, ರೂಢಿ ಸ್ಥಳಿಯರ ಹಿತಾಸಕ್ತಿಗೆ ವಿರುದ್ಧವಾಗಿ ಇಲ್ಲಿ ನಡೆಯುತ್ತಿರುವ ಅನಪೇಕ್ಷಿತ ವಿದ್ಯಮಾನ ನಿಲ್ಲಬೇಕು, ಕೆಲಸದಿಂದ ವಜಾಮಾಡಿದ ಗಣೇಶ್ ನಾಯ್ಕರನ್ನು ಮರಳಿ ಸೇವೆಗೆ ನೇಮಿಸಿಕೊಳ್ಳಬೇಕು. ಇದಾಗದಿದ್ದರೆ ಶಾಸಕರು, ಜನಪ್ರತಿನಿಧಿಗಳ ಶಿಫಾರಸ್ಸಿನ ಮೇರೆಗೆ ಸರ್ಕಾರ ಆಡಳಿತ ಮಂಡಳಿ ರದ್ದುಮಾಡಿ ಕಾಲೇಜನ್ನು ಸರ್ಕಾರದ ನಿರ್ವಹಣೆಗೆ ನೀಡಬೇಕು

-ಬಿ.ಆರ್. ನಾಯ್ಕ, ಜೆ.ಡಿ.ಎಸ್. ಜಿಲ್ಲಾಧ್ಯಕ್ಷ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *