devali special-ಸಕಾರಾತ್ಮಕ ಲಕ್ಷಣ: ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳ ಇಳಿಕೆ!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಪತ್ತೆಯಾಗುತ್ತಿರುವುದರ ಪ್ರಮಾಣ ಕಡಿಮೆಯಾಗುತ್ತಿದ್ದು, ನವೆಂಬರ್ ತಿಂಗಳಲ್ಲಿ ಸಕಾರಾತ್ಮಕ ಲಕ್ಷಣಗಳು ಗೋಚರಿಸುತ್ತಿವೆ. 

Positive signs show Covid-19 is on decline in Karnataka

ಯುಗಾದಿಯಿಂದ ಪ್ರಾರಂಭಿಸಿ ಈವರೆಗೆ ಅನೇಕ ಹಬ್ಬಗಳ ಮೇಲೆ ಕವಿದಿದ್ದ ಕರೋನಾ ಕಾರ್ಮೋಡ ನಿಧಾನವಾಗಿ ಸರಿಯುತ್ತಿರುವ ಅನುಭವ ಆಗುತ್ತಿದೆ. ಹಬ್ಬಗಳ ನೆಪದಲ್ಲಿ ಬಹುಸಂಖ್ಯಾತರ ದುಡಿಮೆ ಕಸಿಯುವ ವೈದಿಕತೆಯ ಹುನ್ನಾರದ ಬಲಿಪಶುಗಳಾದ ಸಾಮಾನ್ಯ ಜನವರ್ಗ ಕರೋನಾ ಕಾರಣದಿಂದ ಕಳೆದ ಏಳೆಂಟು ತಿಂಗಳಿಂದ ನಡೆದ ಅನೇಕಹಬ್ಬ-ಉತ್ಸವಗಳನ್ನು ಸರಳವಾಗಿ ಆಚರಿಸಿದ್ದರು. ಆದರೆ ದೀಪಾವಳಿ ಈ ಹಿಂದಿನ ಇತರ ಹಬ್ಬಗಳಂತೆ ಸಪ್ಪೆಯಾಗಿಲ್ಲ. ಜನರು ದೀಪಾವಳಿ ಖರೀದಿ ಹೆಚ್ಚಿಸಿರುವುದರಿಂದ ರಾಜ್ಯದ ಜಿಲ್ಲೆ, ತಾಲೂಕುಗಳಲ್ಲಿ ಹಬ್ಬದ ಸಂತೆ ನಡೆದು ಹಣ್ಣು-ಹೂವು ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ಹಣದುಬ್ಬರ, ನಿರಂತರ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಲಾಗದ ಆಡಳಿತ, ದೇಶದ ಚುಕ್ಕಾಣಿ ಹಿಡಿದ ಮೋದಿ ಸೈನಿಕರು,ದೇಶಪ್ರೇಮ, ರಾಷ್ಟ್ರೀಯತೆಗಳ ಅವರ ಲಾಗಾಯ್ತಿನ ಸುಳ್ಳು-ಕಪಟ ನಾಟಕಗಳಿಂದ ದೇಶದ ಜನರ ಗಮನ ಸೆಳೆದು ತಮ್ಮ ಅಸಮರ್ಥತೆ ಪ್ರದರ್ಶಿಸುತಿದ್ದಾರೆ ಎನ್ನುವ ಆರೋಪ ವ್ಯಕ್ತವಾಗಿದೆ. https://www.youtube.com/watch?v=RPOyo5WE16k&t=90s

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಪತ್ತೆಯಾಗುತ್ತಿರುವುದರ ಪ್ರಮಾಣ ಕಡಿಮೆಯಾಗುತ್ತಿದ್ದು, ನವೆಂಬರ್ ತಿಂಗಳಲ್ಲಿ ಸಕಾರಾತ್ಮಕ ಲಕ್ಷಣಗಳು ಗೋಚರಿಸುತ್ತಿದೆ. 

ಸೆ.27 ರಂದು ಅತ್ಯಂತ ಹೆಚ್ಚು ಅಂದರೆ ಪಾಸಿಟಿವಿಟಿ ರೇಟ್ ಶೇ.12.54 ರಷ್ಟಿತ್ತು. ನವೆಂಬರ್ 5 ರ ವೇಳೆಗೆ ಇದು ಶೇ.9.98 ರಷ್ಟಕ್ಕೆ ಇಳಿಕೆಯಾಗಿದ್ದು, ಶುಕ್ರವಾರ ನ.13 ರ ವೇಳೆಗೆ ಶೇ.9.24 ರಷ್ಟಕ್ಕೆ ಇಳಿಕೆಯಾಗಿದೆ ಎಂದು ರಾಜ್ಯ ಕೋವಿಡ್-19 ವಾರ್ ರೂಮ್ ದತ್ತಾಂಶದ ಮೂಲಕ ತಿಳಿದುಬಂದಿದೆ. 

ಜುಲೈ ನಲ್ಲಿ  ಶೇ.3.32 ರಷ್ಟಿದ್ದ ಪಾಸಿಟಿವಿಟಿ ರೇಟ್ ಸೆಪ್ಟೆಂಬರ್ ವೇಳೆಗೆ ಶೇ.12.54ಕ್ಕೆ ಏರಿಕೆಯಾಗಿತ್ತು. ಈ ಅವಧಿಯಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿತ್ತು.

ಅ.1 ರಂದು ಪಾಸಿಟಿವಿಟಿ ರೇಟ್ ಶೇ.12.24 ರಷ್ಟಿದ್ದು, ಅ.15 ರ ವೇಳೆಗೆ ಶೇ.11.70 ಕ್ಕೆ ಇಳಿಕೆಯಾಗಿತ್ತು. ಅಕ್ಟೋಬರ್ ಅಂತ್ಯದ ವೇಳೆಗೆ ಈ ಪ್ರಮಾಣ ಶೇ.10.41 ರಷ್ಟಾಗಿ ನವೆಂಬರ್ ಗೆ ಶೇ.10.32 ರಷ್ಟು ದಾಖಲಾಗುವ ಮೂಲಕ ಇಳಿಕೆಯಾಗಿತ್ತು.

ಇನ್ನು ಮರಣ ಪ್ರಮಾಣವೂ ಕಡಿಮೆಯಾಗಿದ್ದು, ಶೇ.1.33 ರಷ್ಟಿದೆ. ಶುಕ್ರವಾರದಂದು ದಾಖಲಾದ ಅಂಕಿ-ಅಂಶಗಳ ಪ್ರಕಾರ ಚೇತರಿಕೆ ಪ್ರಮಾಣವೂ ಶೇ.95.39 ರಷ್ಟಿದೆ. ವಾರ್ ರೂಮ್ ನಿಂದ ಬಂದಿರುವ ಮಾಹಿತಿಯ ಪ್ರಕಾರ ಕಳೆದ 15 ದಿನಗಳಲ್ಲಿ ಮರಣದ ಪ್ರಮಾಣ ಶೇ.1 ಕ್ಕೆ ಇಳಿಕೆಯಾಗಿದ್ದು, ಕೋವಿಡ್-19 ನಿಯಂತ್ರಣದಲ್ಲಿ ಸಕಾರಾತ್ಮಕ ಬದಲಾವಣೆ ಕಂಡುಬಂದಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *