devali special-ಸಕಾರಾತ್ಮಕ ಲಕ್ಷಣ: ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳ ಇಳಿಕೆ!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಪತ್ತೆಯಾಗುತ್ತಿರುವುದರ ಪ್ರಮಾಣ ಕಡಿಮೆಯಾಗುತ್ತಿದ್ದು, ನವೆಂಬರ್ ತಿಂಗಳಲ್ಲಿ ಸಕಾರಾತ್ಮಕ ಲಕ್ಷಣಗಳು ಗೋಚರಿಸುತ್ತಿವೆ. 

Positive signs show Covid-19 is on decline in Karnataka

ಯುಗಾದಿಯಿಂದ ಪ್ರಾರಂಭಿಸಿ ಈವರೆಗೆ ಅನೇಕ ಹಬ್ಬಗಳ ಮೇಲೆ ಕವಿದಿದ್ದ ಕರೋನಾ ಕಾರ್ಮೋಡ ನಿಧಾನವಾಗಿ ಸರಿಯುತ್ತಿರುವ ಅನುಭವ ಆಗುತ್ತಿದೆ. ಹಬ್ಬಗಳ ನೆಪದಲ್ಲಿ ಬಹುಸಂಖ್ಯಾತರ ದುಡಿಮೆ ಕಸಿಯುವ ವೈದಿಕತೆಯ ಹುನ್ನಾರದ ಬಲಿಪಶುಗಳಾದ ಸಾಮಾನ್ಯ ಜನವರ್ಗ ಕರೋನಾ ಕಾರಣದಿಂದ ಕಳೆದ ಏಳೆಂಟು ತಿಂಗಳಿಂದ ನಡೆದ ಅನೇಕಹಬ್ಬ-ಉತ್ಸವಗಳನ್ನು ಸರಳವಾಗಿ ಆಚರಿಸಿದ್ದರು. ಆದರೆ ದೀಪಾವಳಿ ಈ ಹಿಂದಿನ ಇತರ ಹಬ್ಬಗಳಂತೆ ಸಪ್ಪೆಯಾಗಿಲ್ಲ. ಜನರು ದೀಪಾವಳಿ ಖರೀದಿ ಹೆಚ್ಚಿಸಿರುವುದರಿಂದ ರಾಜ್ಯದ ಜಿಲ್ಲೆ, ತಾಲೂಕುಗಳಲ್ಲಿ ಹಬ್ಬದ ಸಂತೆ ನಡೆದು ಹಣ್ಣು-ಹೂವು ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ಹಣದುಬ್ಬರ, ನಿರಂತರ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಲಾಗದ ಆಡಳಿತ, ದೇಶದ ಚುಕ್ಕಾಣಿ ಹಿಡಿದ ಮೋದಿ ಸೈನಿಕರು,ದೇಶಪ್ರೇಮ, ರಾಷ್ಟ್ರೀಯತೆಗಳ ಅವರ ಲಾಗಾಯ್ತಿನ ಸುಳ್ಳು-ಕಪಟ ನಾಟಕಗಳಿಂದ ದೇಶದ ಜನರ ಗಮನ ಸೆಳೆದು ತಮ್ಮ ಅಸಮರ್ಥತೆ ಪ್ರದರ್ಶಿಸುತಿದ್ದಾರೆ ಎನ್ನುವ ಆರೋಪ ವ್ಯಕ್ತವಾಗಿದೆ. https://www.youtube.com/watch?v=RPOyo5WE16k&t=90s

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಪತ್ತೆಯಾಗುತ್ತಿರುವುದರ ಪ್ರಮಾಣ ಕಡಿಮೆಯಾಗುತ್ತಿದ್ದು, ನವೆಂಬರ್ ತಿಂಗಳಲ್ಲಿ ಸಕಾರಾತ್ಮಕ ಲಕ್ಷಣಗಳು ಗೋಚರಿಸುತ್ತಿದೆ. 

ಸೆ.27 ರಂದು ಅತ್ಯಂತ ಹೆಚ್ಚು ಅಂದರೆ ಪಾಸಿಟಿವಿಟಿ ರೇಟ್ ಶೇ.12.54 ರಷ್ಟಿತ್ತು. ನವೆಂಬರ್ 5 ರ ವೇಳೆಗೆ ಇದು ಶೇ.9.98 ರಷ್ಟಕ್ಕೆ ಇಳಿಕೆಯಾಗಿದ್ದು, ಶುಕ್ರವಾರ ನ.13 ರ ವೇಳೆಗೆ ಶೇ.9.24 ರಷ್ಟಕ್ಕೆ ಇಳಿಕೆಯಾಗಿದೆ ಎಂದು ರಾಜ್ಯ ಕೋವಿಡ್-19 ವಾರ್ ರೂಮ್ ದತ್ತಾಂಶದ ಮೂಲಕ ತಿಳಿದುಬಂದಿದೆ. 

ಜುಲೈ ನಲ್ಲಿ  ಶೇ.3.32 ರಷ್ಟಿದ್ದ ಪಾಸಿಟಿವಿಟಿ ರೇಟ್ ಸೆಪ್ಟೆಂಬರ್ ವೇಳೆಗೆ ಶೇ.12.54ಕ್ಕೆ ಏರಿಕೆಯಾಗಿತ್ತು. ಈ ಅವಧಿಯಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿತ್ತು.

ಅ.1 ರಂದು ಪಾಸಿಟಿವಿಟಿ ರೇಟ್ ಶೇ.12.24 ರಷ್ಟಿದ್ದು, ಅ.15 ರ ವೇಳೆಗೆ ಶೇ.11.70 ಕ್ಕೆ ಇಳಿಕೆಯಾಗಿತ್ತು. ಅಕ್ಟೋಬರ್ ಅಂತ್ಯದ ವೇಳೆಗೆ ಈ ಪ್ರಮಾಣ ಶೇ.10.41 ರಷ್ಟಾಗಿ ನವೆಂಬರ್ ಗೆ ಶೇ.10.32 ರಷ್ಟು ದಾಖಲಾಗುವ ಮೂಲಕ ಇಳಿಕೆಯಾಗಿತ್ತು.

ಇನ್ನು ಮರಣ ಪ್ರಮಾಣವೂ ಕಡಿಮೆಯಾಗಿದ್ದು, ಶೇ.1.33 ರಷ್ಟಿದೆ. ಶುಕ್ರವಾರದಂದು ದಾಖಲಾದ ಅಂಕಿ-ಅಂಶಗಳ ಪ್ರಕಾರ ಚೇತರಿಕೆ ಪ್ರಮಾಣವೂ ಶೇ.95.39 ರಷ್ಟಿದೆ. ವಾರ್ ರೂಮ್ ನಿಂದ ಬಂದಿರುವ ಮಾಹಿತಿಯ ಪ್ರಕಾರ ಕಳೆದ 15 ದಿನಗಳಲ್ಲಿ ಮರಣದ ಪ್ರಮಾಣ ಶೇ.1 ಕ್ಕೆ ಇಳಿಕೆಯಾಗಿದ್ದು, ಕೋವಿಡ್-19 ನಿಯಂತ್ರಣದಲ್ಲಿ ಸಕಾರಾತ್ಮಕ ಬದಲಾವಣೆ ಕಂಡುಬಂದಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *