corona india today-ಕರೋನಾಮುಕ್ತವಾಗುವತ್ತ ಭಾರತದ ದಾಪುಗಾಲು

ಸತತ 9ನೇ ದಿನವೂ ದೇಶದಲ್ಲಿ ತಗ್ಗಿದ ಕೊರೋನಾ ಆರ್ಭಟ: ದೇಶದಲ್ಲಿಂದು 30 ಸಾವಿರಕ್ಕಿಂತ ಕಡಿಮೆ ಕೇಸ್ ಪತ್ತೆ

ಅತ್ತ ಯುರೋಪ್ ಮತ್ತು ಅಮೆರಿಕಾದಲ್ಲಿ ನಿತ್ಯ ಕೊರೋನಾ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದರೆ, ಭಾರತದಲ್ಲಿ ಕಳೆದ 9 ದಿನಗಳಿಂದ ನಿತ್ಯ 50,000ಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗುತ್ತಿರುವುದು ಆಶಾದಾಯಕವಾಗಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆವರೆಗಿನ 24 ಗಂಟೆಯ ಅವಧಿಯಲ್ಲಿ ದೇಶದಲ್ಲಿ 30 ಸಾವಿರಕ್ಕಿಂತಲೂ ಕಡಿಮೆ ಪ್ರಕರಣಗಳು ಪತ್ತೆಯಾಗಿವೆ. 

File photo

ನವದೆಹಲಿ: ಅತ್ತ ಯುರೋಪ್ ಮತ್ತು ಅಮೆರಿಕಾದಲ್ಲಿ ನಿತ್ಯ ಕೊರೋನಾ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದರೆ, ಭಾರತದಲ್ಲಿ ಕಳೆದ 9 ತಿನಗಳಿಂದ ನಿತ್ಯ 50,000ಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗುತ್ತಿರುವುದು ಆಶಾದಾಯಕವಾಗಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆವರೆಗಿನ 24 ಗಂಟೆಯ ಅವಧಿಯಲ್ಲಿ ದೇಶದಲ್ಲಿ 30 ಸಾವಿರಕ್ಕಿಂತಲೂ ಕಡಿಮೆ ಪ್ರಕರಣಗಳು ಪತ್ತೆಯಾಗಿವೆ. 

ದೇಶದಲ್ಲಿಂದು 29,164 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 88,74,291ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ದೇಶದಲ್ಲಿ ಸಾವಿನ ಸಂಖ್ಯೆ ಕೂಡ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ನಿನ್ನೆ 449 ಮಂದಿ ಸೋಂಕಿನಿಂದ ಸಾವನ್ನಪ್ಪಿರುವುದು ವರದಿಯಾಗಿದೆ. ದೇಶದಲ್ಲಿ ಈ ವರೆಗೂ ಮಹಾಮಾರಿ ಆರ್ಭಟಕ್ಕೆ ಒಟ್ಟು  1,30,519 ಮಂದಿ ಬಲಿಯಾಗಿದ್ದಾರೆ.
 
ಈ ನಡುವೆ ದೇಶದಲ್ಲಿ ಪತ್ತೆಯಾಗಿರುವ ಒಟ್ಟಾರೆ 88,74,291 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 40,791 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಸೋಂಕಿನಿಂತ ಚೇತರಿಸಿಕೊಂಡವರ ಸಂಖ್ಯೆ 82,90,371ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,53,401ಕ್ಕೆ ಇಳಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 8,44,382 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,65,42,907 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *