ಕೆ. ಆರ್. ಪ್ರಕಾಶ್ ನಿಧನ

ಪತ್ರಕರ್ತ, ರಂಗಕಲಾವಿದ,ರಂಗನಿರ್ಧೇಶಕರಾಗಿ ಈಗಿನ ರಾಜ್ಯ ನಾಟಕ ಅಕಾಡೆಮಿ ಸದಸ್ಯರಾಗಿದ್ದ ಶಿರಸಿಯ ಕೆ.ಆರ್. ಪ್ರಕಾಶ್ ಅಲ್ಫಕಾಲಿಕ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ.

ನಿಸರ್ಗ ರಂಗ ಮಿತ್ರ ಪ್ರಕಾಶ್ ಗೆ ನುಡಿ ನಮನ______________________ ಕೆ ಆರ್ ಪ್ರಕಾಶ್ ಅಂದ್ರೆ ಕ್ರಿಯಾಶೀಲತೆ, ಸುಮ್ಮನೆ ಕುಳಿತ ಆಸಾಮಿ ಅಲ್ಲ.ನದಿ ದಡದಲ್ಲಿ, ಪ್ರಪಾತದಲ್ಲಿ, ಕೆರೆಯ ಅಂಚಿನಲ್ಲಿ, ಮರದ ನೆರಳಲ್ಲಿ, ಸಮುದ್ರ ತೀರದಲ್ಲಿ ನಾಟಕ ಮಾಡುವ ಹುಚ್ಚು. ಈ ಕಾರಣಕ್ಕಾಗಿ ಸಂಘಟನಾತ್ಮಕ ಅನುಭವ ಪಡೆದವನು. ಬೀದಿ ನಾಟಕ ಮಾಡುತ್ತಾ ಉತ್ತರ ಕನ್ನಡದ ಕರಾವಳಿ, ವನವಾಸಿ ಕೇರಿ, ಪೇಟೆ ಹಳ್ಳಿಗಳಲ್ಲಿ ಮೂರು ದಶಕಗಳಿಂದ ದವನು. ಹಕ್ಕಿಮನೆ ಸುರೇಶ, ಬಾಳೆ ಗದ್ದೆ ಶ್ರೀನಿವಾಸ, ರಾಮಕೃಷ್ಣ ಶಾಸ್ತ್ರೀ, ನರಸಿಂಹ ದೀಕ್ಷಿತ ಕಳವೆ ನಾವೆಲ್ಲ ಸೇರಿ ಯುವಜನ ಮೇಳ, ನಾಟಕ ಎಂದು ಸುತ್ತಾಟ. ಸಂಸದರು, ಶಾಸಕರು, ಸಹಕಾರಿ ಧುರೀಣ ರು ಸೇರಿದಂತೆ ಹಲವರನ್ನು.ಬಣ್ಣ ಹಚ್ಚಿ ಸಿ ನಾಟಕಕ್ಕೆ ಕರೆದವನು. ಪ್ರಕಾಶ್ ಜೊತೆಗೆ ಜೋರು ಚರ್ಚೆ, ವಾದ, ಜಗಳ ಯಾವತ್ತೂ ಇದ್ದದ್ದೇ. ಮುಂಗೋಪಿ, ಮನಸಿಗೆ ಬಂದಿದ್ದು ಮುಲಾಜಿಲ್ಲದೆ ಮಾತಾಡು ವ ವ್ಯಕ್ತಿ .ನಿನ್ನೆ ಸಂಜೆ ಘಟ್ಟಿ ಕೈ ಗೇ ಹೋಗಿದ್ದಾಗ ಸುರೇಶ್ ಹಕ್ಕೀಮನೆ, ದೀಕ್ಷಿತ ಮತ್ತು ನಾನು ಈ ಪ್ರಕಾಶನ ಕತೆಯನ್ನು ಸಹೋದರಿ ಮಾನಸ ಎದುರು ಹೇಳಿಕೊಂಡು ನಕ್ಕಿದ್ದೇವೆ, ನೊಂದು ವಿಷಾದ ವ್ಯಕ್ತಪಡಿಸಿ ಮನೆಗೆ ಮರಳಿದೆವು.. ಅದೇ ಕೊನೆ ತೀವ್ರ ಅನಾರೋಗ್ಯದಲ್ಲಿ ಬಳಲುತ್ತಿದ್ದ ಪ್ರಕಾಶ್ ರಾತ್ರಿ ಇಹಲೋಕ ತ್ಯಜಿಸಿದ್ದರು.ರಂಗ ಚಟುವಟಿಕೆಯನ್ನು ಹಳ್ಳಿಯ ಮೂಲೆಗೆ ಒಯ್ದು ಒಂದು ಕ್ರಿಯಾಶೀಲ ಬದುಕು ನಡೆಸಿದ ಪ್ರಕಾಶ್ ಇನ್ನಿಲ್ಲ ಎಂಬುದನ್ನು ಊಹಿಸಲು ಸಾಧ್ಯವಾಗುತ್ತಿಲ್ಲ.ಕಾಲನ ರಂಗ ಪರದೆ ತೆರೆದಿದೆ, ಒಡನಾಡಿ ಗಳಿಗೆ ನೋವು ಉಳಿದಿದೆ.

-ಶಿವಾನಂದ ಕಳವೆ

#ಕೆಆರ್ಪ್ರಕಾಶ್ ರಿಗೆ #ರಂಗನಮನಗಳು.

ಶಿರಸಿಯ ರಂಗನಟ, ನಿರ್ದೇಶಕ ಕೆ.ಆರ್.ಪ್ರಕಾಶ ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾದರು.
ಕೆ.ಆರ್.ಪ್ರಕಾಶ ಪ್ರಸ್ತುತ ಕರ್ನಾಟಕ ನಾಟಕ ಅಕಾಡಮಿ ಯ ಸದಸ್ಯರಾಗಿದ್ದರು.
ತುಂಬ ಚಿಕ್ಕ ಪ್ರಾಯದಲ್ಲೇ ರಂಗಭೂಮಿಯ ಗೀಳು ಹತ್ತಿಸಿಕೊಂಡಿದ್ದ ಪ್ರಕಾಶ ಉತ್ತಮ ನಟರಾಗಿದ್ದರು.‌ಅವರದೇ ಆದ ವಿಶಿಷ್ಡ ಶೈಲಿಯಲ್ಲಿ ನಾಟಕಗಳನ್ನ ಕಟ್ಟುತ್ತಿದ್ದರು. ಮುಖ್ಯವಾಗಿ ಹಳ್ಳಿಗಳ ತಂಡಗಳ ಜೊತೆ ನಾಟಕವಾಡುತ್ತ ಶಿರಸಿಯ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ರಂಗಾಸಕ್ತಿ ಬೆಳೆಯಲು ಕಾರಣರಾಗಿದ್ದರು.
‘ಪ್ರಕೃತಿ ರಂಗಭೂಮಿ’ ಯಲ್ಲಿ ಹಲವಾರು ಸಾಹಸಗಳನ್ನ ಮಾಡಿದ ಪ್ರಕಾಶ್ ನಿಸರ್ಗ ಮತ್ತು ರಂಗಭೂಮಿಗಳು ಲೀನವಾಗಬಹುದಾದ ಸಾಧ್ಯತೆಗಳ ಕುರಿತು ಯೋಚಿಸುತ್ತಿದ್ದರು. ಹಾಗೆಯೇ ಸಮುದ್ರ ದಡದಲ್ಲಿ, ಜಲಪಾತದೆದುರು, ಪ್ರಪಾತದಲ್ಲಿ ಹೀಗೆ ಹಲವಾರು ಪ್ರಯೋಗಗಳನ್ನು ಮಾಡಿದ್ದರು. ಮತ್ತಿಘಟ್ಟದ ಗೆಳೆಯರೊಡನೆ ಅವರು ಮಾಡಿದ ಪ್ರಯೋಗಗಳು ಅನೇಕ.
ಪ್ರಕಾಶ್ ಹೆಸರಲ್ಲಿ ಪ್ರಶಸ್ತಿಯೂ ಕೊಡಮಾಡಲ್ಪಡುತ್ತಿತ್ತು. ರಂಗಭೂಮಿಯ ಅನೇಕ ಹಿರಿಯರು ಪ್ರಶಸ್ತಿ ಸ್ವೀಕರಿಸಿದ್ದರು.
ಶಿರಸಿಯ ‘ರಂಗಸಂಗ’ ಕ್ಕಾಗಿಯೂ ಮಕ್ಕಳ ನಾಟಕಗಳನ್ನು ನಿರ್ದೇಶಿಸಿದ್ದರು.
ಇನ್ನೂ ಹಲವು ವರ್ಷ ರಂಗಕಾಯಕ ಮಾಡಬಹುದಾಗಿದ್ದ ಪ್ರಕಾಶ್ ಅನಾರೋಗ್ಯ ದಿಂದ ಹಠಾತ್ ನಿರ್ಗಮಿಸದ್ದಾರೆ.
ಅವರಿಗೆ ನಮನಗಳು.
‘ಚಿಂತನ ರಂಗ ಅಧ್ಯಯನ ಕೇಂದ್ರ’ ಮತ್ತು ‘ ಚಿಂತನ ಉತ್ತರ ಕನ್ನಡ’, ಕೆ. ಆರ್ ಪ್ರಕಾಶ್ ರಿಗೆ ಗೌರವಗಳನ್ನು ಸಲ್ಲಿಸುತ್ತವೆ.. ( ಕಿರಣ್ ಭಟ್ ಹೊನ್ನಾವರ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *