ಟೀಮ್ ಇಂಡಿಯಾದ 2021ರ ಸಂಪೂರ್ಣ ವೇಳಾಪಟ್ಟಿ ಪ್ರಕಟ

ಕೊರೋನಾ ಸೋಂಕಿನಿಂದ 2020ರಲ್ಲಿ ಸಂಪೂರ್ಣ ವಿರಾಮದಲ್ಲಿದ್ದ ಭಾರತ ಕ್ರಿಕೆಟ್ ತಂಡ 2021ನೇ ಸಾಲಿನಲ್ಲಿ ಬಿಡುವಿಲ್ಲದ ವೇಳಾಪಟ್ಟಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

Virat Kohli overtakes Rohit Sharma

ನವದೆಹಲಿ: ಕೊರೋನಾ ಸೋಂಕಿನಿಂದ 2020ರಲ್ಲಿ ಸಂಪೂರ್ಣ ವಿರಾಮದಲ್ಲಿದ್ದ ಭಾರತ ಕ್ರಿಕೆಟ್ ತಂಡ 2021ನೇ ಸಾಲಿನಲ್ಲಿ ಬಿಡುವಿಲ್ಲದ ವೇಳಾಪಟ್ಟಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಆಸ್ಟ್ರೇಲಿಯಾ ಪ್ರವಾಸದ ಮೂಲಕ 2020ರಲ್ಲಿ ಕೊನೆಯ ಸರಣಿ ಆಡಲಿರುವ ಟೀಮ್ ಇಂಡಿಯಾ, ಭಾರತದ ಇಂಗ್ಲೆಂಡ್ ಪ್ರವಾಸದಲ್ಲಿ ಜನವರಿ-ಫೆಬ್ರವರಿ- ಮಾರ್ಚ್ ಅವಧಿಯಲ್ಲಿ ತಲಾ 4 ಟೆಸ್ಟ್, ಏಕದಿನ ಮತ್ತು ಟಿ20 ಪಂದ್ಯಗಳ ಸರಣಿಯನ್ನು ಆಡುವ ನಿರೀಕ್ಷೆ ಇದೆ.

ನಂತರ ಮಾರ್ಚ್- ಏಪ್ರಿಲ್ – ಮೇ ಅವಧಿಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯಲ್ಲಿ ಪಾಲ್ಗೊಳ್ಳಲಿರುವ ಭಾರತೀಯ ಆಟಗಾರರು, ಜೂನ್ ನಲ್ಲಿ ಕೈಗೊಳ್ಳಲಿರುವ ಶ್ರೀಲಂಕಾ ಪ್ರವಾಸದಲ್ಲಿ 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನಾಡಲಿದೆ.

ಜೂನ್-ಜುಲೈನಲ್ಲಿ 2021ರ ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಭಾರತ ತಂಡ, ಆರು ಟಿ20 ಪಂದ್ಯಗಳನ್ನಾಡಲಿದೆ. ಬಳಿಕ ಜುಲೈನಲ್ಲಿ ಜಿಂಬಾಬ್ವೆ ಪ್ರವಾಸ ಮಾಡಲಿರುವ ಭಾರತ, 3 ಏಕದಿನ ಪಂದ್ಯಗಳನ್ನು ಆಡಲಿದೆ.

ಜುಲೈ-ಆಗಸ್ಟ್ -ಸೆಪ್ಟೆಂಬರ್ ಅವಧಿಯಲ್ಲಿ ಇಂಗ್ಲೆಂಡ್ ಪ್ರವಾಸ ನಡೆಸಲಿರುವ ವಿರಾಟ್ ಕೊಹ್ಲಿ ಬಳಗ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ನಂತರ ಭಾರತ ಪ್ರವಾಸ ಕೈಗೊಳ್ಳಲಿರುವ ದಕ್ಷಿಣ ಆಫ್ರಿಕಾ ವಿರುದ್ಧ 3 ಏಕದಿನ ಮತ್ತು 5 ಟಿ20 ಪಂದ್ಯಗಳ ಸರಣಿಯಲ್ಲಿ ಪಾಲ್ಗೊಳ್ಳಲಿರುವ ಟೀಮ್ ಇಂಡಿಯಾ ಆಟಗಾರರು, ಅಕ್ಟೋಬರ್-ನವೆಂಬರ್ ನಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟಿ20 ಟೂರ್ನಿಯಲ್ಲಿ ಸ್ಪರ್ಧಿಸಲಿದ್ದಾರೆ.

ಇದಾದ ನಂತರ ಭಾರತ ಪ್ರವಾಸ ಕೈಗೊಳ್ಳಲಿರುವ ನ್ಯೂಜಿಲೆಂಡ್ ವಿರುದ್ಧ ನವೆಂಬರ್- ಡಿಸೆಂಬರ್ ಅವಧಿಯಲ್ಲಿ 2 ಟೆಸ್ಟ್ ಮತ್ತು 3 ಟಿ20 ಪಂದ್ಯಗಳನ್ನು ಆಡಲಿರುವ ಭಾರತ ತಂಡ, ಡಿಸೆಂಬರ್ ಅಂತ್ಯದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ 3 ಟೆಸ್ಟ್ ಮತ್ತು 3 ಟಿ20 ಪಂದ್ಯಗಳನ್ನು ಆಡಲಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *