

ಮಸ್ಕಿ ಹಾಗೂ ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ವ್ಯರ್ಥ. ಆದರೂ ಆ ಎರಡೂ ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.


ಬೆಂಗಳೂರು: ಮಸ್ಕಿ ಹಾಗೂ ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ವ್ಯರ್ಥ. ಆದರೂ ಆ ಎರಡೂ ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರ ವಾರ್ಡ್ ಕಚೇರಿ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮಂಡ್ಯ, ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪ ಚುನಾವಣೆಗಳ ಸೋಲಿನ ಬಳಿಕ ನಮಗೆ ಮತ್ತಷ್ಟು ಸವಾಲು ಎದುರಾಗಿದೆ. ಕಾರ್ಯಕರ್ತರು ಹುರುಪಿನಿಂದ ಪಕ್ಷಕ್ಕೆ ಪುನಶ್ಚೇತನ ನೀಡಲು ಸಿದ್ದರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಚುನಾವಣೆಗಳಲ್ಲಿ ವ್ಯರ್ಥ ಕಸರತ್ತು ಹಾಕುವುದು ಸರಿಯಲ್ಲ, ಉಪ ಚುನಾವಣೆಗಳಲ್ಲಿ ಅಭ್ಯರ್ಥಿ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.
ಜೆಡಿಎಸ್ ಪಕ್ಷ ಸಂಘಟನೆ ಚೆನ್ನಾಗಿಯೇ ಇದೆ. ಉಪ ಚುನಾವಣೆಗಳಲ್ಲಿ ಈಗ ಬಿಜೆಪಿಯ ವಿಧಾನವೇ ಬೇರೆ ಇದೆ. ಇಂಥ ಸಂದರ್ಭದಲ್ಲಿ ನಾವು ಉಪ ಚುನಾವಣೆ ಗೆಲ್ಲೋದು ಕಷ್ಟವೇ ಆಗಿದೆ. ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಹಣ ಹಾಗೂ ಅಧಿಕಾರ ಬಲದಿಂದ ಬಿಜೆಪಿ ಗೆಲುವು ಸಾಧಿಸಿದೆ ಎಂದು ಪರೋಕ್ಷವಾಗಿ ಅವರು ಹೇಳಿದರು. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
