ಅರಣ್ಯ ಇಲಾಖೆ ವಾಹನ ಚಾಲಕರಿಗೆ ಮುಖ್ಯಮಂತ್ರಿಗಳ ಪದಕ & ಮಂಡಳ ಪೂಜೆ

https://www.youtube.com/watch?v=2-9LXILPatQ&t=9s
https://www.youtube.com/watch?v=2-9LXILPatQ&t=9s

ಸಿದ್ದಾಪುರ
ಕಳೆದ ಹಲವು ವರ್ಷಗಳಿಂದ ತಾಲೂಕಿನ ಅರಣ್ಯ ಇಲಾಖೆ ಅಧಿಕಾರಿಗಳ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ, ಈಗ ಶಿರಸಿಯ ಡಿ.ಎಪ್.ಓ. ಎಸ್.ಜಿ.ಹೆಗಡೆಯವರ ವಾಹನ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿರುವ ಝಡ್.ಎ.ಸಾಧಿಕ್ ಅವರಿಗೆ ಮುಖ್ಯಮಂತ್ರಿಗಳ ಪದಕ ಪ್ರಶಸ್ತಿ ದೊರಕಿದ್ದು ಸೋಮವಾರ ಬೆಂಗಳೂರಿನ ವಿಧಾನ ಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಂದ ಅವರು ಪದಕ ಸ್ವೀಕರಿಸಿದರು.
ಸಿದ್ದಾಪುರ ತಾಲೂಕಿನಲ್ಲಿ ಝಡ್.ಎ.ಸಾಧಿಕ್ ಅವರು ಕಾರ್ಯನಿರ್ವಹಿಸುತ್ತಿದ್ದ ವೇಳೆಯಲ್ಲಿ ಅಕ್ರಮ ಮರಗಳ್ಳತನ,ಇನ್ನಿತರ ಅಕ್ರಮ ಚಟುವಟಿಕೆಗಳ ವ್ಯಕ್ತಿಗಳನ್ನು ಹಿಡಿಯಲು ಹೆಚ್ಚಿನ ಸಹಾಯ ಮಾಡುವದರ ಜೊತೆಗೆ ಶ್ರೀಗಂಧದ ಕಳ್ಳಸಾಗಾಣಿಕೆದಾರರಿಗೆ ಸಿಂಹಸ್ವಪ್ನವಾಗಿದ್ದರು.

ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಸುಮಾರು 4000 ಕೆ.ಜಿ.ಶ್ರೀಗಂಧವನ್ನು ಅವರು ಕೊಲೆ ಬೆದರಿಕೆ, ಜೀವ ಭಯ ತೊರೆದು ಹಿಡಿದು ಸರಕಾರಕ್ಕೆ ಒಪ್ಪಿಸಿದ್ದರು. ಅವರ ಕಾರ್ಯದ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಲ್ಲದೇ ಸಾರ್ವಜನಿಕರು ಕೂಡ ಪ್ರಶಂಸಿಸಿದ್ದು ಈಗಲೂ ಕೂಡ ಅವರು ತಾಲೂಕಿನಲ್ಲಿ ಮನೆ ಮಾತಾಗಿದ್ದಾರೆ. ಮೂಲತ: ದ.ಕ.ಜಿಲ್ಲೆಯ ಸುಳ್ಯದವರಾದ ಸಾಧಿಕ್ ಅವರ ಸಿದ್ದಾಪುರ ತಾಲೂಕಿನಲ್ಲಿ ಮಾಡಿದ ಮಹತ್ತರ ಕಾರ್ಯವನ್ನು ಗುರುತಿಸಿ, ಸರಕಾರ ಈ ಪದಕವನ್ನು ನೀಡಿದ್ದು ಸಾರ್ವಜನಿಕರಲ್ಲಿ ಮೆಚ್ಚುಗೆಗೆ ಕಾರಣವಾಗಿದೆ. ಪ್ರಾಯಶ: ಅರಣ್ಯ ಇಲಾಖೆಯ ಚಾಲಕರೊರ್ವರಿಗೆ ಇಂಥ ಗೌರವ ದೊರೆಯುತ್ತಿರುವದು ಇದೇ ಮೊದಲು ಎನ್ನಲಾಗುತ್ತಿದೆ.

ಮಂಡಲ ಪೂಜೆ-
ದಿನಾಂಕ 15-11-2020ರ ಸಾಯಂಕಾಲ 6:30 ಘಂಟೆಗೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಡಲ ಪೂಜೆಯನ್ನು 18 ಮೆಟ್ಟಿಲುಗಳ (ಪಡಿಪೂಜೆ) ಪೂಜೆಯನ್ನು ಮಾಡುವ ಮೂಲಕ ವಿದ್ಯುಕ್ತವಾಗಿ ಆರಂಭಿಸಲಾಯಿತು. ಈ ಸಮಯದಲ್ಲಿ ನೂರಾರು ಭಕ್ತರು ಭಾಗವಹಿಸಿ ಅಚ್ಚುಕಟ್ಟಾಗಿ ಪೂಜೆಯು ನೆರವೇರುವಂತೆ ನೋಡಿಕೊಂಡರು.
ಕರೋನಾ ಮಹಾಮಾರಿಯಿರುವ ಈ ಸಂಕಷ್ಟ ಕಾಲದಲ್ಲಿ ಅಯ್ಯಪ್ಪ ಸ್ವಾಮಿಯ ಭಕ್ತರು ಶಭರಿಮಲೈಗೆ ಹೋಗಿಬರಲು ಅನಾನುಕೂಲವಾಗುವುದರಿಂದ ಹಾಗೂ ಮಾಲಾಧಾರಿಗಳು ಪ್ರತಿವರ್ಷ ನಡೆಸುವ ವೃತಾಚರಣೆಗೆ ಭಂಗವಾಗದಂತೆ ನೋಡಿಕೊಳ್ಳಲು ತಮ್ಮ ಸನ್ನಿದಿ ವತಿಯಿಂದ ಇರುಮುಡಿ ಹೊತ್ತು ಬರುವ ಭಕ್ತಾಧಿಗಳಿಗೆ ಶಾಸ್ತ್ರೋಕ್ತವಾಗಿ 18 ಮೆಟ್ಟಿಲುಗಳನ್ನು ಏರಿ ಕಲಿಯುಗವರದನ ದರ್ಶನ, ತುಪ್ಪಾಭಿಷೇಕ ಮತ್ತು ವಿಶೇಷ ಪೂಜೆಗಳನ್ನು ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ದಿನಾಂಕ 15-11-2020 ರಿಂದ 30-12-2020 ರವರೆಗೆ ಮಂಡಲ ಪೂಜೆ ಮಹೋತ್ಸವ ಹಾಗೂ ದಿನಾಂಕ 01-01-2021 ರಿಂದ 15-01-2021 ರವರೆಗೆ ಮಕರಜ್ಯೋತಿ ಉತ್ಸವವು ನೆರವೇರುತ್ತಿದ್ದು ಮಾಲಾಧಾರಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುಲು ಅಯ್ಯಪ್ಪ ಸ್ವಾಮಿಯ ಆಡಳಿತ ಸಮಿತಿಯವರು ತಿಳಿಸಿರುತ್ತಾರೆ.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಲು ಮೊಬೈಲ್ ಸಂಖ್ಯೆ:
1) 7892771470 2) 9731413487 3) 7259555400
4) 9008883466 5) 9901573633

ಅರಣ್ಯ ಇಲಾಖೆಯಲ್ಲಿ
ಅರಣ್ಯ ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಸಿದ್ದಾಪುರ ತಾಲೂಕಿನ,
ಕಾನಗೋಡ ಗ್ರಾಮದ
ಮೋಹನ್ ಗಣಪತಿ ನಾಯ್ಕ,ಘಂಟೆ ಇವರಿಗೆ ಕರ್ನಾಟಕ ಸರ್ಕಾರವು ಕೊಡಮಾಡುವ “ಮುಖ್ಯಮಂತ್ರಿ ಪದಕ” ಲಭಿಸಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *