ನಿವಾರ್ ಚಂಡಮಾರುತ: ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಹೈ ಅಲರ್ಟ್, ಚೆನ್ನೈಗೂ ಅಪಾಯ

ಈ ವರ್ಷದ ಈಶಾನ್ಯ ಮಾನ್ಸೂನ್‌ನ ಮೊದಲ ಚಂಡಮಾರುತ, ನಿವಾರ್ ಶೀಘ್ರದಲ್ಲೇ ತಮಿಳುನಾಡಿಗೆ ಅಪ್ಪಳಿಸಲಿದ್ದು, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Cyclone Nivar

ಚೆನ್ನೈ: ಈ ವರ್ಷದ ಈಶಾನ್ಯ ಮಾನ್ಸೂನ್‌ನ ಮೊದಲ ಚಂಡಮಾರುತ, ನಿವಾರ್ ಶೀಘ್ರದಲ್ಲೇ ತಮಿಳುನಾಡಿಗೆ ಅಪ್ಪಳಿಸಲಿದ್ದು, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಹೌದು..ದಕ್ಷಿಣ ಭಾರತದಲ್ಲಿ ಮುಂಗಾರು ಅವಧಿ ಮುಗಿದ ಬಳಿಕವೂ ಸತತ ವಾಯುಭಾರ ಕುಸಿತದಿಂದ ಚಂಡಮಾರುತದ ವಾತಾವರಣ ನಿರ್ಮಾಣವಾಗಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮುಂತಾದೆಡೆ ನಿರಂತರ ಮಳೆಯಾಗುತ್ತಿದೆ. ಇದೀಗ ಹೊಸ ಸೇರ್ಪಡೆ ಎಂಬಂತೆ ಈಗ ನಿವಾರ್  ಚಂಡಮಾರುತವು ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗುತ್ತಿದ್ದು, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದ ಅನೇಕ ಕಡೆ ಭಾರಿ ಮಳೆ ಸುರಿಸುವ ಸಾಧ್ಯತೆ ಇದೆ. ನವೆಂಬರ್ 25ರಂದು ಕರೈಕಲ್, ಪುದುಚೆರಿಯಲ್ಲಿ, ನ. 25 ಮತ್ತು 26ರಂದು ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಮತ್ತು ರಾಯಲಸೀಮೆ ಜಿಲ್ಲೆಗಳಲ್ಲಿ  ಭಾರಿಯಿಂದ ಅತಿ ಭಾರಿ ಮಳೆ ಸುರಿಸುವ ಸಂಭವವಿದೆ. ವಿಶಾಖಪಟ್ಟಣಂ ಮತ್ತು ಪೂರ್ವ ಗೋದಾವರಿ ಜಿಲ್ಲೆಯಲ್ಲಿಯೂ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪ್ರಸ್ತುತ ನಿವಾರ್ ಚಂಡಮಾರುತವು ಶ್ರೀಲಂಕಾದ ಉತ್ತರ ಭಾಗ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯತ್ತ ಪಶ್ಚಿಮದಿಂದ ಚಲಿಸುತ್ತಿದೆ. ಹೀಗಾಗಿ ಈ ಭಾಗಗಳಲ್ಲಿ ನವೆಂಬರ್ 26ರವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ. 

ನಾಳೆ ತಮಿಳುನಾಡಿಗೆ ಅಪ್ಪಳಿಸಲಿರುವ ನಿವಾರ್
ಇನ್ನು ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತವು ತಮಿಳುನಾಡಿನ ಚೆನ್ನೈ ಸೇರಿದಂತೆ ಅನೇಕ ಭಾಗಗಳಲ್ಲಿ ವ್ಯಾಪಕ ಮಳೆ ಸುರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ತಮಿಳುನಾಡು ಕರಾವಳಿಯತ್ತ ಸಾಗುತ್ತಿರುವ ಈ ಚಂಡಮಾರುತ ನಿವಾರ್, ನಾಳೆ ಕರೈಕಲ್ ಮತ್ತು ಮಹಾಬಲಿಪುರಂಗೆ  ಅಪ್ಪಳಿಸಲಿದೆ. ಹೀಗಾಗಿ ಈ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಕೇವಲ ತಮಿಳುನಾಡು ಮಾತ್ರವಲ್ಲದೇ, ನೆರೆಯ ಆಂಧ್ರ ಪ್ರದೇಶ ಮತ್ತು ಕರ್ನಾಟಕದ ಕೆಲ ಭಾಗಗಳಿಗೂ ನಿವಾರ್ ಚಂಡಮಾರುತದ ಎಪೆಕ್ಟ್ ತಟ್ಟಲಿದ್ದು, ಇಲ್ಲಿಯೂ ಕೂಡ ಭಾರಿ ಮಳೆಯಾಗುವ ಸಾಧ್ಯತೆ  ಇದೆ.

ಹವಾಮಾನ ಇಲಾಖೆ ನೀಡಿರುವ ಮಾಹಿತಿ ಮೇರೆಗೆ, ಇಂದು ತಮಿಳುನಾಡಿನ ಪುದುಕೋಟ್ಟೈ, ತಂಜಾವೂರ್, ತಿರುವರೂರ್, ಕರೈಕಲ್, ನಾಗಪಟ್ಟಣಂ, ಕುಡಲೂರ್, ಅರಿಯಲೂರ್ ಮತ್ತು ಪೆರಂಬೂರ್, ರಾಮನಾಥಪುರಂ, ಶಿವಗಂಗೈ, ತಿರುಚಿನಾಪಳ್ಳಿ, ಕಲ್ಲಾಕುರಿಚಿ, ವಿಳ್ಳುಪುರಂ, ಪುದುಚೆರಿ, ಚೆನ್ನೈ, ಕಾಂಚೀಪುರಂ,  ತಿರುವಳ್ಳೂರ್, ರಾಣಿಪೇಟೈ, ತಿರುವಣ್ಣಾಮಲೈ, ತಿರುಪತ್ತೂರ್ ಮತ್ತು ವೆಲೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.  

ತಮಿಳುನಾಡು ಮಾತ್ರವಲ್ಲದೇ ಹಿಂದೂ ಮಹಾಸಾಗರ, ದಕ್ಷಿಣ ಬಂಗಾಳ ಕೊಲ್ಲಿಯ ಕೇಂದ್ರ ಭಾಗಗಳ ಪ್ರದೇಶಗಳಲ್ಲಿ ಮತ್ತು ಬಂಗಾಳ ಕೊಲ್ಲಿಯ ಪಶ್ಚಿಮ ಕೇಂದ್ರ, ಮನ್ನಾರ್ ಕೊಲ್ಲಿ, ತಮಿಳುನಾಡಿನ ಕರಾವಳಿ, ಪುದುಚೆರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗಗಳಲ್ಲಿಯೂ ಮಳೆ ಅಬ್ಬರಿಸಲಿದೆ. ಹೀಗಾಗಿ  ಮುಂಜಾಗ್ರತಾ ಕ್ರಮವಾಗಿ ಮೀನುಗಾರಿಕೆ ನಡೆಸದಂತೆ ಸ್ಥಳೀಯ ಜಿಲ್ಲಾಡಳಿತಗಳು ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಯ ಸಾಹಸಕ್ಕೆ ಇಳಿಯದಂತೆ ಮೀನುಗಾರರಿಗೆ ಸಲಹೆ ನೀಡಲಾಗಿದೆ. ಇದಲ್ಲದೆ ತಿರುಚಿ, ನಾಮಕ್ಕಲ್, ಈರೋಡ್, ಕರೂರ್, ಧರ್ಮಪುರಿ, ಸೇಲಂ, ಕೃಷ್ಣಗಿರಿಯಲ್ಲಿ ಮಳೆ ಆರ್ಭಟ  ಮುಂದುವರೆಯಲಿದೆ.  

ಚೆನ್ನೈನಲ್ಲಿ ಭಾರಿ ಮಳೆ
ಚಂಡಮಾರುತದ ಪರಿಣಾಮ ಚೆನ್ನೈ ಮತ್ತು ನೆರೆಯ ಜಿಲ್ಲೆಗಳಲ್ಲಿ 11 ಸೆಂ.ಮೀ ನಿಂದ 20 ಸೆಂ.ಮೀ ಮಳೆಯಾಗುವ ಸಾಧ್ಯತೆಯಿದ್ದು,  ಗಾಳಿಯ ವೇಗವು ಮಂಗಳವಾರ 55-65 ಕಿ.ಮೀ ವೇಗದಿಂದ 75 ಕಿ.ಮೀ.ಗೆ ಏರುತ್ತದೆ. ಬುಧವಾರ ಉತ್ತರ ತಮಿಳುನಾಡು ಮತ್ತು ಪುದುಚೇರಿಯ ಕರಾವಳಿ ಪ್ರದೇಶಗಳಲ್ಲಿ ಗಾಳಿಯ  ವೇಗ 100 ಕಿ.ಮೀ. ನಿಂದ 120 ಕಿ.ಮೀ.ವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

(kpc) visit-samaajamukhi you tube channel

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *