ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ವಿಧಿವಶ

ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯದ ಅಹ್ಮದ್ ಪಟೇಲ್ ಅವರು ಬುಧವಾರ ವಿಧಿವಶರಾಗಿದ್ದಾರೆ. 

Ahmed Patel
1949ರ ಆ. 21ರಂದು ಗುಜರಾತ್‌ನಲ್ಲಿ ಜನಿಸಿದ್ದ ಅಹ್ಮದ್‌ ಪಟೇಲ್ ಲೋಕಸಭೆಗೆ 3 ಬಾರಿ ಆಯ್ಕೆಯಾಗಿದ್ದರು. 5 ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಜೊತೆಗೆ ಸೋನಿಯಾಗಾಂಧಿ ರಾಜಕೀಯ ಕಾರ್ಯದರ್ಶಿ ಆಗಿದ್ದರು.

ನವದೆಹಲಿ: ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯದ ಅಹ್ಮದ್ ಪಟೇಲ್ ಅವರು ಬುಧವಾರ ವಿಧಿವಶರಾಗಿದ್ದಾರೆ. 

ಕೆಲ ವಾರಗಳ ಹಿಂದಷ್ಟೇ ಅಹ್ಮದ್ ಪಟೇಲ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದರಂತೆ ಗುರುಗ್ರಾಮದ ಮೆಡಂತಾ ಅಸ್ಪತ್ರೆಗೆ ದಾಖಲಾಗಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೂ ಮುನ್ನ ಫರೀದಾಬಾದ್’ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. 

ತಮಗೆ ಕೊರೋನಾ ಸೋಂಕು ತಗುಲಿರುವ ಕುರಿತು ಅಕ್ಟೋಬರ್ 1 ರಂದು ಸ್ವತಃ ಅಹ್ಮದ್ ಪಟೇಲ್ ಅವರೇ ಹೇಳಿಕೊಂಡಿದ್ದರು. ಅಲ್ಲದೆ ಹೋಮ್ ಐಸೋಲೇಷನ್ ನಲ್ಲಿರುವುದಾಗಿಯೂ ಮಾಹಿತಿ ನೀಡಿದ್ದರು. ಬಳಿಕ ಆರೋಗ್ಯದಲ್ಲಿ ಚೇತರಿಕೆಗಳು ಕಂಡು ಬರದ ಹಿನ್ನೆಲೆಯಲ್ಲಿ ಫರೀದಾಬಾದ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೂ ಚೇತರಿಕೆ ಕಂಡು ಬರದ ಹಿನ್ನೆಲಯೆಲ್ಲಿ ಮೆಡಂತಾ ಆಸ್ಪತ್ರೆಗೆ ದಾಖಲಾಗಿದ್ದರು. 

71 ವರ್ಷದ ಅಹ್ಮದ್ ಪಟೇಲ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿದ್ದ ಅಹ್ಮದ್ ಪಟೇಲ್ ಅವರು, ಕಾಂಗ್ರೆಸ್’ನ ಹಿರಿಯ ನಾಯಕರು ಹಾಗೂ ಸೋನಿಯಾ ಗಾಂಧಿ ಕುಟುಂಬದ ಆಪ್ತರಾಗಿದ್ದರು. ಆಸ್ಪತ್ರೆಗೆ ದಾಖಲಾದಾಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಸಂಸದ ಶಶಿ ತರೂರ್ ಅವರು ಟ್ವೀಟ್ ಮಾಡಿ ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು. 

1949ರ ಆ. 21ರಂದು ಗುಜರಾತ್‌ನಲ್ಲಿ ಜನಿಸಿದ್ದ ಅಹ್ಮದ್‌ ಪಟೇಲ್ ಲೋಕಸಭೆಗೆ 3 ಬಾರಿ ಆಯ್ಕೆಯಾಗಿದ್ದರು. 5 ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಜೊತೆಗೆ ಸೋನಿಯಾಗಾಂಧಿ ರಾಜಕೀಯ ಕಾರ್ಯದರ್ಶಿ ಆಗಿದ್ದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *