ದುಡಿಯುವ ವರ್ಗದ ಏಕತೆಗೆ ಕನ್ನೇಶ್ ಕರೆ

ಉಳ್ಳವರನ್ನು ಉಳ್ಳವರನ್ನಾಗಿ ಮಾಡುವ, ಇಲ್ಲದವರನ್ನು ಇನ್ನಷ್ಟು ಇಲ್ಲದವರನ್ನಾಗಿಸುವ ಈಗಿನ ಸರ್ಕಾರಗಳ ಗುರಿ ಕೋಮುವಾದದ ಮೂಲಕ ನಿರಂತರ ಅಧಿಕಾರದಲ್ಲಿರುವ ಹುನ್ನಾರ ಎಂದು ಆರೋಪಿಸಿರುವ ಪತ್ರಕರ್ತ ಕನ್ನೇಶ್ ದುಡಿಯುವ ವರ್ಗದ ಜನರ ಐಕ್ಯತೆ ಮಾತ್ರ ಈ ಅರಾಜಕತೆಗೆ ಉತ್ತರ ಎಂದಿದ್ದಾರೆ.

ಕಾರ್ಮಿಕ ಸಂಘಟನೆಗಳ ಜಂಟೀ ಕ್ರೀಯಾ ಸಮಿತಿ ಕರೆಕೊಟ್ಟಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಹಿನ್ನೆಲೆಯಲ್ಲಿ ಸಿದ್ಧಾಪುರದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಮತ್ತು ಮನವಿ ಅರ್ಪಣೆ ಕಾರ್ಯಕ್ರಮದಲ್ಲಿ ವಕ್ತಾರರಾಗಿ ಮಾತನಾಡಿದ ಅವರು ಬಲಪಂಥೀಯ ಸಂಘಟನೆಗಳು, ಸರ್ಕಾರಗಳ ಧ್ಯೇಯವೇ ಉಳ್ಳವರ ಪೋಷಣೆ ಇದರಿಂದಾಗಿ ಬಡವರು, ರೈತರು, ಕಾರ್ಮಿಕರು, ಯೋಜನಾ ಕಾರ್ಯಕರ್ತರಿಗೆ ಅನ್ಯಾಯ, ಶೋಷಣೆಗಳಾಗುತ್ತಿವೆ. ಈ ಅವ್ಯವಸ್ಥೆ ಅರಾಜಕತೆ ವಿರುದ್ಧ ಸಂಘಟಿತ ಹೋರಾಟಮಾಡಿ ಶ್ರಮಿಕರು ತಮ್ಮ ಪರವಾದ ಮಸೂದೆ, ಕಾನೂನುಗಳ ರಚನೆಗೆ ಮುಂದಾಗಬೇಕು ಎಂದರು.

ಈ ಮುಷ್ಕರ, ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಸಿದ್ಧಾಪುರ ತಹಸಿಲ್ಧಾರರ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ನೀಡಲಾಯಿತು. ಈ ಮನವಿಯನ್ನು ಸುಧಾ ಕೊಂಡ್ಲಿ, ರೇವತಿ ನಾಯ್ಕ,ಯಮುನಾ ನಾಯ್ಕ ತಹಸಿಲ್ಧಾರ ಮಂಜುಳಾ ಭಜಂತ್ರಿಯವರಿಗೆ ನೀಡಿದರು. ಈ ಸಂದರ್ಭದಲ್ಲಿ ಗೀತಾ ಕೊಂಡ್ಲಿ,ಸಾವಿತ್ರಿ ಗೌಡ, ಕವಿತಾ ನಾಯ್ಕ, ಸುಮಿತ್ರಾ ನಾಯ್ಕ, ಗಾಯತ್ರಿ ಮಡಿವಾಳ, ಚೇತನಾ ಹೆಗಡೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಯೋಜನಾ ಕಾರ್ಮಿಕರ ಪ್ರತಿಭಟನಾ ಮೆರವಣಿಗೆ ನಗರದ ತಿಮ್ಮಪ್ಪ ನಾಯ್ಕ ವೃತ್ತದಿಂದ ಹೊರಟು, ರಾಜಮಾರ್ಗದ ಮೂಲಕ ಸಾಗಿ ತಹಸಿಲ್ದಾರ ಕಛೇರಿಯಲ್ಲಿ ಸಮಾಪ್ತಿಯಾಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *