ಶಿರಸಿ ಕಾಂಗ್ರೆಸ್ ಸಮಾವೇಶದ ಚಿತ್ರಗಳು & ಇತರ ಸ್ಥಳೀಯ ಸುದ್ದಿಗಳು

ಕನ್ನಡಕ್ಕೆ ಶಕ್ತಿ ತುಂಬುವ ಕೆಲಸ ಅಗತ್ಯ – ನಾಗರಾಜ ಭೈರಿ
ಸಿದ್ದಾಪುರ-28 : ಕನ್ನಡ ನೆಲದಲ್ಲಿ ಕನ್ನಡಕ್ಕೆ ಅಗ್ರಸ್ಥಾನ ದೊರೆಯಬೇಕು. ಕನ್ನಡಕ್ಕೆ ಶಕ್ತಿ ತುಂಬುವ ಕೆಲಸ ಎಲ್ಲ ಸಂಘ-ಸಂಸ್ಥೆಗಳ ಮೂಲಕ ಆಗಬೇಕು. ಮಾನ್ಯ ಅಂತಾರಾಷ್ಟ್ರೀಯ ಸಂಸ್ಥೆ ಕನ್ನಡ ನೆಲದಲ್ಲಿ ಕ್ರಿಯಾತ್ಮಕವಾಗಿ ವಿವಿಧ ಲಯನ್ಸ್ ಕ್ಲಬ್, ಜಿಲ್ಲೆ ಹಾಗೂ ಬಹುಜಿಲ್ಲೆಗಳ ಒಕ್ಕೂಟದೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು, ಪ್ರಾದೇಶಿಕ ಭಾಷೆಗಳಿಗೆ ಮಹತ್ವ ನೀಡುತ್ತದೆ ಎಂದು ಲಯನ್ಸ್ ಮಲ್ಟಿಪಲ್ ಡಿಸ್ಟ್ರಿಕ್ಟ್ ಚೇರ್ಮನ್ ಲಯನ್ ನಾಗರಾಜ ಭೈರಿ ಹೇಳಿದರು.
ಅವರು ಸಿದ್ದಾಪುರ ಲಯನ್ಸ್ ಕ್ಲಬ್‍ಗೆ ದಿನಾಂಕ: 27-11-2020 ರಂದು ಭೇಟಿ ನೀಡಿ ಕ್ಲಬ್ಬಿನ ಸದಸ್ಯರನ್ನುದ್ದೇಶಿಸಿ ತಮಗಿತ್ತ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಅವರು ಮಾತನ್ನಾಡುತ್ತಾ ಭಾಷೆ ಎಲ್ಲರನ್ನೂ ಒಗ್ಗೂಡಿಸುವ ಕೆಲಸ ಮಾಡುವುದರ ಜೊತೆ, ಪರಸ್ಪರ ಪ್ರೀತಿ ವಿಶ್ವಾಸವನ್ನು ಹೆಚ್ಚಿಸುತ್ತದೆ. ಲಯನ್ಸ್ ಸಮೂಹ ತನ್ನ ಕಾರ್ಯ ಚಟುವಟಿಕೆಗಳನ್ನು ಅಲ್ಲಲ್ಲಿಯ ಪ್ರಾದೇಶಿಕ ಭಾಷೆಗಳ ಮೂಲಕ ನಡೆಸಲು ಪ್ರೋತ್ಸಾಹಿಸುತ್ತದೆ. ಜಾಗತಿಕ ಅರಿವಿನೊಂದಿಗೆ ಪ್ರಾದೇಶಿಕ ಪ್ರೀತಿ ನೆಲೆಗೊಳ್ಳಬೇಕು ಎಂದು ಹೇಳಿದರು.

ಸಿದ್ದಾಪುರದಲ್ಲಿನ ಅಂಧರ ಶಾಲೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಅಲ್ಲಿ ಮಹಿಳೆಯರಿಗಾಗಿ ನಡೆಯುತ್ತಿರುವ ಹೊಲಿಗೆ ತರಬೇತಿ ವರ್ಗವನ್ನು ನೋಡಿ ಸಂತಸ ವ್ಯಕ್ತಪಡಿಸಿದ್ದು, 48 ವರುಷಗಳಿಂದ ವಿವಿಧ ಜನಪರ ಸೇವೆಯಲ್ಲಿ ಸಿದ್ದಾಪುರ ಕ್ಲಬ್ ನಡೆಯುತ್ತಿದ್ದ ಬಗ್ಗೆ ಶ್ಲಾಘಿಸಿದರು.
ಸನ್ಮಾನ ಸ್ವೀಕರಿಸಿ, ಮಾಜಿ ಜಿಲ್ಲಾ ಗವರ್ನರ್ ಕೆ.ಎಂ. ಮುನಿಯಪ್ಪ ಬೆಂಗಳೂರು ರವರು ಮಾತನಾಡಿ, ಸಮಾಜದ ಋಣ ಬಲು ದೊಡ್ಡದು. ವಿವಿಧ ಸೇವಾ ಚಟುವಟಿಕೆಗಳ ಮೂಲಕ ಸಾಮಾಜಿಕ ಋಣಭಾರ ಇಳಿಸಿಕೊಳ್ಳಲು ಸಾಧ್ಯ. ಪ್ರೀತಿ ವಿಶ್ವಾಸಗಳು ಮನುಷ್ಯನ ಸಂಬಂಧಗಳನ್ನು ಗಟ್ಟಿಗೊಳಿಸುವುದರ ಜೊತೆ ಮಾನವೀಯ ಅನುಕಂಪಗಳನ್ನು ಹೆಚ್ಚಿಸಿ ಇನ್ನೊಬ್ಬರ ಕಷ್ಟದಲ್ಲಿ ಸಹಕರಿಸಲು ಸಾಧ್ಯ ಎಂದು ಹೇಳಿದರು.
ಮಾಜಿ ಲಯನ್ಸ್ ಜಿಲ್ಲಾ ಗವರ್ನರ್, ಜಿ.ಪಿ. ದಿವಾಕರ ಅವರು ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ, ಲಯನ್ಸ್ ಸಮೂಹಗಳು ಶಹರ ಗ್ರಾಮಾಂತರ ಪ್ರದೇಶಗಳೆಂಬ ಪ್ರತ್ಯೇಕತೆಯನ್ನು ಸೃಷ್ಟಿಸದೇ ತಮ್ಮ ನಿರ್ದಿಷ್ಟ ಗುರಿಗಳೊಂದಿಗೆ ಕಾರ್ಯತತ್ಪರವಾಗಿವೆ. ವೃತ್ತಿಪರ ತರಬೇತಿ ನೀಡುವುದು ಉತ್ತಮ ಸೇವಾಕಾರ್ಯ. ಸಿದ್ದಾಪುರ ಲಯನ್ಸ್ ಸಂಸ್ಥೆಯ ಸಹಯೋಗದೊಂದಿಗೆ ಆಶಾಕಿರಣ ಟ್ರಸ್ಟ್‍ದವರ ಜೆ.ಎಂ.ಆರ್. ಅಂಧರ ಶಾಲೆಯಲ್ಲಿ ಮಹಿಳೆಯರಿಗಾಗಿ ನಡೆಯುತ್ತಿರುವ ಹೊಲಿಗೆ ತರಬೇತಿ ಕೇಂದ್ರ ವೀಕ್ಷಿಸಿ ಹೊಲಿಗೆ ಯಂತ್ರವೊಂದನ್ನು ದಾನವಾಗಿ ನೀಡಿ, ತರಬೇತು ಕಾರ್ಯಕ್ರಮವನ್ನು ಉತ್ತಮವಾಗಿ ನಡೆಸುತ್ತಿದ್ದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮಾಜಿ ಜಿಲ್ಲಾ ಗವರ್ನರ್ ಡಾ. ರವಿ ಹೆಗಡೆ ಹೂವಿನಮನೆ ಮಾತನಾಡಿ ಸನ್ಮಾನಿತರನ್ನು ಅಭಿನಂದಿಸಿ, ಕೋವಿಡ್ 19 ರ ನಿಯಂತ್ರಣ ಹಾಗೂ ರಕ್ಷಣೆ ಸಲುವಾಗಿ ಕೋಟ್ಯಾಂತರ ರೂ.ಗಳ ಆರ್ಥಿಕ ನೆರವನ್ನು ಲಯನ್ಸ್ ಸಂಸ್ಥೆಗಳ ಮೂಲಕ ವಿತರಿಸಲಾಗಿದೆ. ಜನರ ಕಷ್ಟದಲ್ಲಿ ಭಾಗಿಯಾಗುವುದು ಅತ್ಯುತ್ತಮ ಸೇವೆ ಎಂದು ಹೇಳಿ ಸನ್ಮಾನವನ್ನು ನೆರವೇರಿಸಿದರು.
ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷೆ ಶ್ಯಾಮಲಾ ಹೆಗಡೆ ಹೂವಿನಮನೆ ವಹಿಸಿ, ಸಿದ್ದಾಪುರ ಕ್ಲಬ್‍ನ ಜಿಲ್ಲೆ, ರಾಜ್ಯ, ಅಂತರ್‍ರಾಷ್ಟ್ರೀಯ ಮಟ್ಟದ ಲಯನ್ಸ್ ನಾಯಕರು ಭೇಟಿ ನೀಡಿದ್ದು, ಸಂತಸದ ಸಂಗತಿ. ಅವರೊಂದಿಗೆ ಇಂದು ಭೇಟಿ ನೀಡಿದ ಮೂವರು ಲಯನ್ಸ್ ನಾಯಕರು ತಮ್ಮ ವಿವಿಧ ಕಾರ್ಯ ಚಟುವಟಿಕೆಗಳ ಮೂಲಕ ಲಯನ್ಸ್ ಸಮೂಹದ ಕೀರ್ತಿಯನ್ನು ಹೆಚ್ಚಿಸಿದ್ದು, ನಮ್ಮ ಕ್ಲಬ್ಬಿನ ಸನ್ಮಾನ ಸ್ವೀಕರಿಸಿದ ಬಗ್ಗೆ ಸಂತಸವಾಗಿದೆ ಎಂದರು.
ಲಯನ್ ಆರ್.ಎಂ. ಹೆಗಡೆ ಬಾಳೇಸರ, ಕಾರ್ಯದರ್ಶಿ ರಾಘವೇಂದ್ರ ಭಟ್ಟ ಕಲ್ಲಾಳ, ಜಿಲ್ಲಾ ಚೇರ್ಮನ್ ಸತೀಶಗೌಡರ್ ಹೆಗ್ಗೋಡ್ಮನೆ, ನಾಗರಾಜ ಪಾಟೀಲ ಮಳವತ್ತಿ ಉಪಸ್ಥಿತರಿದ್ದರು.
ಜಿ.ಜಿ. ಹೆಗಡೆ ಬಾಳಗೋಡ ಸ್ವಾಗತಿಸಿ ನಿರೂಪಿಸಿದರು. ನಾಗರಾಜ ಎಂ. ದೋಶೆಟ್ಟಿ ವಂದಿಸಿದರು.

ನಿಧನ ಸುದ್ದಿ- ಗಂಗೂಬಾಯಿ ಗಣಪತಿ ಭಟ್ಟ.
ಸಿದ್ದಾಪುರ: ತಾಲೂಕಿನ ಗಾಳಿಜಡ್ಡಿ ಸಮೀಪದ ಗಂಗೂಬಾಯಿ ಗಣಪತಿ ಭಟ್ಟ(85) ಗಾಳೀಮನೆ ಇವರು ಸೋಮವಾರ ನಿಧನಹೊಂದಿದರು.
ಅವರಿಗೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರಬಂಧು-ಬಳಗವಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಂದರ್ಭಿಕ ಚಿತ್ರ‌ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ೨೪ ಗಂಟೆಗಳಲ್ಲಿ ನಿರಂತರ ಮಳೆಯಾಗಿದೆ. ಇದರ ಪರಿಣಾಮ ಶಿರಸಿ-ಅಂಕೋಲಾ ಮಾರ್ಗದ ಮಧ್ಯೆ ಗುಡ್ಡ...

Recommended For You

About the Author: Kanneshwar Naik

Leave a Reply

Your email address will not be published. Required fields are marked *