kannada move world- ಕೆಜಿಎಫ್’ ತಯಾರಕರಿಂದ ಮತ್ತೊಂದು ಹೊಸ ಪ್ಯಾನ್-ಇಂಡಿಯಾ ಚಿತ್ರ!

ಈ ಹಿಂದೆ “ರಾಜಕುಮಾರ” “ಕೆಜಿಎಫ್ ಚಾಪ್ಟರ್ 1” ನಂತಹಾ ಅದ್ಭುತ ಚಲನಚಿತ್ರಗಳನ್ನು ನೀಡಿದ ನಿರ್ಮಾಣ ಸಂಸ್ಥೆ ಇದೀಗ ಮತ್ತೊಂದು ಪ್ಯಾನ್-ಇಂಡಿಯಾ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ. ಐದು ಭಾಷೆಗಳಲ್ಲಿ ನಿರ್ಮಿಸಲಾಗುವ ಈ ಚಿತ್ರ ದೇಶವ್ಯಾಪಿ ಲಕ್ಷಾಂತರ ಪ್ರೇಕ್ಷಕರನ್ನು ತಲುಪಲಿದೆ. , ಚಿತ್ರದ ನಿರ್ಮಾಪಕ ವಿಜಯ್ ಕಿರಗಂಡೂರ್ ಈ ಬಗ್ಗೆ ಮಾತನಾಡಿ “ಕೆಜಿಎಫ್ ಚಾಪ್ಟರ್ 1 ರ ನಮ್ಮ……

ಈ ಹಿಂದೆ “ರಾಜಕುಮಾರ” “ಕೆಜಿಎಫ್ ಚಾಪ್ಟರ್ 1” ನಂತಹಾ ಅದ್ಭುತ ಚಲನಚಿತ್ರಗಳನ್ನು ನೀಡಿದ ನಿರ್ಮಾಣ ಸಂಸ್ಥೆ ಇದೀಗ ಮತ್ತೊಂದು ಪ್ಯಾನ್-ಇಂಡಿಯಾ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ. ಐದು ಭಾಷೆಗಳಲ್ಲಿ ನಿರ್ಮಿಸಲಾಗುವ ಈ ಚಿತ್ರ ದೇಶವ್ಯಾಪಿ ಲಕ್ಷಾಂತರ ಪ್ರೇಕ್ಷಕರನ್ನು ತಲುಪಲಿದೆ. , ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂ ರ್ ಈ ಬಗ್ಗೆ ಮಾತನಾಡಿ “ಕೆಜಿಎಫ್ ಚಾಪ್ಟರ್ 1 ರ ನಮ್ಮ ಪ್ರಯತ್ನಗಳಿಗೆ ಪ್ರೇಕ್ಷಕರ ಪ್ರತಿಕ್ರಿಯೆ ನಮ್ಮ ಇಡೀ ತಂಡವನ್ನು ಬಹಳವಾಗಿ ಪ್ರೋತ್ಸಾಹಿಸಿತು. ನಮ್ಮ ಹೊಸ ಸಾಹಸದ ಬಗ್ಗೆ ನಾನು ಉತ್ಸುಕನಾಗಿದ್ದೇನೆ ಮತ್ತು ನೀವು ಇಲ್ಲಿಯವರೆಗೆ ನಮಗೆ ತೋರಿಸಿದ ಅದೇ ಪ್ರೀತಿಯಿಂದ ನಮ್ಮನ್ನು ಸ್ವಾಗತಿಸುತ್ತೀರಿ ಎಂದು ಭಾವಿಸುತ್ತೇನೆ! ” ಎಂದರು. 

ಚಿತ್ರದ ಶೀರ್ಷಿಕೆ ಹಾಗೂ ಪಾತ್ರವರ್ಗದ ಬಗ್ಗೆ ಇನ್ನೂ ಯಾವ ಮಾಹಿತಿ ಬಹುರಂಗಪಡಿಸಲಿಲ್ಲವಾದರೂ ಡಿಸೆಂಬರ್ 2ರಂದು ಈ ಬಗ್ಗೆ ಸರ್ ಪ್ರೈಸ್ಜ್ ಪ್ರಕಟಣೆ ಹೊರಬೀಳಲಿದೆ ಎಂದು ನಿರ್ಮಾಪಕರು ಹೇಳಿದ್ದಾರೆ.

ಈ ಹಿಂದೆ ಸೂಪರ್-ಸ್ಟಾರ್ ನಟರಾದ ಪುನೀತ್ ರಾಜ್‌ಕುಮಾರ್ “ನಿನ್ನಿಂದಲೆ” ಹಾಗೂ ಯಶ್ ಅವರ “ಮಾಸ್ಟರ್ ಪೀಸ್” ನಿರ್ಮಿಸಿದ್ದ ಪ್ರೊಡಕ್ಷನ್ ಹೌಸ್, 2018 ರಲ್ಲಿ ದೇಶಾದ್ಯಂತ ಪ್ರಚಾರಕ್ಕೆ ಬಂದಿದೆ. ಈ ಸಂಸ್ಥೆಯ “ಕೆಜಿಎಫ್ ಚಾಪ್ಟರ್ 1″ಯಶ್, ಪ್ರಶಾಂತ್ ನೀಲ್ ಮತ್ತು ವಿಜಯ್ ಕಿರಗಂಡೂರ್ ಮೂವರನ್ನು ಒಟ್ಟುಗೂಡಿಸಿತು. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಿತ್ತು. ಅಲ್ಲದೆ ಬಿಡುಗಡೆಯಾದ ನಾಲ್ಕು ದಿನಗಳಲ್ಲಿ, ಈ ಚಿತ್ರವು ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆ ಕಂಡ ನ್ನಡ ಚಿತ್ರ ಎಂಬ ದಾಖಲೆಯನ್ನು ಮುರಿಯಿತು.

ಇದಲ್ಲದೆ ಇದೇ ನಿರ್ಮಾಣ ಸಂಸ್ಥೆ ಪುನೀತ್ ಅಭಿನಯದ “ಯುವರತ್ನ” ಹಾಗೂ “ಕೆಜಿಎಫ್ ಚಾಪ್ಟರ್ 2” ಚಿತ್ರವನ್ನೂ ನಿರ್ಮಾಣ ಮಾಡಿದ್ದು ಅದೀಗ ಅಂತಿಮ ಹಂತದಲ್ಲಿದೆ. 

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *