ದೆಹಲಿ ಚಲೋ’ಪ್ರತಿಭಟನೆಗೆ ‘ಆನೆಬಲ’: ವೈದ್ಯರು, ವಕೀಲರು, ವಿದ್ಯಾರ್ಥಿಗಳ ಬೆಂಬಲ, ಇಂದು ಮತ್ತೊಂದು ಸುತ್ತಿನ ಮಾತುಕತೆ

ಕೇಂದ್ರ ಸರ್ಕಾರದ ನೂತನ 3 ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ರೈತರ ಜೊತೆ ಇದೀಗ ವೈದ್ಯರು, ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ವಕೀಲರು, ಸಾಮಾಜಿಕ ಕಾರ್ಯಕರ್ತರು, ರಾಜಕೀಯ ಕಾರ್ಯಕರ್ತರು, ಗಾಯಕರು ಸೇರಿದ್ದಾರೆ. ಇದರಿಂದಾಗಿ ಪ್ರತಿಭಟನಾಕಾರರಿಗೆ ಇನ್ನಷ್ಟು ಬಲ ಸಿಕ್

A farmer puts up a placard at the Singhu border in New Delhi on Wednesday demanding rollback of the three newly enacted central farm legislations

ನವದೆಹಲಿ/ಚಂಡೀಗಢ: ಕೇಂದ್ರ ಸರ್ಕಾರದ ನೂತನ 3 ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ರೈತರ ಜೊತೆ ಇದೀಗ ವೈದ್ಯರು, ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ವಕೀಲರು, ಸಾಮಾಜಿಕ ಕಾರ್ಯಕರ್ತರು, ರಾಜಕೀಯ ಕಾರ್ಯಕರ್ತರು, ಗಾಯಕರು ಸೇರಿದ್ದಾರೆ. ಇದರಿಂದಾಗಿ ಪ್ರತಿಭಟನಾಕಾರರಿಗೆ ಇನ್ನಷ್ಟು ಬಲ ಸಿಕ್ಕಿದಂತಾಗಿದೆ. 

ದೆಹಲಿಯ ಸಿಂಘು, ಟಿಕ್ರಿ, ಚಿಲ್ಲ ಮತ್ತು ಗಜಿಪುರ್ ಗಡಿಗಳಲ್ಲಿ ಪ್ರತಿಭಟನೆ ತೀವ್ರವಾಗಿದೆ. ಪ್ರತಿಭಟನಾ ಸ್ಥಳಗಳಲ್ಲಿ ಹೆಚ್ಚು ಟೆಂಟ್ ಗಳು, ಕುರ್ಚಿಗಳು, ಕಾರ್ಪೆಟ್ ಇತ್ಯಾದಿಗಳನ್ನು ತಂದು ಇಟ್ಟು ಅಲ್ಲೇ ಬೀಡುಬಿಟ್ಟಿದ್ದಾರೆ. ಸುತ್ತಮುತ್ತಲ ಗ್ರಾಮಸ್ಥರು ಪ್ರತಿಭಟನಾಕಾರರಿಗೆ ತರಕಾರಿ ಮತ್ತು ಹಾಲುಗಳನ್ನು ಪೂರೈಸುತ್ತಿದ್ದಾರೆ. ಹರ್ಯಾಣ, ಪಂಜಾಬ್, ದೆಹಲಿಗಳ ಗುರುದ್ವಾರ ಸಮಿತಿ ಮತ್ತು ಸಿಖ್ ಕಾರ್ಯಕರ್ತರು ಕಂಬಳಿ ಮತ್ತು ಹಾಸಿಗೆಗಳನ್ನು ಚಳಿಯಿಂದ ರಕ್ಷಿಸಿಕೊಳ್ಳಲು ನೀಡುತ್ತಿದ್ದಾರೆ. ಹತ್ತಿರದ ಇಂಧನ ಕೇಂದ್ರಗಳಿಂದ ಉಚಿತವಾಗಿ ಪೆಟ್ರೋಲ್, ಡೀಸೆಲ್ ಗಳು ಸಿಗುತ್ತಿದೆ.

ಪ್ರತಿನಿತ್ಯ ಹತ್ತಾರು ವೈದ್ಯರು ಬಂದು ತಪಾಸಣೆ ಮಾಡಿ ಅನಾರೋಗ್ಯಕ್ಕೊಳಗಾದವರಿಗೆ, ಹಿರಿಯರನ್ನು ತಪಾಸಣೆ ಮಾಡಿ ಉಚಿತ ವೈದ್ಯಕೀಯ ಸೇವೆಗಳನ್ನು ನೀಡುತ್ತಿದ್ದಾರೆ. ನಾವು ಪ್ರತಿಭಟನೆ ಮುಗಿಯುವವರೆಗೆ ರೈತರ ಜೊತೆ ಇರುತ್ತೇವೆ ಎಂದು ಪಂಜಾಬ್ ಸರ್ಕಾರದ ಮಾಜಿ ಸರ್ಜನ್ ಡಾ ಡಿ ಎಸ್ ಮುಲ್ತಾನಿ ಹೇಳುತ್ತಾರೆ. ಸಿಂಘು ಗಡಿಭಾಗದಲ್ಲಿ ರೈತರಿಗೆ ಆರೋಗ್ಯ ತಪಾಸಭೆ ಏರ್ಪಡಿಸಲಾಗಿದ್ದು ಇತರ ಪ್ರತಿಭಟನಾ ಸ್ಥಳಗಳಲ್ಲಿ ವೈದ್ಯಕೀಯ ತಪಾಸಣೆ ನಡೆಸುತ್ತೇವೆ ಎಂದು ಡಾ ಹರ್ಜಿತ್ ಸಿಂಗ್ ಭಟ್ಟಿ ಟ್ವೀಟ್ ಮಾಡಿದ್ದಾರೆ.

ದೆಹಲಿಯ ಏಮ್ಸ್, ಸಫ್ದರ್ಜಂಗ್, ಹಿಂದೂ ರಾವ್ ಮತ್ತು ಇತರ ಆಸ್ಪತ್ರೆಗಳ ವೈದ್ಯರು ಸಹಾನುಭೂತಿಯಿಂದ ರೈತರು ಪ್ರತಿಭಟನೆ ಮಾಡುತ್ತಿರುವ ಸ್ಥಳಕ್ಕೆ ಬಂದು ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ. ಯುನೈಟೆಡ್ ಸಿಖ್ ನಂತಹ ಎನ್ ಜಿಒಗಳು ಉಚಿತ ಆಂಬ್ಯುಲೆನ್ಸ್ ಸೇವೆ ನೀಡುತ್ತಿವೆ. ಟಿಕ್ರಿ ಗಡಿಯಲ್ಲಿ ರೆಡ್ ಕ್ರಾಸ್ ಸೊಸೈಟಿ ಆರು ಮಂದಿ ಕಾರ್ಮಿಕರೊಂದಿಗೆ 5 ಆಂಬ್ಯುಲೆನ್ಸ್ ಸೇವೆಗಳನ್ನು ನೀಡುತ್ತಿದೆ. 

ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಗುಂಪು ವೈದ್ಯಕೀಯ ಶಿಬಿರವನ್ನು ಆಯೋಜಿಸಿದೆ. ಲುಧಿಯಾನ ಮಿಷನರಿ ಕಾಲೇಜು ವಿದ್ಯಾರ್ಥಿಗಳು ಕಂಬಳಿಗಳನ್ನು ಒದಗಿಸಿದ್ದಾರೆ. 

ಮೋದಿ ಸರ್ಕಾರ ಈಸ್ಟ್ ಇಂಡಿಯಾ ಕಂಪೆನಿಯ ಆಡಳಿತವನ್ನು ಮತ್ತೆ ತರಲು ಪ್ರಯತ್ನಿಸುತ್ತಿದ್ದು, ರೈತರ ಜೀವನವನ್ನು ನಾಶ ಮಾಡಲು ಹೊರಟಿದೆ ಎಂದು ದೆಹಲಿ ವಿಶ್ವವಿದ್ಯಾಲಯದ ಶಿಕ್ಷಕರ ಸಂಘಟನೆ ಮಾಜಿ ಅಧ್ಯಕ್ಷೆ ನಂದಿತಾ ನಾರಾಯಣ್ ಹೇಳಿದ್ದಾರೆ. 
ಇಂದು ಕೇಂದ್ರ ಸರ್ಕಾರದ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್ ಮತ್ತು ರೈತ ಸಂಘಟನೆಗಳ ಪ್ರತಿನಿಧಿಗಳ ಮಧ್ಯೆ ಮತ್ತೆ ಸಭೆ ನಡೆಯಲಿದ್ದು ರೈತ ನಾಯಕರು ಈಗ ಸಭೆಯಲ್ಲಿ ಭಾಗವಹಿಸಲು ದೆಹಲಿಯತ್ತ ಮುಖಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ, 35 ನಾಯಕರು ಹೋಗಿ ಸರ್ಕಾರದ ಸಚಿವರು ಮತ್ತು ಪ್ರತಿನಿಧಿಗಳನ್ನು ಭೇಟಿ ಮಾಡುತ್ತೇವೆ. ನಾವು ವಿದ್ಯಾವಂತ ರೈತರು, ನಮಗೆ ಯಾವುದು ಒಳ್ಳೆಯದು ಎಂದು ನಮಗೆ ಗೊತ್ತಿದೆ. ಕೇಂದ್ರ ಸರ್ಕಾರದ ಈ ಹೊಸ ಕಾನೂನನ್ನು ಹಿಂತೆಗೆದುಕೊಳ್ಳಬೇಕು ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಗಡಿಗಳಲ್ಲಿ, ರಾಜಧಾನಿಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ ಸಭೆಯಲ್ಲಿ ಭಾಗವಹಿಸುತ್ತಿಲ್ಲ. ಅದರ ಜಂಟಿ ಕಾರ್ಯದರ್ಶಿ ಎಸ್ ಎಸ್ ಸುಬ್ರನ್ ಮಾತನಾಡಿ, ರೈತರನ್ನು ಇಬ್ಭಾಗ ಮಾಡಲು ಕೇಂದ್ರ ಸರ್ಕಾರ ನೋಡುತ್ತಿದೆ. ಪ್ರಧಾನಿ ಮೋದಿಯವರೇ ಸ್ವತಃ ಸಭೆ ನಡೆಸದೆ ನಾವು ಯಾವುದೇ ಸಭೆಯಲ್ಲಿ ಭಾಗವಹಿಸುತ್ತಿಲ್ಲ. ಅವರು ಎಲ್ಲಾ 507 ರೈತ ಸಂಘಟನೆಗಳ ಜೊತೆ ಸಭೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *