ಶಿವಮೊಗ್ಗದಲ್ಲಿ ಮತೀಯ ಗಲಭೆ: ಹಲವೆಡೆ ಕರ್ಫ್ಯೂ ಜಾರಿ, 62 ಮಂದಿ ಬಂಧನ

ಶಿವಮೊಗ್ಗದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ನಗರದ ಹಲವೆಡೆ ಕರ್ಫ್ಯೂ ಹೇರಲಾಗಿದ್ದು, 62 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

arrest

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ನಗರದ ಹಲವೆಡೆ ಕರ್ಫ್ಯೂ ಹೇರಲಾಗಿದ್ದು, 62 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ನಿನ್ನೆ ಶಿವಮೊಗ್ಗ ನಗರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ  62 ಮಂದಿಯನ್ನು ಬಂಧಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಕರ್ಫ್ಯೂ ಹೇರಲಾಗಿದೆ. ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಪೂರ್ವ ವಲಯ ಐಜಿಪಿ ಎಸ್ .ರವಿ ಅವರು, ‘ನಗರದಲ್ಲಿ ಪರಿಸ್ಥಿತಿ  ಸಂಪೂರ್ಣ ಹತೋಟಿಗೆ ಬಂದಿದೆ. ಶಾಂತಿ-ಸುವ್ಯವಸ್ಥೆ ನಿಯಂತ್ರಣದಲ್ಲಿದೆ, ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದು, ದೊಡ್ಡಪೇಟೆ ಮತ್ತು ಕೋಟೆ ಮತ್ತು ತುಂಗಾ ನಗರಠಾಣೆ ವ್ಯಾಪ್ತಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ನಾಗೇಶ್ ಹಲ್ಲೆ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ  ಬಂಧಿಸಲಾಗುವುದು ಎಂದು ಹೇಳಿದರು.

ಕರ್ಫ್ಯೂ ಜಾರಿ: ಈಗಾಗಲೇ ಜಿಲ್ಲೆಯಲ್ಲಿ 148 ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದ್ದು, ಬೇರೆ ಜಿಲ್ಲೆಗಳಿಂದ ಬರುವ ದುಷ್ಕರ್ಮಿಗಳನ್ನು ತಡೆಯಲು 9 ಕಡೆ ಚೆಕ್ ಪೋಸ್ಟ್ ಹಾಕಲಾಗಿದೆ. 19 ಮೊಬೈಲ್ ಗಸ್ತು ವಾಹನ ಹಾಗೂ 22 ಚಿತಾ ವಾಹನಗಳು ನಗರದಾದ್ಯಂತ ಗಸ್ತು  ತಿರುಗುತ್ತಿವೆ. 3 ಪ್ಯಾಟ್ರೋಲ್ ವಾಹನ  ಗಸ್ತು ತಿರುಗುತ್ತಿವೆ. ನಗರದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ದಾವಣಗೆರೆ ಮತ್ತು ಚಿತ್ರದುರ್ಗ ವಲಯದ 1 ಸಾವಿರ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಅಂತೆಯೇ ಸಾರ್ವಜನಿಕರು ಯಾವುದೇ ರೀತಿಯ ವದಂತಿಗಳಿಗೆ  ಕಿವಿಗೊಡಬೇಡಿ ಎಂದ ಅವರು, ಪರಿಸ್ಥಿತಿ ಬಿಗಡಾಯಿಸದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ. ನಗರದಲ್ಲಿ ಶಾಂತಿ‌ ನೆಲೆಸಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕಾರ ನೀಡಬೇಕು ಎಂದು ಮನವಿಮಾಡಿದರು.

ಇದೇ ವೇಳೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಮಾತನಾಡಿ, ಡಿ.5 ರವರೆಗೆ ಕರ್ಪ್ಯೂ ಜಾರಿಯಲ್ಲಿರಲಿದ್ದು, ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ. ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವತ್ಯಯವಾಗುವುದಿಲ್ಲ. ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಎಲ್ಲ ರೀತಿ ವಾಣಿಜ್ಯ  ಚಟುವಟಿಕೆಗಳು ಸ್ಥಗಿತವಾಗಿವೆ ಎಂದು ಹೇಳಿದರು.(kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *