ಮಾಜಿ ಸಚಿವ ಆರ್.ವಿ.ದೇಶಪಾಂಡೆ ಶಿಷ್ಯರು ಬಿ.ಜೆ.ಪಿ.ಗೆ!

ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಬಿ.ಜೆ.ಪಿ. ಸೇರುತ್ತಾರೆ ಎನ್ನುವ ಗಾಳಿಸುದ್ದಿಗಳಿಗೆ ಕನಿಷ್ಟ ಒಂದೆರಡು ವರ್ಷಗಳ ಆಯುಷ್ಯ. ಆದರೆ ಈಗ ಅವರ ಆಪ್ತವಲಯ ಎನ್ನಲಾಗುತಿದ್ದ ಶಿಷ್ಯರು ಇಂದು ಬಿ.ಜೆ.ಪಿ. ಸೇರುವ ಮೂಲಕ ಜನರ ಅನುಮಾನಗಳಿಗೆ ಪುಷ್ಠಿ ನೀಡಿದ್ದಾರೆ.

ಇಂದು ಸಿದ್ಧಾಪುರದಲ್ಲಿ ನಡೆದ ಬಿ.ಜೆ.ಪಿ. ಪಕ್ಷದ ಕಾರ್ಯಕರ್ತರ ಸಭೆ ಮತ್ತು ಅನ್ಯಪಕ್ಷಗಳ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ಸೇರಿರುವವರಲ್ಲಿ ಪ್ರಮುಖರು ಹಲಗೇರಿ ಜಿ.ಪಂ. ಕ್ಷೇತ್ರದ ಮಾಜಿ ಸದಸ್ಯ ಈಶ್ವರ್ ನಾಯ್ಕ, ತಾಲೂಕಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಎನ್.ಎಂ, ನಾಯ್ಕ,ರಾಘವೇಂದ್ರ ಶಾಸ್ತ್ರಿ, ರಮಾನಂದ ಹೆಗಡೆ, ಜೆ.ಡಿ.ಎಸ್. ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷ ತಿಮ್ಮಪ್ಪ ಎಂ.ಕೆ. ಪ್ರಮುಖರು. ಇವರಲ್ಲಿ ಬಹುತೇಕರು ದೇಶಪಾಂಡೆ ಬಣದ ಷಣ್ಮುಖ ಗೌಡರ್ ಶಿಷ್ಯರು.

ಬಿ.ಜೆ.ಪಿ. ಸಹಕಾರಿ ಕ್ಷೇತ್ರ, ಗ್ರಾ.ಪಂ. ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷಕ್ಕೆ ಹೊಸ ಕಾರ್ಯಕರ್ತರನ್ನು ಸೇರ್ಪಡೆ ಮಾಡಿಕೊಳ್ಳುತ್ತಿದೆ. ವಾಸ್ತವದಲ್ಲಿ ಬಿ.ಜೆ.ಪಿ. ಯಲ್ಲಿ ಎರಡ್ಮೂರು ಬಣಗಳಿದ್ದಾವಾದರೂ ಆ ಪಕ್ಷದ ಪ್ರಮುಖರು ಪಕ್ಷಕ್ಕೆ ಹೊಸಬರನ್ನು ಆಹ್ವಾನಿಸುತಿದ್ದಾರೆ. ಕಾಂಗ್ರೆಸ್ ನಲ್ಲಿ ಎರಡ್ಮೂರು ಬಣಗಳಿರುವುದು, ಹಣವಂತರು ಅನ್ಯ ಕ್ಷೇತ್ರ- ಊರುಗಳಿಂದ ವಲಸೆ ಬಂದು ಅಭ್ಯರ್ಥಿಗಳಾಗುವ ಪ್ರಯತ್ನಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಒಡೆದ ಮನೆಯಂತಾಗಿದೆ.

ಶಿರಸಿ ಕ್ಷೇತ್ರ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ-ದೇಶಗಳಲ್ಲಿ ಜನಸಾಮಾನ್ಯರು, ಬಹುಸಂಖ್ಯಾತ ಬಡವರ್ಗ ಕಾಂಗ್ರೆಸ್ ಪರವಾಗಿದೆ. ಆದರೆ ಕಾಂಗ್ರೆಸ್ ನಲ್ಲಿ ಮೃಧು ಹಿಂದುಂತ್ವವಾದಿಗಳು, ಅವಕಾಶವಾದಿಗಳು ಪಕ್ಷದಲ್ಲಿದ್ದು ಹಾನಿ ಮಾಡುತಿದ್ದಾರೆ ಎನ್ನಲಾಗುತ್ತಿದೆ. ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ.ದೇಶಪಾಂಡೆ ಅವರ ಶಿಷ್ಯ ವರ್ಗ ಕಾಂಗ್ರೆಸ್ ನಲ್ಲಿದ್ದು ಅನ್ಯ ಪಕ್ಷಗಳಿಗೆ ಸಹಕರಿಸುತಿದ್ದಾರೆ ಎನ್ನುವ ಆರೋಪಗಳೂ ಆಗಾಗ ಕೇಳಿ ಬರುತ್ತಿವೆ. ಇಂದಿನ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವ, ಸಂಸದ ಅನಂತ ಕುಮಾರ್ ಹೆಗಡೆ ಹೇಳಿರುವ ಮಾತು ‘ಈವರೆಗೆ ಮನಸು, ಹೃದಯದಲ್ಲಿ ಬಿ .ಜೆ.ಪಿ. ಪರವಾಗಿದ್ದವರು ಈಗ ಅಧೀಕೃತ ಬಿ.ಜೆ.ಪಿ. ಸೇರ್ಪಡೆಯಾಗಿದ್ದಾರೆ.’ ಏನೇನೋ ಅರ್ಥಗಳಿಗೆ ಕಾರಣವಾಗಿದೆ.

ಈ ಬೆಳವಣಿಗೆ ಬಗ್ಗೆ ಪ್ರತಿಕ್ರೀಯಿಸಿರುವ ಕೆಲವು ಕಾಂಗ್ರೆಸ್ ಮುಖಂಡರು ಪಕ್ಷದಲ್ಲಿದ್ದು ಹಾನಿ ಮಾಡುವುದಕ್ಕಿಂತ ಹೀಗೆ ಹೊರನಡೆದು ತಮ್ಮ ದಾರಿ ನೋಡಿಕೊಂಡರೆ ಕಾಂಗ್ರೆಸ್ ಗೇ ಅನುಕೂಲ ಎಂದಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *