ಮಾಜಿ ಸಚಿವ ಆರ್.ವಿ.ದೇಶಪಾಂಡೆ ಶಿಷ್ಯರು ಬಿ.ಜೆ.ಪಿ.ಗೆ!

ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಬಿ.ಜೆ.ಪಿ. ಸೇರುತ್ತಾರೆ ಎನ್ನುವ ಗಾಳಿಸುದ್ದಿಗಳಿಗೆ ಕನಿಷ್ಟ ಒಂದೆರಡು ವರ್ಷಗಳ ಆಯುಷ್ಯ. ಆದರೆ ಈಗ ಅವರ ಆಪ್ತವಲಯ ಎನ್ನಲಾಗುತಿದ್ದ ಶಿಷ್ಯರು ಇಂದು ಬಿ.ಜೆ.ಪಿ. ಸೇರುವ ಮೂಲಕ ಜನರ ಅನುಮಾನಗಳಿಗೆ ಪುಷ್ಠಿ ನೀಡಿದ್ದಾರೆ.

ಇಂದು ಸಿದ್ಧಾಪುರದಲ್ಲಿ ನಡೆದ ಬಿ.ಜೆ.ಪಿ. ಪಕ್ಷದ ಕಾರ್ಯಕರ್ತರ ಸಭೆ ಮತ್ತು ಅನ್ಯಪಕ್ಷಗಳ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ಸೇರಿರುವವರಲ್ಲಿ ಪ್ರಮುಖರು ಹಲಗೇರಿ ಜಿ.ಪಂ. ಕ್ಷೇತ್ರದ ಮಾಜಿ ಸದಸ್ಯ ಈಶ್ವರ್ ನಾಯ್ಕ, ತಾಲೂಕಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಎನ್.ಎಂ, ನಾಯ್ಕ,ರಾಘವೇಂದ್ರ ಶಾಸ್ತ್ರಿ, ರಮಾನಂದ ಹೆಗಡೆ, ಜೆ.ಡಿ.ಎಸ್. ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷ ತಿಮ್ಮಪ್ಪ ಎಂ.ಕೆ. ಪ್ರಮುಖರು. ಇವರಲ್ಲಿ ಬಹುತೇಕರು ದೇಶಪಾಂಡೆ ಬಣದ ಷಣ್ಮುಖ ಗೌಡರ್ ಶಿಷ್ಯರು.

ಬಿ.ಜೆ.ಪಿ. ಸಹಕಾರಿ ಕ್ಷೇತ್ರ, ಗ್ರಾ.ಪಂ. ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷಕ್ಕೆ ಹೊಸ ಕಾರ್ಯಕರ್ತರನ್ನು ಸೇರ್ಪಡೆ ಮಾಡಿಕೊಳ್ಳುತ್ತಿದೆ. ವಾಸ್ತವದಲ್ಲಿ ಬಿ.ಜೆ.ಪಿ. ಯಲ್ಲಿ ಎರಡ್ಮೂರು ಬಣಗಳಿದ್ದಾವಾದರೂ ಆ ಪಕ್ಷದ ಪ್ರಮುಖರು ಪಕ್ಷಕ್ಕೆ ಹೊಸಬರನ್ನು ಆಹ್ವಾನಿಸುತಿದ್ದಾರೆ. ಕಾಂಗ್ರೆಸ್ ನಲ್ಲಿ ಎರಡ್ಮೂರು ಬಣಗಳಿರುವುದು, ಹಣವಂತರು ಅನ್ಯ ಕ್ಷೇತ್ರ- ಊರುಗಳಿಂದ ವಲಸೆ ಬಂದು ಅಭ್ಯರ್ಥಿಗಳಾಗುವ ಪ್ರಯತ್ನಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಒಡೆದ ಮನೆಯಂತಾಗಿದೆ.

ಶಿರಸಿ ಕ್ಷೇತ್ರ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ-ದೇಶಗಳಲ್ಲಿ ಜನಸಾಮಾನ್ಯರು, ಬಹುಸಂಖ್ಯಾತ ಬಡವರ್ಗ ಕಾಂಗ್ರೆಸ್ ಪರವಾಗಿದೆ. ಆದರೆ ಕಾಂಗ್ರೆಸ್ ನಲ್ಲಿ ಮೃಧು ಹಿಂದುಂತ್ವವಾದಿಗಳು, ಅವಕಾಶವಾದಿಗಳು ಪಕ್ಷದಲ್ಲಿದ್ದು ಹಾನಿ ಮಾಡುತಿದ್ದಾರೆ ಎನ್ನಲಾಗುತ್ತಿದೆ. ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ.ದೇಶಪಾಂಡೆ ಅವರ ಶಿಷ್ಯ ವರ್ಗ ಕಾಂಗ್ರೆಸ್ ನಲ್ಲಿದ್ದು ಅನ್ಯ ಪಕ್ಷಗಳಿಗೆ ಸಹಕರಿಸುತಿದ್ದಾರೆ ಎನ್ನುವ ಆರೋಪಗಳೂ ಆಗಾಗ ಕೇಳಿ ಬರುತ್ತಿವೆ. ಇಂದಿನ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಕೇಂದ್ರ ಸಚಿವ, ಸಂಸದ ಅನಂತ ಕುಮಾರ್ ಹೆಗಡೆ ಹೇಳಿರುವ ಮಾತು ‘ಈವರೆಗೆ ಮನಸು, ಹೃದಯದಲ್ಲಿ ಬಿ .ಜೆ.ಪಿ. ಪರವಾಗಿದ್ದವರು ಈಗ ಅಧೀಕೃತ ಬಿ.ಜೆ.ಪಿ. ಸೇರ್ಪಡೆಯಾಗಿದ್ದಾರೆ.’ ಏನೇನೋ ಅರ್ಥಗಳಿಗೆ ಕಾರಣವಾಗಿದೆ.

ಈ ಬೆಳವಣಿಗೆ ಬಗ್ಗೆ ಪ್ರತಿಕ್ರೀಯಿಸಿರುವ ಕೆಲವು ಕಾಂಗ್ರೆಸ್ ಮುಖಂಡರು ಪಕ್ಷದಲ್ಲಿದ್ದು ಹಾನಿ ಮಾಡುವುದಕ್ಕಿಂತ ಹೀಗೆ ಹೊರನಡೆದು ತಮ್ಮ ದಾರಿ ನೋಡಿಕೊಂಡರೆ ಕಾಂಗ್ರೆಸ್ ಗೇ ಅನುಕೂಲ ಎಂದಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *