ಜಾರಿಯಾಗದ ಕಸ್ತೂರಿ ರಂಗನ್ ವರದಿ: ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸಲು ಮಲೆನಾಡು ಜನತೆ ನಿರ್ಧಾರ

ಆರ್ಥಿಕತೆ ಮತ್ತು ಪರಿಸರ ವಿಜ್ಞಾನದ ಚರ್ಚೆಯು ಪ್ರಬಲವಾಗಿರುವ ಮಲೆನಾಡು ಪ್ರದೇಶದಲ್ಲಿ, ಕಾಂಗ್ರೆಸ್ ಮತ್ತು ಬಿಜೆಪಿ ಒಂದು ಹಂತದಲ್ಲಿ ಒಂದಾಗಿ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿವೆ.

Representational image

ಚಿಕ್ಕಮಗಳೂರು: ಆರ್ಥಿಕತೆ ಮತ್ತು ಪರಿಸರ ವಿಜ್ಞಾನದ ಚರ್ಚೆಯು ಪ್ರಬಲವಾಗಿರುವ ಮಲೆನಾಡು ಪ್ರದೇಶದಲ್ಲಿ, ಕಾಂಗ್ರೆಸ್ ಮತ್ತು ಬಿಜೆಪಿ ಒಂದು ಹಂತದಲ್ಲಿ ಒಂದಾಗಿ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿವೆ.

ಗುರುವಾರ ಎಲ್ಲಾ ಪಕ್ಷಗಳು ಸಂಗಮೇಶ್ವರಪೇಟೆಯಲ್ಲಿ ಭೇಟಿಯಾಗಿದ್ದರು.  ಕಾಂಗ್ರೆಸ್ ನಾಯಕ ಬಿಎನ್ ಸಂತೋಷ್. ಬಿಜೆಪಿ ಘಟಕದ ಅಧ್ಯಕ್ಷ ರವಿಗೌಡ ಹೂಗೇರಿ ನೇತೃತ್ವದಲ್ಲಿ ಸಭೆ ಸೇರಿ, ಖಾಂಡ್ಯಾ ಹೋಬಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವದನ, ಬಿಡಾರೆ, ಹೂಯಿಗೆರೆ ಮತ್ತು ಕಡವಂತಿ ಪಂಚಾಯಿತಿ ಚುನಾವಣೆಗಳನ್ನು ಬಹಿಷ್ಕರಿಸಲು ನಿರ್ಣಯ ಕೈಗೊಂಡಿದ್ದಾರೆ.

ಆನ್‌ಲೈನ್‌ ಸೇರಿದಂತೆ ಯಾವುದೇ ವಿಧದಲ್ಲೂ ಯಾರೂ ಕೂಡ ನಾಮಪತ್ರ ಸಲ್ಲಿಸಬಾರದು ಎಂದು ಖಾಂಡ್ಯ ನಾಗರೀಕ ಹಿತರಕ್ಷಣಾ ವೇದಿಕೆ ಹಾಗೂ ಸರ್ವಜನಿಕರು ಸೂಚಿಸಿದ್ದಾರೆ. ಶತಮಾನಗಳ ಬದುಕೆ ಬೀದಿಗೆ ಬೀಳುವಾಗ ಚುನಾವಣೆ ಬೇಕೇ ಎಂಬ ಪ್ರಶ್ನೆ ಮಲೆನಾಡಿಗರಲ್ಲಿ ಮೂಡಿದೆ. ಈಗಾಗಲೇ ಮಲೆನಾಡಿಗರ ಬದುಕಿನ ಮೇಲೆ ಹುಲಿ ಯೋಜನೆ, ಬಫರ್
ಝೋನ್‌, ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯದ ತೂಗುಗತ್ತಿ ತೂಗುತ್ತಿದೆ. ಸರ್ಕಾರದ ಈ ಯೋಜನೆಗಳಿಂದ ಜಿಲ್ಲೆಯ ಮಲೆನಾಡು ಭಾಗದ ನೂರಾರು ಗ್ರಾಮಗಳೇ ಕಣ್ಮರೆಯಾಗಲಿವೆ. ಈ ಕಾರಣಕ್ಕೆ ಮಲೆನಾಡಿಗರು ಚುನಾವಣಾ ಬಹಿಷ್ಕಾರಕ್ಕೆ ಸಿದ್ಧತೆ ನಡೆಸಿದ್ದಾರೆ.

ಖಾಂಡ್ಯ ಹೋಬಳಿಯ ಕಡವಂತಿ, ಹುಯಿಗೆರೆ, ದೇವದಾನ ಹಾಗೂ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಈಗಾಗಲೇ ಅಲ್ಲಲ್ಲಿ ಬ್ಯಾನರ್ ಕಟ್ಟಿದ್ದು, ಚುನಾವಣೆಗಿಂತ ಬದುಕು ದೊಡ್ಡದ್ದಾಗಿರುವ ಕಾರಣ ಮಲೆನಾಡಲ್ಲಿ ಚುನಾವಣೆ ಬಹಿಷ್ಕಾರದ ಕೂಗು ಜೋರಾಗಿದೆ.

ಈಗಾಗಲೇ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತೀ ಭೂತ್ ಗೆ ಒಂದೊಂದು ಬ್ಯಾನರ್ ಕಟ್ಟಲು ಮುಂದಾಗಿದ್ದಾರೆ. ಯಾರೂ ನಾಮಪತ್ರ ಸಲ್ಲಿಸದೇ ಅಧಿಕಾರಿಗಳಿಗೆ ಎಚ್ಚರಿಕೆಯ ಸಂದೇಶ ನೀಡಲು ಮುಂದಾಗಿದ್ದಾರೆ. ಇದು ನಮ್ಮ ಅಳಿವು-ಉಳಿವಿನ ಪ್ರಶ್ನೆ. ಜೀವನವನ್ನ ಬಲಿ ಕೊಡುವ ಬದಲು ಚುನಾವಣೆ ಬಹಿಷ್ಕಾರ ಮಾಡಿ ಸಂದೇಶ ರವಾನಿಸಲು ನಿರ್ಧರಿಸಿದ್ದಾರೆ.

ಐದು ವರ್ಷಗಳ ಅವಧಿಯ ಸದಸ್ಯ ತ್ವಕ್ಕೆ ಬದುಕನ್ನ ಬಲಿ ಕೊಡುವ ಬದಲು ಸರ್ಕಾರಕ್ಕೆ ಎಚ್ಚರಿಕೆ ನೀಡೋಣ ಎಂದು ಖಾಂಡ್ಯ ನಾಗರೀಕ ಹಿತರಕ್ಷಣಾ ವೇದಿಕೆ ಮುಂದಾಗಿದೆ. ಆದ್ದರಿಂದ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದೆ ಮತದಾರರು ಮತದಾನ ಮಾಡದೆ ಚುನಾವಣೆ ಬಹಿಷ್ಕಾರಕ್ಕೆ ಬೆಂಬಲ ನೀಡಬೇಕೆಂದು ಖಾಂಡ್ಯ ಹೋಬಳಿ ಹಿತರಕ್ಷಣಾ ಸಮಿತಿ ಮತದಾರರಲ್ಲಿ ಮನವಿ ಮಾಡಿದೆ

ಈ ಸಂಬಂಧ ಪ್ರತಿಕ್ರಿಯಿಸಿರುವ ಶೃಂಗೇರಿ ಶಾಸಕ ಟಿಡಿ ರಾಜೇಗೌಡ ಸಿಎಂ ಯಡಿಯೂರಪ್ಪ ಸಮಸ್ಯೆ ಬಗೆಹರಿಸಲು ವಿಫಲರಾಗಿದ್ದಾರೆ, ಹೀಗಾಗಿ ತಾವು ಜನತೆ ಪರವಾಗಿ ನಿಲ್ಲುವುದಾಗಿ ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *