bjp-jds-congress- ಅದಲು ಬದಲು ಇಲ್ಲಿವೆ ನೀವು ನೋಡಿರದ ಮುಖಗಳ ಫೋಟೊ

ರಾಜ್ಯದಲ್ಲಿ ಆಡಳಿತಕ್ಕಾಗಿ ಅಲ್ಲಿಂದ ಇಲ್ಲಿಗೆ ಇಲ್ಲಿಂದ ಅಲ್ಲಿಗೆ ನೆಗೆಯುವ ಚಾಳಿ ಈಗ ಹೆಚ್ಚುತ್ತಿದೆ. ಉತ್ತರ ಕನ್ನಡದಲ್ಲಿ ಗ್ರಾಮ ಪಂಚಾಯತ್ ಚುನಾವಣೆ, ಪಕ್ಷದ ಅಧ್ಯಕ್ಷತೆಯ ಹುದ್ದೆ ಬದಲು ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಬಿ.ಜೆ.ಪಿ.ಗೆ, ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಗಳಿಂದ ಕಾಂಗ್ರೆಸ್ ಗೆ ಮುಖಂಡರು, ಕಾರ್ಯಕರ್ತರ ವಲಸೆ ಶುರುವಾಗಿದೆ. ಹೀಗೆ ಪಕ್ಷ ಬದಲಾವಣೆ ಮಾಡಿದ ಕೆಲವರ ಚಿತ್ರಗಳು ಇಲ್ಲಿವೆ.

2024 ಚುನಾವಣೆಗೆ ತಯಾರಿ: ಬಿಜೆಪಿ ವಿಭಾಗಗಳ ಸಂಖ್ಯೆ 18 ರಿಂದ 28 ಕ್ಕೆ ಏರಿಕೆ; ವಿವರಗಳು ಹೀಗಿವೆ…

2024 ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ತನ್ನ ಆಂತರಿಕ ವಿಭಾಗಗಳನ್ನು 18-28 ಕ್ಕೆ ಏರಿಕೆ ಮಾಡಲು ನಿರ್ಧರಿಸಿದ್ದು, ಹೆಚ್ಚುವರಿ ಕಾರ್ಯಕರ್ತರನ್ನು ಒಳಗೊಳ್ಳಲಿದೆ. 

Published: 07th December 2020 11:36 AM  |   Last Updated: 07th December 2020 12:23 PM   |  A+A A-

BJP

ನವದೆಹಲಿ: 2024 ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ತನ್ನ ಆಂತರಿಕ ವಿಭಾಗಗಳನ್ನು 18-28 ಕ್ಕೆ ಏರಿಕೆ ಮಾಡಲು ನಿರ್ಧರಿಸಿದ್ದು, ಹೆಚ್ಚುವರಿ ಕಾರ್ಯಕರ್ತರನ್ನು ಒಳಗೊಳ್ಳಲಿದೆ. 

ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವುದಕ್ಕಾಗಿಯೇ ಪ್ರತ್ಯೇಕ ವಿಭಾಗಗಳನ್ನು ಬಿಜೆಪಿ ಒಳಗೊಳ್ಳಲಿದ್ದು, ಸಾಮಾಜಿಕ ಜಾಲತಾಣ ವಿಭಾಗವನ್ನು ಐಟಿ ವಿಭಾಗದಿದ ಬೇರ್ಪಡಿಸಿ ಪ್ರತ್ಯೇಕಗೊಳಿಸಲು ಯೋಜನೆ ರೂಪಿಸಲಾಗಿದ್ದು, ಈ ವಿಭಾಗ ತಂತ್ರಜ್ಞಾನ ಅಳವಡಿಕೆಯ ಬಗ್ಗೆಯೂ ಗಮನ ಹರಿಸಲಿದೆ.

ಸ್ವಚ್ಛ ಭಾರತ ಅಭಿಯಾನ, ಭೇಟಿ ಬಚಾವೋ-ಭೇಟಿ ಪಡಾವೋ ಹಾಗೂ ನಮಾಮಿ ಗಂಗೆ ವಿಭಾಗಗಳೂ ಅಸ್ತಿತ್ವಕ್ಕೆ ಬರಲಿದ್ದು, ಅದರದ್ದೇ ಆದ ಜವಾಬ್ದಾರಿಯನ್ನು ನಿರ್ವಹಿಸಲಿವೆ. ಹಿಂದೆಂದೂ ಈ ರೀತಿಯ ವಿಭಾಗಗಳು ಬಿಜೆಪಿಯಲ್ಲಿರಲಿಲ್ಲ ಎಂಬುದು ಗಮನಾರ್ಹ.

ಪ್ರತಿಯೊಂದು ಶಕ್ತಿ ಕೇಂದ್ರಗಳಲ್ಲಿಯೂ ಸ್ವಯಂ ಸೇವಕರ ತಂಡವನ್ನು ರಚಿಸಿ ಪ್ರಮುಖ ಸಂದರ್ಭಗಳಲ್ಲಿ ಹಾಗೂ ವಾರಕ್ಕೆ ಒಮ್ಮೆ ಸ್ವಚ್ಛ ಭಾರತ ಅಭಿಯಾನ ಕೈಗೊಳ್ಳುವಂತೆ ಮಾಡಬೇಕು, ಏಕ ಬಳಕೆ ಪ್ಲಾಸ್ಟಿಕ್ ನ್ನು ಬಳಕೆ ಮಾಡದಂತೆ ಸಮಾಜಿಕ ಅರಿವು ಮೂಡಿಸಬೇಕು, ಸಮಾನ ಮನಸ್ಕ ಸಂಘಟನೆಗಳನ್ನು ಒಗ್ಗೂಡಿಸುವ ವೇದಿಕೆಯನ್ನು ಸೃಷ್ಟಿಸಬೇಕು ಎಂದು ಬಿಜೆಪಿಯ ಕೈಪಿಡಿಯಲ್ಲಿ ತಿಳಿಸಲಾಗಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *