bhaarat bund-ನಾಳೆಯ ಭಾರತ್ ಬಂದ್ ಹಿನ್ನೆಲೆ,ಉತ್ತರಕನ್ನಡ ಜಿಲ್ಲೆಯ ಬೆಂಬಲ

ರೈತ ವಿರೋಧಿ ಮಸೂದೆಗಳನ್ನು ಹಿಂದೆ ಪಡೆಯಲು ಆಗ್ರಹಿಸಿ ಮಂಗಳವಾರ ದೇಶದಾದ್ಯಂತ ನಡೆಯಲಿರುವ ಬಂದ್ ಗೆ ಉತ್ತರ ಕನ್ನಡದಲ್ಲಿ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದೆ.

ಜಿಲ್ಲೆಯ ನಾನಾ ತಾಲೂಕುಗಳ ಕಮ್ಯುನಿಸ್ಟ್ ಸಂಘಟನೆಗಳು, ಸಮಾಜವಾದಿ ಪಕ್ಷ, ಕಾಂಗ್ರೆಸ್ ಪಕ್ಷ ಹಾಗೂ ಇತರ ರೈತಪರ ಸಂಘಟನೆಗಳು ನಾಳೆಯ ಭಾರತ್ ಬಂದ್ ಗೆ ಬೆಂಬಲ ಸೂಚಿಸಿವೆ.

‘ನಾಳೆಯ ಭಾರತ್ ಬಂದ್ ಗೆ ಕಾಂಗ್ರೆಸ್ ಬೆಂಬಲವಿದೆ. ಪಕ್ಷದಿಂದ ಬಂದ್ ಅಥವಾ ಮನವಿ ಅರ್ಪಣೆ ಬಗ್ಗೆ ಸೂಚನೆ ನೀಡದಿರುವ ಹಿನ್ನೆಲೆಯಲ್ಲಿ ಮಂಗಳವಾರ ಪಕ್ಷದಿಂದ ಕಾರ್ಯಕ್ರಮಗಳಿಲ್ಲ ಆದರೆ ಬಂದ್ ಗೆ ನಮ್ಮ ಬೆಂಬಲವಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ತಿಳಿಸಿದ್ದಾರೆ.

ನಾಳೆಯ ಬಂದ್ ಹಿನ್ನೆಲೆಯಲ್ಲಿ ತಹಸಿಲ್ಧಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ನೀಡುವ ಕಾರ್ಯಕ್ರಮವಿದ್ದು . ರೈತ ವಿರೋಧಿ ಮಸೂದೆಗಳ ವಾಪಸ್ಸಾತಿಗೆ ನಮ್ಮ ಬೆಂಬಲವಾಗಿ ನಾವೂ ಭಾರತಬಂದ್ ನಲ್ಲಿ ಪಾಲ್ಗೊಳ್ಳುತ್ತೇವೆ. ನಾವೆಲ್ಲಾ ರೈತರ ಪರವಾಗಿದ್ದೇವೆ ಎಂದು ತಿಳಿಸಿರುವ ಕಮ್ಯುನಿಸ್ಟ್, ಸಮಾಜವಾದಿ, ಪ್ರಗತಿಪರಮುಖಂಡರಾದ ಯಮುನಾ ಗಾಂವ್ಕರ್, ನಾಗರಾಜ್ ನಾಯ್ಕ, ಕನ್ನೇಶ್ ಕೋಲಶಿರ್ಸಿ ಹಾಗೂ ಕರ್ನಾಟಕ ರಣಧೀರ ಪಡೆ ಜಿಲ್ಲಾಧ್ಯಕ್ಷ ಹೇಮಂತ್ ನಾಯ್ಕ ನಾಳೆಯ ಭಾರತ ಬಂದ್ ಮತ್ತು ಸಿದ್ಧಾಪುರದ ಮನವಿ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಬಂಧುಗಳೇ. *ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲು ಭಾರತ ಸರ್ಕಾರವನ್ನು ಒತ್ತಾಯಿಸಿ ನಾಳೆ ನಡೆಯುವ ಭಾರತ ಬಂದ್ ಗೆ ಸಮಾಜವಾದಿ ಪಕ್ಷದ ಬೆಂಬಲ .

* ಕೆಂದ್ರ ಸರಕಾರವು “ಸರ್ವಾಧಿಕಾರ ” ದ ಆಡಳಿತ ನಡೆಸುತ್ತಿದ್ದು, ಕಾರ್ಪೋರೇಟ್ ಕಂಪನಿಗಳ ಕೈಗೊಂಬೆ ಸರ್ಕಾರವಾಗಿದೆ. ಭಾರತ ಸರ್ಕಾರ ಸುಗ್ರೀವಾಜ್ಞೆಗಳ ಮೂಲಕ ಜಾರಿಗೊಳಿಸಲಿರುವರೈತರ ಪಾಲಿನ ಮೂರು ಕರಾಳ ಕಾಯ್ದೆಗಳು.1. ಕಾಂಟ್ರ್ಯಾಕ್ಟ್ ಫಾರ್ಮಿಂಗ್ ಮಸೂದೆ – ರೈತರ ಬೆಲೆ ಖಚಿತತೆ ಮತ್ತು ಹೊಲ ಸೇವೆಗಳು (ಸಶಸ್ತ್ರೀಕರಣ ಮತ್ತು ರಕ್ಷಣೆ)2. ರೈತರ ಉತ್ಪನ್ನ , ವ್ಯಾಪಾರ , ವ್ಯವಹಾರ (ಉತ್ತೇಜಕ ಹಾಗೂ ಸವಲತ್ತು) ಕಾಯ್ದೆ 2020 (ಎಪಿಎಂಸಿ ಹಾಗೂ ಎಂ.ಎಸ್.ಪಿ)3. ಆಹಾರ ಸರಕುಗಳನ್ನು ದಾಸ್ತಾನು ಮಾಡಿಕೊಳ್ಳಲು ಅವಕಾಶ ಮಾಡಿಕೊಡುವ ಕಾಯ್ದೆ .

ಈ ಮೂರೂ ಕಾಯ್ದೆಗಳು ರೈತರನ್ನು ಕಾರ್ಪೋರೇಟ್ ಕಂಪೆನಿಗಳ ಕಪಿಮುಷ್ಠಿಯಲ್ಲಿ ಕಟ್ಟಿ ಹಾಕುವ ಕರಾಳ ಕಾಯ್ದೆಗಳಾಗಿವೆ . ರೈತರ ಸ್ವತಂತ್ರ ಹಾಗು ಸ್ವಾವಲಂಬನೆಯ ಬದುಕನ್ನು ನಾಶಗೊಳಿಸಿ ಕಾರ್ಪೋರೇಟ್ ಕಂಪೆನಿಗಳಿಗೆ ಸಂಪೂರ್ಣ ಅನುಕೂಲ ಮಾಡಿಕೊಡುವ ಕಾಯ್ದೆಗಳಾಗಿವೆ . ಹಾಗಾಗಿ ಸಮಾಜವಾದಿ ಪಕ್ಷವು ಅಖಿಲೇಶ್ ಯಾದವ್ ರವರ ನೇತೃತ್ವದಲ್ಲಿ ದೇಶದ ರೈತರ ಹಿತಕ್ಕಾಗಿ, ರೈತರ ರಾಷ್ಟ್ರವ್ಯಾಪಿ ಬಂದ್ ಗೆ ಬೆಂಬಲ ಘೋಷಿಸಿದೆ. ರೈತ, ಕಾರ್ಮಿಕ, ದಲಿತ, ಪ್ರಗತಿಪರ, ಸಂಘಟನೆಗಳ ನೇತೃತ್ವದಲ್ಲಿ ರೈತ ವಿರೋಧಿ ಮಸೂದೆ ಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಮತ್ತು ದೆಹಲಿಯಲ್ಲಿ ನಡೆಯುತ್ತಿರುವ, ಚಾರಿತ್ರಿಕ ಪ್ರತಿಭಟನೆಗೆ ನಮ್ಮ ಪಕ್ಷದ ರಾಜ್ಯ ಘಟಕದ ವತಿಯಿಂದ ಕೂಡ ಕರ್ನಾಟಕ ರಾಜ್ಯಾಧ್ಯಕ್ಷರಾದ ರಾಬಿನ್ ಮ್ಯಾಥ್ಯೂಸ್ ರವರ ನೇತೃತ್ವದಲ್ಲಿ ಬೆಂಬಲ ಘೋಷಿಸಿದೆ. ನಾಳೆ ನಡೆಯುವ ಭಾರತ ಬಂದ್ ಗೆ ಸಮಾಜವಾದಿ ಪಕ್ಷ ಬೆಂಬಲ ನೀಡುತ್ತದೆ ಮತ್ತು ರೈತ ವಿರೋಧಿ ಮಸೂದೆಯನ್ನು ವಾಪಸ್ ಪಡೆಯಲು ಒತ್ತಾಯಿಸುತ್ತದೆ. ವಂದನೆಗಳೊಂದಿಗೆ-

– ನಾಗರಾಜ ನಾಯ್ಕ ಜಿಲ್ಲಾಧ್ಯಕ್ಷರು ಉತ್ತರ ಕನ್ನಡ ಸಮಾಜವಾದಿ ಪಕ್ಷ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *