bhaarat bund-ನಾಳೆಯ ಭಾರತ್ ಬಂದ್ ಹಿನ್ನೆಲೆ,ಉತ್ತರಕನ್ನಡ ಜಿಲ್ಲೆಯ ಬೆಂಬಲ

ರೈತ ವಿರೋಧಿ ಮಸೂದೆಗಳನ್ನು ಹಿಂದೆ ಪಡೆಯಲು ಆಗ್ರಹಿಸಿ ಮಂಗಳವಾರ ದೇಶದಾದ್ಯಂತ ನಡೆಯಲಿರುವ ಬಂದ್ ಗೆ ಉತ್ತರ ಕನ್ನಡದಲ್ಲಿ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದೆ.

ಜಿಲ್ಲೆಯ ನಾನಾ ತಾಲೂಕುಗಳ ಕಮ್ಯುನಿಸ್ಟ್ ಸಂಘಟನೆಗಳು, ಸಮಾಜವಾದಿ ಪಕ್ಷ, ಕಾಂಗ್ರೆಸ್ ಪಕ್ಷ ಹಾಗೂ ಇತರ ರೈತಪರ ಸಂಘಟನೆಗಳು ನಾಳೆಯ ಭಾರತ್ ಬಂದ್ ಗೆ ಬೆಂಬಲ ಸೂಚಿಸಿವೆ.

‘ನಾಳೆಯ ಭಾರತ್ ಬಂದ್ ಗೆ ಕಾಂಗ್ರೆಸ್ ಬೆಂಬಲವಿದೆ. ಪಕ್ಷದಿಂದ ಬಂದ್ ಅಥವಾ ಮನವಿ ಅರ್ಪಣೆ ಬಗ್ಗೆ ಸೂಚನೆ ನೀಡದಿರುವ ಹಿನ್ನೆಲೆಯಲ್ಲಿ ಮಂಗಳವಾರ ಪಕ್ಷದಿಂದ ಕಾರ್ಯಕ್ರಮಗಳಿಲ್ಲ ಆದರೆ ಬಂದ್ ಗೆ ನಮ್ಮ ಬೆಂಬಲವಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ತಿಳಿಸಿದ್ದಾರೆ.

ನಾಳೆಯ ಬಂದ್ ಹಿನ್ನೆಲೆಯಲ್ಲಿ ತಹಸಿಲ್ಧಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ನೀಡುವ ಕಾರ್ಯಕ್ರಮವಿದ್ದು . ರೈತ ವಿರೋಧಿ ಮಸೂದೆಗಳ ವಾಪಸ್ಸಾತಿಗೆ ನಮ್ಮ ಬೆಂಬಲವಾಗಿ ನಾವೂ ಭಾರತಬಂದ್ ನಲ್ಲಿ ಪಾಲ್ಗೊಳ್ಳುತ್ತೇವೆ. ನಾವೆಲ್ಲಾ ರೈತರ ಪರವಾಗಿದ್ದೇವೆ ಎಂದು ತಿಳಿಸಿರುವ ಕಮ್ಯುನಿಸ್ಟ್, ಸಮಾಜವಾದಿ, ಪ್ರಗತಿಪರಮುಖಂಡರಾದ ಯಮುನಾ ಗಾಂವ್ಕರ್, ನಾಗರಾಜ್ ನಾಯ್ಕ, ಕನ್ನೇಶ್ ಕೋಲಶಿರ್ಸಿ ಹಾಗೂ ಕರ್ನಾಟಕ ರಣಧೀರ ಪಡೆ ಜಿಲ್ಲಾಧ್ಯಕ್ಷ ಹೇಮಂತ್ ನಾಯ್ಕ ನಾಳೆಯ ಭಾರತ ಬಂದ್ ಮತ್ತು ಸಿದ್ಧಾಪುರದ ಮನವಿ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಬಂಧುಗಳೇ. *ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲು ಭಾರತ ಸರ್ಕಾರವನ್ನು ಒತ್ತಾಯಿಸಿ ನಾಳೆ ನಡೆಯುವ ಭಾರತ ಬಂದ್ ಗೆ ಸಮಾಜವಾದಿ ಪಕ್ಷದ ಬೆಂಬಲ .

* ಕೆಂದ್ರ ಸರಕಾರವು “ಸರ್ವಾಧಿಕಾರ ” ದ ಆಡಳಿತ ನಡೆಸುತ್ತಿದ್ದು, ಕಾರ್ಪೋರೇಟ್ ಕಂಪನಿಗಳ ಕೈಗೊಂಬೆ ಸರ್ಕಾರವಾಗಿದೆ. ಭಾರತ ಸರ್ಕಾರ ಸುಗ್ರೀವಾಜ್ಞೆಗಳ ಮೂಲಕ ಜಾರಿಗೊಳಿಸಲಿರುವರೈತರ ಪಾಲಿನ ಮೂರು ಕರಾಳ ಕಾಯ್ದೆಗಳು.1. ಕಾಂಟ್ರ್ಯಾಕ್ಟ್ ಫಾರ್ಮಿಂಗ್ ಮಸೂದೆ – ರೈತರ ಬೆಲೆ ಖಚಿತತೆ ಮತ್ತು ಹೊಲ ಸೇವೆಗಳು (ಸಶಸ್ತ್ರೀಕರಣ ಮತ್ತು ರಕ್ಷಣೆ)2. ರೈತರ ಉತ್ಪನ್ನ , ವ್ಯಾಪಾರ , ವ್ಯವಹಾರ (ಉತ್ತೇಜಕ ಹಾಗೂ ಸವಲತ್ತು) ಕಾಯ್ದೆ 2020 (ಎಪಿಎಂಸಿ ಹಾಗೂ ಎಂ.ಎಸ್.ಪಿ)3. ಆಹಾರ ಸರಕುಗಳನ್ನು ದಾಸ್ತಾನು ಮಾಡಿಕೊಳ್ಳಲು ಅವಕಾಶ ಮಾಡಿಕೊಡುವ ಕಾಯ್ದೆ .

ಈ ಮೂರೂ ಕಾಯ್ದೆಗಳು ರೈತರನ್ನು ಕಾರ್ಪೋರೇಟ್ ಕಂಪೆನಿಗಳ ಕಪಿಮುಷ್ಠಿಯಲ್ಲಿ ಕಟ್ಟಿ ಹಾಕುವ ಕರಾಳ ಕಾಯ್ದೆಗಳಾಗಿವೆ . ರೈತರ ಸ್ವತಂತ್ರ ಹಾಗು ಸ್ವಾವಲಂಬನೆಯ ಬದುಕನ್ನು ನಾಶಗೊಳಿಸಿ ಕಾರ್ಪೋರೇಟ್ ಕಂಪೆನಿಗಳಿಗೆ ಸಂಪೂರ್ಣ ಅನುಕೂಲ ಮಾಡಿಕೊಡುವ ಕಾಯ್ದೆಗಳಾಗಿವೆ . ಹಾಗಾಗಿ ಸಮಾಜವಾದಿ ಪಕ್ಷವು ಅಖಿಲೇಶ್ ಯಾದವ್ ರವರ ನೇತೃತ್ವದಲ್ಲಿ ದೇಶದ ರೈತರ ಹಿತಕ್ಕಾಗಿ, ರೈತರ ರಾಷ್ಟ್ರವ್ಯಾಪಿ ಬಂದ್ ಗೆ ಬೆಂಬಲ ಘೋಷಿಸಿದೆ. ರೈತ, ಕಾರ್ಮಿಕ, ದಲಿತ, ಪ್ರಗತಿಪರ, ಸಂಘಟನೆಗಳ ನೇತೃತ್ವದಲ್ಲಿ ರೈತ ವಿರೋಧಿ ಮಸೂದೆ ಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿ ಮತ್ತು ದೆಹಲಿಯಲ್ಲಿ ನಡೆಯುತ್ತಿರುವ, ಚಾರಿತ್ರಿಕ ಪ್ರತಿಭಟನೆಗೆ ನಮ್ಮ ಪಕ್ಷದ ರಾಜ್ಯ ಘಟಕದ ವತಿಯಿಂದ ಕೂಡ ಕರ್ನಾಟಕ ರಾಜ್ಯಾಧ್ಯಕ್ಷರಾದ ರಾಬಿನ್ ಮ್ಯಾಥ್ಯೂಸ್ ರವರ ನೇತೃತ್ವದಲ್ಲಿ ಬೆಂಬಲ ಘೋಷಿಸಿದೆ. ನಾಳೆ ನಡೆಯುವ ಭಾರತ ಬಂದ್ ಗೆ ಸಮಾಜವಾದಿ ಪಕ್ಷ ಬೆಂಬಲ ನೀಡುತ್ತದೆ ಮತ್ತು ರೈತ ವಿರೋಧಿ ಮಸೂದೆಯನ್ನು ವಾಪಸ್ ಪಡೆಯಲು ಒತ್ತಾಯಿಸುತ್ತದೆ. ವಂದನೆಗಳೊಂದಿಗೆ-

– ನಾಗರಾಜ ನಾಯ್ಕ ಜಿಲ್ಲಾಧ್ಯಕ್ಷರು ಉತ್ತರ ಕನ್ನಡ ಸಮಾಜವಾದಿ ಪಕ್ಷ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *