ಇಂದಿನಿಂದ ವಿಧಾನಮಂಡಲದ ಚಳಿಗಾಲದ ಅಧಿವೇಶನ: ವಿವಾದಿತ ಮಸೂದೆ ಮಂಡನೆ, ಬಿಜೆಪಿ-ಕಾಂಗ್ರೆಸ್ ಜಟಾಪಟಿ ನಿರೀಕ್ಷೆ

ರಾಜ್ಯದಲ್ಲಿ ಸೋಮವಾರದಿಂದ ವಿಧಾನಮಂಡಲದ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಈ ಬಾರಿಯ ಅಧಿವೇಶನದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ವಿವಾದಿತ ಮಸೂದೆಗಳನ್ನು ಮಂಡನೆ ಮಾಡುವ ಸಾಧ್ಯತೆಗಳಿದ್ದು, ಇದೇ ವೇಳೆ ಸರ್ಕಾರದ ಹಲವು ವೈಫಲ್ಯಗಳನ್ನು ಸಭೆಯಲ್ಲಿ ಎತ್ತಿ ಹಿಡಿಯಲು ವಿರೋಧ ಪಕ್ಷಗಳು ಸಜ್ಜಾಗಿವೆ. 

Speaker Vishweshwara Hegde Kageri inspects the Assembly hall ahead of the winter session

ಬೆಂಗಳೂರು: ರಾಜ್ಯದಲ್ಲಿ ಸೋಮವಾರದಿಂದ ವಿಧಾನಮಂಡಲದ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಈ ಬಾರಿಯ ಅಧಿವೇಶನದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ವಿವಾದಿತ ಮಸೂದೆಗಳನ್ನು ಮಂಡನೆ ಮಾಡುವ ಸಾಧ್ಯತೆಗಳಿದ್ದು, ಇದೇ ವೇಳೆ ಸರ್ಕಾರದ ಹಲವು ವೈಫಲ್ಯಗಳನ್ನು ಸಭೆಯಲ್ಲಿ ಎತ್ತಿ ಹಿಡಿಯಲು ವಿರೋಧ ಪಕ್ಷಗಳು ಸಜ್ಜಾಗಿವೆ. 

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ರೈತರು ಮಂಗಳವಾರ ಭಾರತ್ ಬಂದ್’ಗೆ ಕರೆ ನೀಡಿರುವಾಗಲೇ ರಾಜ್ಯ ಸರ್ಕಾರವು ಎಪಿಎಂಸಿ ತಿದ್ದುಪಡಿ ವಿಧೇಯಕ, ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ವಿಧೇಯಕಗಳನ್ನು ವಿಧಾನಪರಿಷತ್’ನಲ್ಲಿ ಮರುಮಂಡನೆ ಮಾಡಿ ಅಂಗೀಕಾರ ಪಡೆಯಲು ಮುಂದಾಗಿದೆ. ಜೊತೆಗೆ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಹಾಗೂ ಗೋಹತ್ಯ ನಿಷೇಧ ಸೇರಿದಂತೆ ಮಹತ್ವದ ಮಸೂದೆಗಳನ್ನು ಮಂಡಿಸಲು ಸಜ್ಜಾಗಿದ್ದು, ಇಂದು ನಡೆಯುವ ಅಧಿವೇಶನ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ. 

ಗೋಹತ್ಯೆ ನಿಷೇಧ ಮಸೂದೆ ಮಂಡನೆ, ವಿಧಾನಪರಿಷತ್ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ, ಒಂದು ದೇಶ, ಒಂದು ಚುನಾವಣೆ ಚರ್ಚೆ, ಎಲ್ಲಕ್ಕಿಂತಲೂ ಮಿಗಿಲಾಗಿ ವಿಧಾನಪರಿಷತ್ ನಲ್ಲಿ ಸೋಲಾಗಿದ್ದ ಕರ್ನಾಟಕ ಭೂ ಸುಧಾರಣೆ ವಿಧೇಯಕಕ್ಕೆ ಅಂಗೀಕಾರ ಪಡೆಯಲು ಸರ್ಕಾರ ಸಿದ್ಧತೆ ನಡೆಸಿದೆ. ಇದರ ವಿರುದ್ಧ ಹೋರಾಡುವ ಜೊತೆಗೆ ನೆರೆ ನಿರ್ವಹಣೆ ವೈಫಲ್ಯ, ರಾಜ್ಯದ ಆರ್ಥಿಕ ಸ್ಥಿತಿಗತಿ ಸೇರಿ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹರಿಹಾಯಲು ಕಾಂಗ್ರೆಸ್ ಕೂಡ ಸಿದ್ಧತೆ ನಡೆಸಿದೆ. 

ಈ ನಡುವೆ ಸದನದಲ್ಲಿ ರೈತರಿಗೆ ಸಂಬಂಧಿಸಿದ ವಿಚಾರಗಳು ಹಾಗೂ ಪ್ರವಾಹಪೀಡಿತರ ವಿಚಾರಗಳನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಹರಿಹಾಯಲು ಜೆಡಿಎಸ್ ಕೂಡ ಸಜ್ಜುಕೊಂಡಿದೆ. 

ಏಳು ದಿನಗಳ ಕಾಲ ನಡೆಯಲಿರುವ ಅಧಿವೇಶನ ಡಿ. 15ಕ್ಕೆ ಮುಕ್ತಾಯವಾಗಲಿದೆ. ಈ ಬಾರಿಯ ಚಳಿಗಾಲದ ಅಧಿವೇಶನ ಸಾಕಷ್ಟು ಬಿಸಿಬಿಸಿ ಚರ್ಚೆಗೆ ಕಾರಣವಾಗಲಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *