ನಾಳೆ ಸಾರಿಗೆ ನೌಕರರ ಧರಣಿ: ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಗುರುವಾರ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ.

KSRTC Bus Stand

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಗುರುವಾರ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ಹೀಗಾಗಿ ಗುರುವಾರ ರಾಜ್ಯದಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿ ವಿವಿಧ ವಿಭಾಗಗಳ ಸಾರಿಗೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಈ ಸಾರಿಗೆ ನೌಕರರ ಜಾಥಾ ನಾಳೆ ಬೆಳಗ್ಗೆ 10 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭವಾಗಲಿದೆ. ಅಲ್ಲಿಂದ ವಿಧಾನಸೌಧಧವರೆಗೆ ಸಾರಿಗೆ ನೌಕರರು ಜಾಥಾ ಹೊರಡಲಿದ್ದಾರೆ. ಸಾರಿಗೆ ನೌಕರರ ನಡಿಗೆ- ಸರ್ಕಾರಿ ನೌಕರರಾಗುವ ಕಡೆಗೆ ಎಂಬ ಘೋಷಣೆಯೊಂದಿಗೆ ಹೋರಾಟ ನಡೆಸಲಿದ್ದಾರೆ. ಈ ಕಾಲ್ನಡಿಗೆ ಜಾಥಾದಲ್ಲಿ ಸಾರಿಗೆ ನೌಕರರು ಅವರ ಹೆಂಡತಿ ಮಕ್ಕಳೊಂದಿಗೆ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಕೆಎಸ್ ಆರ್ ಟಿಸಿ, ಬಿಎಂಟಿಸಿ ಹಾಗೂ ಎನ್ ಇಕೆಆರ್ ಟಿಸಿ ಸೇರಿ ರಾಜ್ಯದಲ್ಲಿ ಸುಮಾರು ಒಂದು ಲಕ್ಷದ ನಲವತ್ತು ಸಾವಿರ ಸಾರಿಗೆ ನೌಕರರು ಇದ್ದಾರೆ. ಈ ಜಾಥಾದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ನಂಜಾವಧೂತ ಸ್ವಾಮೀಜಿ ಹಾಗೂ ಚಂದ್ರಶೇಖರ ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಇಂದು ವಿಧಾನಸಭೆಯಲ್ಲಿ ಮಾತನಾಡಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ, ರಾಜ್ಯ ಸರ್ಕಾರ ಹಣಕಾಸಿನ ಸಮಸ್ಯೆ ಎದುರಿಸುತ್ತಿರುವುದರಿಂದ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಲಕ್ಷ್ಮಣ ಸವದಿ 

ಸಾರಿಗೆ ನೌಕರರ ನವೆಂಬರ್ ವರೆಗಿನ ಎಲ್ಲಾ ವೇತನ ಬಿಡುಗಡೆ ಮಾಡಲಾಗಿದೆ. ಸಾರಿಗೆ ಇಲಾಖೆಯ ನೌಕರರನ್ನು ಸರ್ಕಾರಿ ನೌಕರರನ್ನಾಗಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಈಗ ಇಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಬಿ. ಹರ್ಷವರ್ಧನ್, ಕಳೆದ 3-4 ತಿಂಗಳಿಂದ ಸಾರಿಗೆ ನೌಕರರಿಗೆ ವೇತನ ನೀಡಿಲ್ಲ ಎಂಬ ಆರೋಪವಿದೆ, ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಸಾರಿಗೆ ಇಲಾಖೆಯ 1.30 ಲಕ್ಷ ನೌಕರರ ನವೆಂಬರ್ ವರೆಗಿನ ವೇತನವನ್ನು ನೀಡಲಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ 4 ನಿಗಮಗಳು ಸಂಕಷ್ಟದಲ್ಲಿದ್ದಾಗ ನೌಕರರ ವೇತನ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆವು, ಅದರಂತೆ ಮುಖ್ಯಮಂತ್ರಿ ಹಣಕಾಸು ಸೌಲಭ್ಯ ಒದಗಿಸಿಕೊಟ್ಟಿದ್ದಾರೆ. 

ಅದರಂತೆ ಹಣಕಾಸು ಇಲಾಖೆ 7 ತಿಂಗಳ ಸಂಬಳವನ್ನು ನೀಡಿದೆ. 2 ತಿಂಗಳ ವೇತನ ಶೇಕಡಾ 100ರಷ್ಟು, 4 ತಿಂಗಳ ವೇತನ 25-75ರ ಅನುಪಾತದಲ್ಲಿ, ಮತ್ತೆ ಎರಡು ತಿಂಗಳ ವೇತನ 50-50 ಅನುಪಾತದಲ್ಲಿ ಸರ್ಕಾರ ಕೊಟ್ಟಿದೆ. ನವೆಂಬರ್ ವರೆಗೆ ಎಲ್ಲರ ವೇತನ ನೀಡಲಾಗಿದೆ, ಡಿಸೆಂಬರ್ ತಿಂಗಳ ವೇತನ 8-10 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು. ಯಾರಿಗೂ ವೇತನ ಬಾಕಿ ಇಲ್ಲ” ಎಂದು ಸ್ಪಷ್ಟಪಡಿಸಿದರು.

1.25 ಲಕ್ಷ ನೌಕರರನ್ನು ಸರ್ಕಾರಿ ನೌಕರಿ ಮಾಡುವಂತೆ ಒತ್ತಾಯಿಸುತ್ತಿದ್ದಾರೆ, ನಾಳೆ ಅವರು ಧರಣಿ ನಡೆಸುತ್ತಿದ್ದಾರೆ, ಅವರನ್ನು ಕರೆದು ಮಾತುಕತೆ ಮಾಡಿ ಎಂದು ಸದಸ್ಯ ಜಿ.ಟಿ.ದೇವೇಗೌಡ ಸಲಹೆ ನೀಡಿದರು.

ಅದಕ್ಕೆ ಪ್ರತಿಕ್ರಿಯಿಸಿದ ಲಕ್ಷ್ಮಣ ಸವದಿ, “ಈ ಹಿಂದೆ ಸ್ವಾಮೀಜಿಯೊಬ್ಬರ ನೇತೃತ್ವದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದಾಗ, ಸ್ವತಃ ತಾವು ಅಲ್ಲಿಗೆ ಭೇಟಿ ನೀಡಿ ಮನವಿ ಸ್ವೀಕರಿಸಿದ್ದ, ಕೋವಿಡ್ ಹಿನ್ನೆಲೆಯಲ್ಲಿ ಹಣಕಾಸು ಸಮಸ್ಯೆ ಇರುವುದರಿಂದ ಈಗ ಈ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ನಿರ್ಣಯ ಮಾಡುತೇವೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಮಾಡಿದರೆ, ಉಳಿದ ನಿಗಮಗಳಲ್ಲಿ ಅನೇಕ ಮಂದಿ ಇದೇ ಬೇಡಿಕೆ ಇಡಬಹುದು. ಆದ್ದರಿಂದ ಸದ್ಯಕ್ಕೆ ಸರ್ಕಾರದ ಮುಂದೆ ಅವರನ್ನು ಸರ್ಕಾರಿ ನೌಕರರಾಗಿ ಮಾಡುವ ಪ್ರಸ್ತಾಪ ಇಲ್ಲ” ಎಂದು ಸ್ಪಷ್ಟಪಡಿಸಿದರು.
 (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *