ಮೂಲಭೂತ ಸೌಲಭ್ಯಗಳ ಕೊರತೆ- ಮತದಾನಕ್ಕೆ ತಹಸಿಲ್ಧಾರ ಮನವರಿಕೆ

ಸಿದ್ಧಾಪುರ ತಾಲೂಕಿನ ಸೋಮನಕುಳಿ,ಮದ್ದಿನಕೇರಿ ಗ್ರಾಮದ ಜನರು ತಮ್ಮ ಊರಿನ ಮೂಲಭೂತ ಸೌಕರ್ಯ ಪೂರೈಸದ ವ್ಯವಸ್ಥೆ ವಿರುದ್ಧ ಪ್ರತಿಭಟನೆಯಾಗಿ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಬೇಡ್ಕಣಿ ಗ್ರಾಮ ಪಂಚಾಯತ್ ನ ಮದ್ದಿನಕೇರಿ ಹಾಗೂ ಹಲಗೇರಿ ಪಂಚಾಯತ್ ನ ಸೋಮನಕುಳಿ ಜನರು ತಮಗೆ ನೀರು, ರಸ್ತೆ,ವಿದ್ಯುತ್ ಸೇರಿದ ಮೂಲಭೂತ ಅವಶ್ಯಕತೆಗಳನ್ನು ಪೂರೈಸದ ಸ್ಥಳಿಯ ಆಡಳಿತದ ಕ್ರಮ ಪ್ರಶ್ನಿಸಿ, ಪ್ರತಿಭಟನಾರ್ಥ ಮತದಾನ ಬಹಿಷ್ಕರಿಸುವುದಾಗಿ ಇಂದು ಸಿದ್ಧಾಪುರ ತಹಸಿಲ್ಧಾರರಿಗೆ ಮನವಿ ನೀಡಿದ್ದಾರೆ.

ಡಿ 27 ರಂದು ನಡೆಯಲಿರುವ ಗ್ರಾ.ಪಂ. ಚುನಾವಣೆಯಲ್ಲಿ ತಾವು ಮತ ಚಲಾಯಿಸುವುದಿಲ್ಲ, ಈ ವರೆಗೆ ಅನೇಕ ಬಾರಿ ನಮ್ಮ ತೊಂದರೆಗಳನ್ನು ಸರ್ಕಾರ, ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದೇವೆ ಆದರೆ ಇದರಿಂದ ಪ್ರಯೋಜನವಾಗದಿರುವುದರಿಂದ ಈಗ ಅನಿವಾರ್ಯವಾಗಿ ಮತದಾನ ಬಹಿಷ್ಕರಿಸುತ್ತೇವೆ ಮತ್ತು ನಮ್ಮ ಸಮಸ್ಯೆ ಬಗೆಹರಿಯುವ ವರೆಗೆ ನಾವು ಎಲ್ಲಾ ಚುನಾವಣೆಗಳಲ್ಲಿ ಮತದಾನ ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.

ಈ ಬಗ್ಗೆ ಸಮಾಜಮುಖಿಗೆ ಪ್ರತಿಕ್ರೀಯಿಸಿರುವ ಸ್ಥಳಿಯ ತಹಸಿಲ್ಧಾರ ಮಂಜುಳಾ ಭಜಂತ್ರಿ ಸೋಮನಕುಳಿ, ಮದ್ದನಕೇರಿ ಜನರು ಗ್ರಾ.ಪಂ. ಮತದಾನ ಬಹಿಷ್ಕರಿಸುವುದಾಗಿ ಮನವಿ ನೀಡಿದ್ದಾರೆ. ಅವರ ತುರ್ತು ಸಮಸ್ಯಗಳ ಪರಿಹಾರಕ್ಕೆ ಸ್ಪಂ ದಿಸಲು ತಾಲೂಕಾಡಳಿತದಿಂದ ಸಂಬಂಧಿಸಿದವರಿಗೆ ಸೂಚನೆ ನೀಡಲಾಗಿದೆ. ಈ ಗ್ರಾಮಗಳ ಜನರು ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಹೇಳಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಈಗಲೂ ಅವಕಾಶವಿದೆ. ಮತದಾನ ಜವಾಬ್ಧಾರಿ,ಕರ್ತವ್ಯ ಮತ್ತು ಪವಿತ್ರಕೆಲಸ, ಹಕ್ಕು ಹಾಗಾಗಿ ಈ ಗ್ರಾಮಗಳ ಜನರಿಗೆ ಮನವರಿಕೆ ಮಾಡಿ ಮತದಾನ ಮಾಡಲು ವಿನಂತಿಸುತ್ತೇವೆ. ಅವರ ಸಮಸ್ಯೆಗಳಿಗೂ ಸ್ಪಂದಿಸಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

1 Comment

Leave a Reply

Your email address will not be published. Required fields are marked *