big news of the day- ಯಾರಾಗ್ತಾರೆ ಯು.ಪಿ.ಎ. ಅಧ್ಯಕ್ಷ ಶರದ್ ಪವಾರ್ r ರಾಹುಲ್ ಗಾಂಧಿ

ಕಾಡುತ್ತಿರುವ ಅನಾರೋಗ್ಯ, ಸಕ್ರಿಯ ರಾಜಕಾರಣಕ್ಕೆ ಸೋನಿಯಾ ಗಾಂಧಿ ಗುಡ್ ಬೈ? ಶರದ್ ಪವಾರ್ ಗೆ ಯುಪಿಎ ಅಧ್ಯಕ್ಷ ಪಟ್ಟ?

ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದರು. ನಂತರ ಮಧ್ಯಂತರ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಹೊಣೆ ಹೊತ್ತುಕೊಂಡರು.

Opposition leaders Rahul Gandhi, Sharad Pawar, D Raja, Sitaram Yechuri and others coming out after meeting President at Rashtrapati Bhawan in New Delhi on Wednesday.

ನವದೆಹಲಿ: ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದರು. ನಂತರ ಮಧ್ಯಂತರ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಹೊಣೆ ಹೊತ್ತುಕೊಂಡರು. ಅವರು ಯುಪಿಎ ಮೈತ್ರಿಕೂಟದ ಅಧ್ಯಕ್ಷೆ ಕೂಡ ಆಗಿ ಮುಂದುವರಿದಿದ್ದಾರೆ.

ಆದರೆ ಅವರನ್ನು ಪದೇ ಪದೇ ಅನಾರೋಗ್ಯ ಕಾಡುತ್ತಿದೆ. ಅಂದುಕೊಂಡಂತೆ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ಯುಪಿಎ ಮೈತ್ರಿಕೂಟದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳಿಂದ ಪತ್ರಿಕೆಗೆ ತಿಳಿದುಬಂದಿದೆ.

ಯುಪಿಎ ಮೈತ್ರಿಕೂಟದ ಪಕ್ಷಗಳಲ್ಲಿರುವ ಹಲವು ಹಿರಿಯ ನಾಯಕರುಗಳಲ್ಲಿ ಶರದ್ ಪವಾರ್ ಕೂಡ ಒಬ್ಬರು. ಅವರು ಎಲ್ಲಾ ಪಕ್ಷಗಳ ನಾಯಕರೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಂಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಗೆ ಬೆಂಬಲ ನೀಡಿ ಕೇಂದ್ರ ಸರ್ಕಾರ ನೂತನ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ ನಾಯಕರಲ್ಲಿ ಶರದ್ ಪವಾರ್ ಮತ್ತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಕೂಡ ಇದ್ದರು.

ಮೊನ್ನೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದ ನಿಯೋಗದಲ್ಲಿ ಸೀತಾರಾಮ್ ಯೆಚೂರಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಮತ್ತು ಡಿಎಂಕೆ ನಾಯಕ ಟಿ ಕೆ ಎಸ್ ಎಲಂಗೊವನ್ ಪ್ರಮುಖರು.

ತಮ್ಮ ಅನಾರೋಗ್ಯ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿಯವರು ಸಕ್ರಿಯ ರಾಜಕೀಯದಿಂದ ನಿವೃತ್ತಿಯಾಗಲು ಬಯಸಿದ್ದಾರೆ ಎನ್ನಲಾಗುತ್ತಿದೆ. 2017ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನವನ್ನು ಪುತ್ರ ರಾಹುಲ್ ಗಾಂಧಿಗೆ ಬಿಟ್ಟುಕೊಟ್ಟಿದ್ದು ಆ ಪ್ರಕ್ರಿಯೆಯ ಭಾಗವಾಗಿತ್ತು. ಆದರೆ 2019ರ ಲೋಕಸಭೆ ಚುನಾವಣೆ ನಂತರ ರಾಹುಲ್ ಗಾಂಧಿ ನಾಯಕನ ಪಟ್ಟ ಬಿಟ್ಟು ಕೆಳಗಿಳಿದರು. ಆಗ ಸೋನಿಯಾ ಗಾಂಧಿಯವರು ಬೇರೆ ದಾರಿಯಿಲ್ಲದೆ ಮಧ್ಯಂತರ ಅಧ್ಯಕ್ಷೆಯಾದರು.

ಶ್ವಾಸಕೋಶದ ಸೋಂಕಿನಿಂದ ಆಗಾಗ ಆಸ್ಪತ್ರೆಗೆ ಬಂದು ಹೋಗುತ್ತಿರುತ್ತಾರೆ ಸೋನಿಯಾ ಗಾಂಧಿ. ಕಳೆದ ಲೋಕಸಭೆ ಚುನಾವಣೆಯಲ್ಲಿ ಅವರು ಪಕ್ಷದ ಪರವಾಗಿ ಪ್ರಚಾರ ಮಾಡಲು ಕೂಡ ಸಾಧ್ಯವಾಗಿರಲಿಲ್ಲ. ಯುಪಿಎ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿದೆ. ಹಾಗಾಗಿ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಗೆ ಸಿಗಬೇಕು. ಆದರೆ ಸೋನಿಯಾ ಗಾಂಧಿಯವರು ನಿವೃತ್ತಿ ಹೊಂದಿದರೆ ಶರದ್ ಪವಾರ್ ನಂತರದ ಅತಿ ಹಿರಿಯ ನಾಯಕ. ಇನ್ನು ಮುಂದೆ ಯುಪಿಎ ಮೈತ್ರಿಕೂಟ ಇನ್ನಷ್ಟು ಬಲಿಷ್ಠವಾಗಿ ಮೋದಿ ಆಡಳಿತ ವಿರುದ್ಧ  ಹೋರಾಟ ನಡೆಸಬೇಕೆಂದು ತೀರ್ಮಾನಿಸಿದಂತಿದೆ.

1991ರಲ್ಲಿ ಕಾಂಗ್ರೆಸ್ ಜೊತೆ ಭಿನ್ನಾಭಿಪ್ರಾಯದಿಂದ ರಾಜೀನಾಮೆ ನೀಡಿ ಹೊರಬಂದ ಮೇಲೆ ಸೋನಿಯಾ ಗಾಂಧಿ ಮತ್ತು ಶರದ್ ಪವಾರ್ ಅವರ ನಡುವಿನ ಬಾಂಧವ್ಯ ಅಷ್ಟಕಷ್ಟೆ. ಆದರೆ ಸದ್ಯ ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿಯ ಶಕ್ತಿ, ಪ್ರಭಾವ ವರ್ಚಸ್ಸು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಮಯದಲ್ಲಿ ಎನ್ ಸಿಪಿ ನಾಯಕರು ಬಲವಾಗಿ ವಿರೋಧ ಪಕ್ಷದ ಸ್ಥಾನದಲ್ಲಿ ಬೆಳೆದು ಆಡಳಿತ ಪಕ್ಷಕ್ಕೆ ಕಠಿಣ ಸವಾಲು ನೀಡಬೇಕು ಎಂದು ಬಯಸಿದರೆ ಆಶ್ಚರ್ಯವಿಲ್ಲ. 

ಆದರೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಇಬ್ಬರೂ ನಾಯಕತ್ವ ಬದಲಾವಣೆ ವಿಷಯವನ್ನು ನಿರಾಕರಿಸುತ್ತಾರೆ. ಎನ್ ಸಿಪಿ ಮುಖ್ಯ ವಕ್ತಾರ ಮಹೇಶ್ ತಪಸೆ, ಇಂತಹ ಪ್ರಸ್ತಾಪದ ಬಗ್ಗೆ ಯುಪಿಎ ಒಳಗೆ .ಯಾವುದೇ ಚರ್ಚೆ ನಡೆದಿಲ್ಲ ಎನ್ನುತ್ತಾರೆ.

ರೈತರ ಪ್ರತಿಭಟನೆಯಿಂದ ಗಮನವನ್ನು ಬೇರೆಡೆ ಸೆಳೆಯಲು ಪಟ್ಟಭದ್ರ ಹಿತಾಸಕ್ತಿಗಳು ಇಂತಹ ವದಂತಿ ಹಬ್ಬಿಸುತ್ತಿವೆ ಎಂದು ಕಾಂಗ್ರೆಸ್ ಹೇಳಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *