ನಿರಂಕುಶಾಧಿಕಾರಿ ಶೈಲಿಯ ಮೋದಿ ಆಡಳಿತ, ಪಕ್ಷದ ನಾಯಕತ್ವ ನಿಭಾಯಿಸಲಾಗದ ಸೋನಿಯಾ’: ಪ್ರಣಬ್ ಮುಖರ್ಜಿ ಆತ್ಮಚರಿತ್ರೆಯಲ್ಲಿ ಏನಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರದ್ದು ಒಂದು ರೀತಿಯಲ್ಲಿ ನಿರಂಕುಶಾಧಿಕಾರಿ ಶೈಲಿಯ ಕಾರ್ಯವೈಖರಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರಿಗೆ ಸಮ್ಮಿಶ್ರ ಸರ್ಕಾರ ಉಳಿಸುವ ಕೆಲಸದಲ್ಲಿ ನಿರತರಾಗಿದ್ದರಿಂದ ಅದು ಸರ್ಕಾರದ ಆಡಳಿತವನ್ನು ಹಾನಿಗೊಳಿಸಿತು.

Ex president Late Pranab Mukherjee

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರದ್ದು ಒಂದು ರೀತಿಯಲ್ಲಿ ನಿರಂಕುಶಾಧಿಕಾರಿ ಶೈಲಿಯ ಕಾರ್ಯವೈಖರಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಸಮ್ಮಿಶ್ರ ಸರ್ಕಾರ ಉಳಿಸುವ ಕೆಲಸದಲ್ಲಿ ನಿರತರಾಗಿದ್ದರಿಂದ ಅದು ಸರ್ಕಾರದ ಆಡಳಿತವನ್ನು ಹಾನಿಗೊಳಿಸಿತು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪಕ್ಷದ ವ್ಯವಹಾರಗಳನ್ನು ನಿಭಾಯಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್ ಮುಖರ್ಜಿ ತಮ್ಮ ಆತ್ಮ ಚರಿತ್ರೆಯ ನಾಲ್ಕನೇ ಸಂಪುಟದಲ್ಲಿ ಬರೆದುಕೊಂಡಿದ್ದಾರಂತೆ. ಇದು ಮುಂದಿನ ವರ್ಷ ಜನವರಿಯಲ್ಲಿ ಬಿಡುಗಡೆಯಾಗಲಿದೆ.

ಪ್ರಣಬ್ ಮುಖರ್ಜಿಯವರು ತೀರಿಹೋಗಿದ್ದು ಇದೇ ವರ್ಷ ಆಗಸ್ಟ್ 31ರಂದು. ಅದಕ್ಕೂ ಮುನ್ನ ತಮ್ಮ ನೆನಪುಗಳನ್ನು ಆತ್ಮಚರಿತ್ರೆಯಲ್ಲಿ ಬರೆಯುವ ಕೆಲಸ ಮುಗಿಸಿದ್ದರು. ತಿಂಗಳುಗಳ ಕಾಲ ದೆಹಲಿಯ ಮಿಲಿಟರಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಾ ಅಸುನೀಗಿದರು. 

ನಾನು ರಾಷ್ಟ್ರಪತಿಯಾದ ನಂತರ ಕಾಂಗ್ರೆಸ್ ನಲ್ಲಿ ಪಕ್ಷದ ನಾಯಕತ್ವ ರಾಜಕೀಯದ ಮೇಲೆ ಗಮನ ಕೇಂದ್ರೀಕರಿಸುವ ಶಕ್ತಿಯನ್ನು ಕಳೆದುಕೊಂಡಿತು. ಸಮ್ಮಿಶ್ರ ಸರ್ಕಾರವನ್ನು ಉಳಿಸುವುದರಲ್ಲಿಯೇ ಡಾ ಮನಮೋಹನ್ ಸಿಂಗ್ ನಿರತರಾಗಿದ್ದರು, ಇದು ಆಡಳಿತದ ಮೇಲೆ ತೀವ್ರ ಪರಿಣಾಮ ಬೀರಿತು ಎಂದು ಪುಸ್ತಕದಲ್ಲಿ ಬರೆದಿದ್ದಾರೆ ಪ್ರಣಬ್ ಮುಖರ್ಜಿ.

ನರೇಂದ್ರ ಮೋದಿಯವರು ಪ್ರಧಾನಿಯಾದ ತಮ್ಮ ಮೊದಲ 5 ವರ್ಷಗಳ ಅವಧಿಯಲ್ಲಿ ನಿರಂಕುಶಾಧಿಕಾರಿಯಂತೆ ಆಡಳಿತ ನಡೆಸಿದ್ದು ಕಂಡುಬರುತ್ತದೆ. ಇದರಿಂದ ನ್ಯಾಯಾಂಗ ಮತ್ತು ಶಾಸಕಾಂಗಗಳ ಮಧ್ಯೆ ಸಂಬಂಧ ಕಹಿಯಾದಂತೆ ಕಂಡುಬಂತು. ನರೇಂದ್ರ ಮೋದಿಯವರ ಎರಡನೇ ಆಡಳಿತ ಅವಧಿಯಲ್ಲಿ ನ್ಯಾಯಾಂಗ ಮತ್ತು ಶಾಸಕಾಂಗಗಳ ಮಧ್ಯೆ ಸಂಬಂಧ ಸುಧಾರಣೆಯಾಗುತ್ತದೆಯೇ, ಇಬ್ಬರ ಮಧ್ಯೆ ಅರ್ಥೈಸಿಕೊಳ್ಳುವಿಕೆ ಹೆಚ್ಚಾಗುತ್ತದೆಯೇ ಎಂದು ಕಾಲವೇ ನಿರ್ಧರಿಸಲಿದೆ ಎಂದು ಪ್ರಣಬ್ ಮುಖರ್ಜಿ ತಮ್ಮ ಆತ್ಮಚರಿತ್ರೆಯಲ್ಲಿ ಬರೆದಿದ್ದಾರೆ.

ಇನ್ನು ಸೋನಿಯಾ ಗಾಂಧಿಯವರ ನಾಯಕತ್ವದ ಬಗ್ಗೆ ಕಟುವಾಗಿ ಟೀಕಿಸಿರುವ ಪ್ರಣಬ್ ಮುಖರ್ಜಿ, ಸೋನಿಯಾ ಗಾಂಧಿಯವರಿಗೆ ಪಕ್ಷದ ವ್ಯವಹಾರಗಳನ್ನು, ನಾಯಕತ್ವವನ್ನು ನಿಭಾಯಿಸಲು ಸಾಧ್ಯವಾಗುತ್ತಿರಲಿಲ್ಲ, ಸದನದಲ್ಲಿ ಡಾ ಮನಮೋಹನ್ ಸಿಂಗ್ ಅವರ ದೀರ್ಘ ಸಮಯದ ಗೈರು ಬೇರೆ ಸಂಸದರೊಂದಿಗೆ ವೈಯಕ್ತಿಕವಾಗಿ ಸಂಪರ್ಕ ಹೊಂದಲು ಸಾಧ್ಯವಾಗುತ್ತಿರಲಿಲ್ಲ, ಇದರಿಂದ ಕಾಂಗ್ರೆಸ್ ಪಕ್ಷ, ಸರ್ಕಾರದ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *