ನಿರಂಕುಶಾಧಿಕಾರಿ ಶೈಲಿಯ ಮೋದಿ ಆಡಳಿತ, ಪಕ್ಷದ ನಾಯಕತ್ವ ನಿಭಾಯಿಸಲಾಗದ ಸೋನಿಯಾ’: ಪ್ರಣಬ್ ಮುಖರ್ಜಿ ಆತ್ಮಚರಿತ್ರೆಯಲ್ಲಿ ಏನಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರದ್ದು ಒಂದು ರೀತಿಯಲ್ಲಿ ನಿರಂಕುಶಾಧಿಕಾರಿ ಶೈಲಿಯ ಕಾರ್ಯವೈಖರಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರಿಗೆ ಸಮ್ಮಿಶ್ರ ಸರ್ಕಾರ ಉಳಿಸುವ ಕೆಲಸದಲ್ಲಿ ನಿರತರಾಗಿದ್ದರಿಂದ ಅದು ಸರ್ಕಾರದ ಆಡಳಿತವನ್ನು ಹಾನಿಗೊಳಿಸಿತು.

Ex president Late Pranab Mukherjee

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರದ್ದು ಒಂದು ರೀತಿಯಲ್ಲಿ ನಿರಂಕುಶಾಧಿಕಾರಿ ಶೈಲಿಯ ಕಾರ್ಯವೈಖರಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಸಮ್ಮಿಶ್ರ ಸರ್ಕಾರ ಉಳಿಸುವ ಕೆಲಸದಲ್ಲಿ ನಿರತರಾಗಿದ್ದರಿಂದ ಅದು ಸರ್ಕಾರದ ಆಡಳಿತವನ್ನು ಹಾನಿಗೊಳಿಸಿತು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪಕ್ಷದ ವ್ಯವಹಾರಗಳನ್ನು ನಿಭಾಯಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್ ಮುಖರ್ಜಿ ತಮ್ಮ ಆತ್ಮ ಚರಿತ್ರೆಯ ನಾಲ್ಕನೇ ಸಂಪುಟದಲ್ಲಿ ಬರೆದುಕೊಂಡಿದ್ದಾರಂತೆ. ಇದು ಮುಂದಿನ ವರ್ಷ ಜನವರಿಯಲ್ಲಿ ಬಿಡುಗಡೆಯಾಗಲಿದೆ.

ಪ್ರಣಬ್ ಮುಖರ್ಜಿಯವರು ತೀರಿಹೋಗಿದ್ದು ಇದೇ ವರ್ಷ ಆಗಸ್ಟ್ 31ರಂದು. ಅದಕ್ಕೂ ಮುನ್ನ ತಮ್ಮ ನೆನಪುಗಳನ್ನು ಆತ್ಮಚರಿತ್ರೆಯಲ್ಲಿ ಬರೆಯುವ ಕೆಲಸ ಮುಗಿಸಿದ್ದರು. ತಿಂಗಳುಗಳ ಕಾಲ ದೆಹಲಿಯ ಮಿಲಿಟರಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಾ ಅಸುನೀಗಿದರು. 

ನಾನು ರಾಷ್ಟ್ರಪತಿಯಾದ ನಂತರ ಕಾಂಗ್ರೆಸ್ ನಲ್ಲಿ ಪಕ್ಷದ ನಾಯಕತ್ವ ರಾಜಕೀಯದ ಮೇಲೆ ಗಮನ ಕೇಂದ್ರೀಕರಿಸುವ ಶಕ್ತಿಯನ್ನು ಕಳೆದುಕೊಂಡಿತು. ಸಮ್ಮಿಶ್ರ ಸರ್ಕಾರವನ್ನು ಉಳಿಸುವುದರಲ್ಲಿಯೇ ಡಾ ಮನಮೋಹನ್ ಸಿಂಗ್ ನಿರತರಾಗಿದ್ದರು, ಇದು ಆಡಳಿತದ ಮೇಲೆ ತೀವ್ರ ಪರಿಣಾಮ ಬೀರಿತು ಎಂದು ಪುಸ್ತಕದಲ್ಲಿ ಬರೆದಿದ್ದಾರೆ ಪ್ರಣಬ್ ಮುಖರ್ಜಿ.

ನರೇಂದ್ರ ಮೋದಿಯವರು ಪ್ರಧಾನಿಯಾದ ತಮ್ಮ ಮೊದಲ 5 ವರ್ಷಗಳ ಅವಧಿಯಲ್ಲಿ ನಿರಂಕುಶಾಧಿಕಾರಿಯಂತೆ ಆಡಳಿತ ನಡೆಸಿದ್ದು ಕಂಡುಬರುತ್ತದೆ. ಇದರಿಂದ ನ್ಯಾಯಾಂಗ ಮತ್ತು ಶಾಸಕಾಂಗಗಳ ಮಧ್ಯೆ ಸಂಬಂಧ ಕಹಿಯಾದಂತೆ ಕಂಡುಬಂತು. ನರೇಂದ್ರ ಮೋದಿಯವರ ಎರಡನೇ ಆಡಳಿತ ಅವಧಿಯಲ್ಲಿ ನ್ಯಾಯಾಂಗ ಮತ್ತು ಶಾಸಕಾಂಗಗಳ ಮಧ್ಯೆ ಸಂಬಂಧ ಸುಧಾರಣೆಯಾಗುತ್ತದೆಯೇ, ಇಬ್ಬರ ಮಧ್ಯೆ ಅರ್ಥೈಸಿಕೊಳ್ಳುವಿಕೆ ಹೆಚ್ಚಾಗುತ್ತದೆಯೇ ಎಂದು ಕಾಲವೇ ನಿರ್ಧರಿಸಲಿದೆ ಎಂದು ಪ್ರಣಬ್ ಮುಖರ್ಜಿ ತಮ್ಮ ಆತ್ಮಚರಿತ್ರೆಯಲ್ಲಿ ಬರೆದಿದ್ದಾರೆ.

ಇನ್ನು ಸೋನಿಯಾ ಗಾಂಧಿಯವರ ನಾಯಕತ್ವದ ಬಗ್ಗೆ ಕಟುವಾಗಿ ಟೀಕಿಸಿರುವ ಪ್ರಣಬ್ ಮುಖರ್ಜಿ, ಸೋನಿಯಾ ಗಾಂಧಿಯವರಿಗೆ ಪಕ್ಷದ ವ್ಯವಹಾರಗಳನ್ನು, ನಾಯಕತ್ವವನ್ನು ನಿಭಾಯಿಸಲು ಸಾಧ್ಯವಾಗುತ್ತಿರಲಿಲ್ಲ, ಸದನದಲ್ಲಿ ಡಾ ಮನಮೋಹನ್ ಸಿಂಗ್ ಅವರ ದೀರ್ಘ ಸಮಯದ ಗೈರು ಬೇರೆ ಸಂಸದರೊಂದಿಗೆ ವೈಯಕ್ತಿಕವಾಗಿ ಸಂಪರ್ಕ ಹೊಂದಲು ಸಾಧ್ಯವಾಗುತ್ತಿರಲಿಲ್ಲ, ಇದರಿಂದ ಕಾಂಗ್ರೆಸ್ ಪಕ್ಷ, ಸರ್ಕಾರದ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *