

ಬಿಜೆಪಿ ಸಿಖ್ಖರ ವಿರುದ್ಧ ಹಿಂದೂಗಳನ್ನು ಎತ್ತಿ ಕಟ್ಟುತ್ತಿದೆ, ಕೇಸರಿ ಪಕ್ಷವೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್: ಸುಖ್ಬೀರ್ ಬಾದಲ್
ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಸ್ಎಡಿ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್…


ಚಂಡೀಗಢ: ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಸ್ಎಡಿ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು, ಕೇಸರಿ ಪಕ್ಷವೇ “ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್” ಎಂದು ಕರೆದಿದ್ದಾರೆ.
ಬಿಜೆಪಿ ಪಂಜಾಬ್ನಲ್ಲಿ ಸಿಖ್ಖರ ವಿರುದ್ಧ ಹಿಂದೂಗಳನ್ನು ಎತ್ತಿ ಕಟ್ಟುತ್ತಿದೆ ಎಂದು ಆರೋಪಿಸಿದ ಶಿರೋಮಣಿ ಅಕಾಲಿ ದಳದ ಅಧ್ಯಕ್ಷ, ಬಿಜೆಪಿ ಮೊದಲು ಮುಸ್ಲಿಮರ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟಿತು. ಈಗ ಶಾಂತಿ ಪ್ರಿಯ ಪಂಜಾಬಿ ಹಿಂದೂಗಳನ್ನು ನಮ್ಮ ಸಿಖ್ ಸಹೋದರರ ವಿರುದ್ಧ ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ. ದೇಶಭಕ್ತ ಪಂಜಾಬ್ನ್ನು ಬಿಜೆಪಿ ಕೋಮು ಜ್ವಾಲೆಗೆ ತಳ್ಳಲು ಪ್ರಯತ್ನಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರ ತನ್ನ ‘ಅಹಂ’ ಅನ್ನು ಬದಿಗಿಟ್ಟು ಪ್ರತಿಭಟನೆ ನಡೆಸುತ್ತಿರುವ ರೈತರ ಮಾತುಗಳನ್ನು ಕೇಳಬೇಕು ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.
ಯಾರಾದರು ಕೇಂದ್ರ ಸರ್ಕಾರದ ಪರವಾಗಿ ಮಾತನಾಡಿದರೆ ಅವರನ್ನು ‘ದೇಶಭಕ್ತ’ ಎಂದು ಕರೆಯಲಾಗುತ್ತದೆ ಮತ್ತು ಸರ್ಕಾರದ ವಿರುದ್ಧ ಮಾತನಾಡಿದರೆ ಅವರನ್ನು “ತುಕ್ಡೆ ತುಕ್ಡೆ ಗ್ಯಾಂಗ್” ಎಂದು ಬ್ರಾಂಡ್ ಮಾಡಲಾಗುತ್ತಿದೆ. ಆದರೆ ಬಿಜೆಪಿಯೇ ದೇಶದ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬಿಜೆಪಿ ರಾಷ್ಟ್ರೀಯ ಐಕ್ಯತೆಯನ್ನು ಒಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಇದೇ ಕೃಷಿ ಕಾನೂನುಗಳ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಎಡಿ ಎನ್ ಡಿಎ ಮೈತ್ರಿಕೂಟದಿಂದ ಹೊರ ಬಂದಿದ್ದು, ಮೋದಿ ಸಂಪುಟದಲ್ಲಿ ಸಚಿವೆಯಾಗಿದ್ದ ಎಸ್ಎಡಿ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್ ಅವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
