local news,s today- ಕೃಷ್ಣಪ್ಪ ಎ.ಸಿ.ಬಿ. ಬಲೆಗೆ, ಚಂದ್ರಶೇಖರ್ ಅಪ್ಪಿನಬೈಲ್ ಗೆ ಹೃದಯಾಘಾತ, ಟಿ.ಎಂ.ಎಸ್. ರಂಪಾಟ!

ಶಿರಸಿ ತಾಲೂಕಿನ ಜಾನ್ಮನೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ ಎಲ್ಲೋಗಿ ಇಂದು ಎ.ಸಿ.ಬಿ. ಬಲೆಗೆ ಬಿದ್ದಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲಸ, ಕಾರ್ಯಗಳಿಗೆ ಲಂಚ ಪಡೆಯುತ್ತಾರೆ ಎನ್ನುವ ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಇಂದು ಕಾರ್ಯಾ ಚರಣೆ ನಡೆಸಿದ ಬೃಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕೃಷ್ಣಪ್ಪರನ್ನು ಬಂಧಿಸಿದರು.

ಚಂದ್ರಶೇಖರ್ ಅಪ್ಪಿನಬೈಲ್ ನಿಧನ- ಸಿದ್ಧಾಪುರ ನಗರದ ಹೊಸೂರಿನ ನಿವೃತ್ತ ನೌ ಕರ ಚಂದ್ರಶೇಖರ್ ಅಪ್ಪಿನಬೈಲ್ ಇಂದು ಹೃದಯಾಘಾತದಿಂದ ನಿಧನರಾದರು. ಕಂದಾಯ ಇಲಾಖೆಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿದ್ದ ಅವರು ಕಳೆದ ವರ್ಷ ನಿವೃತ್ತರಾಗಿದ್ದರು.

ಟಿ.ಎಂ.ಎಸ್. ರಂಪಾಟ- ತಾಲೂಕಿನ ವ್ಯವಸಾಯ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಇಂದು ಟಿ.ಎಂ.ಎಸ್. ಸಭಾಭವನದಲ್ಲಿ ನಡೆಯಿತು. ಸಂಸ್ಥೆಯ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಅಧ್ಯಕ್ಷತೆಯಲ್ಲಿ ನಡೆದ ಈ ಸಾಮಾನ್ಯ ಸಭೆಯಲ್ಲಿ ಸುಬ್ರಾಯ ಭಟ್ ಗಡಿಹಿತ್ಲು ಮತ್ತು ಮಹಾಬಲೇಶ್ವರ ನಾಯ್ಕ ಕರಮನೆ ಸಂಘದ ವ್ಯವಹಾರ ಪಾರದರ್ಶಕತೆಯ ಬಗ್ಗೆ ತಕರಾರು ಎತ್ತಿದರು. ಈ ಚರ್ಚೆ, ಸಂವಾದದ ಬಿಸಿ ತಣಿಸಲು ಪ್ರಯತ್ನಿಸಿದ ಟಿ.ಎಂ.ಎಸ್. ಕಾನೂನು ಸಲಹೆಗಾರ ರವಿ ಹೆಗಡೆ ಹೂವಿನಮನೆ ಉಭಯತರನ್ನು ಸಮಾಧಾನಿಸಿ ಸಭೆ ಮುಂದುವರಿಸಲು ಅನುಕೂಲ ಮಾಡಿದರು. ಗರಿಷ್ಠ ಸಾಧನೆ ಮಾಡಿದ ಕಾನಸೂರು, ದೊಡ್ಮನೆ,ನಾಣಿಕಟ್ಟಾ ಸೇವಾ ಸಹಕಾರಿ ಸಂಘಗಳನ್ನು ಅಭಿನಂದಿಸಿ,ಪ್ರೋತ್ಸಾಹಧನ ನೀಡಲಾಯಿತು.

ಮತದಾನ ಬಹಿಷ್ಕಾರ ಇಲ್ಲ-

ಸಿದ್ದಾಪುರ
ತಾಲೂಕಿನ ಅಣಲೇಬೈಲ್ ಗ್ರಾಪಂ ವ್ಯಾಪ್ತಿಯ ಅತ್ತೀಮುರುಡು ಗ್ರಾಮದ ಮತದಾರರು ಗ್ರಾಪಂ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ಮನವಿ ನೀಡಿದ್ದರಿಂದ ತಹಸೀಲ್ದಾರ್ ಮಂಜುಳಾ ಎಸ್. .ಭಜಂತ್ರಿ ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಮತದಾರೊಂದಿಗೆ ಚರ್ಚೆ ನಡೆಸಿ ಮತದಾನ ಮಾಡುವುದಕ್ಕೆ ಮನವೊಲಿಸಿ ಯಶಸ್ವಿಯಾಗಿದ್ದಾರೆ.
ಗ್ರಾಮದ ವಿಶ್ವೇಶ್ವರ ಹೆಗಡೆ ಅತ್ತೀಮುರಡು, ನರೇಂದ್ರ ಹೆಗಡೆ,ಸಂತೋಷ ಹೆಗಡೆ, ಗಣೇಶ ಹೆಗಡೆ, ಶ್ರೀಪಾದ ಹೆಗಡೆ ಮತ್ತಿತರ ಗ್ರಾಮಸ್ಥರ ಜತೆ ಚರ್ಚೆ ನಡೆಸಿ ಗ್ರಾಪಂನಿಂದ ಆಗಬಹುದಾದ ಕಾಮಗಾರಿ ನಡೆಸುವುದಕ್ಕೆ ಸೂಚಿಸಲಾಗವುದು. ಮುಖ್ಯವಾಗಿ ಬಾಂದಾರ, ಕಾಲು ಸಂಕ, ಸರ್ವಋತು ರಸ್ತೆಯ ಕುರಿತು ಸಂಬಂಧ ಪಟ್ಟ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು. ಮತದಾನ ಬಹಿಷ್ಕರಿಸುವುದು ಸಮಂಜಸವಲ್ಲ ಎಂದು ಮನವರಿಕೆ ಮಾಡಿಕೊಟ್ಟಾಗ ಗ್ರಾಮಸ್ಥರು ಮತದಾನ ಮಾಡುವುದಕ್ಕೆ ಸಮ್ಮತಿ ನೀಡಿದ್ದಾರೆ ಎಂದು ತಹಸೀಲ್ದಾರ್ ಮಂಜುಳಾ ಎಸ್.ಭಜಂತ್ರಿ ತಿಳಿಸಿದ್ದಾರೆ.
ತಾಪಂ ಯೋಜನಾಧಿಕಾರಿ ಎನ್.ಆರ್.ಹೆಗಡೆಕರ್,ಗ್ರಾಪಂ ಪಿಡಿಒ ಸುಬ್ರಹ್ಮಣ್ಯ ಹೆಗಡೆ, ಕಂದಾಯ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.

ಸಾಂಬಾರು ಬೆಳೆಗಳ ಕಂಪನಿಯ ವಾರ್ಷಿಕ ಮಹಾಸಭೆ-

ಸಿದ್ದಾಪುರ
ತಾಲೂಕಿನ ಹಾರ್ಸಿಕಟ್ಟಾ ಅಘನಾಶಿನಿ ಸಾಂಬಾರು ಬೆಳೆಗಳ ಕಂಪನಿಯ ವಾರ್ಷಿಕ ಮಹಾಸಭೆ ಮಂಗಳವಾರ ಹಾರ್ಸಿಕಟ್ಟಾದಲ್ಲಿ ನಡೆಯಿತು.
ಅಧ್ಯಕ್ಷತೆವಹಿಸಿದ್ದ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಹೆಗಡೆ ಕುಂಬಾರಕುಳಿ ಎಲ್ಲ ಶೇರುದಾರ ಸದಸ್ಯರಿಗೆ ಒಂದು ಸಾವಿರ ರೂಗಳ ಹೆಚ್ಚುವರಿ ಶೇರು ಪತ್ರ ವಿತರಿಸಿ ತೋಟಗಾರಿಕಾ ಇಲಾಖೆಯಿಂದ ಗ್ರಾಮೀಣ ಮಾರುಕಟ್ಟೆ ಮೂಲಸೌಕರ್ಯ ಯೋಜನೆಯಲ್ಲಿ ಗೋದಾಮು ವ್ಯವಸ್ಥೆ, ಕೃಷಿ ಇಲಾಖೆಯ ಸಹಾಯದನದಿಂದ ಕೃಷಿಯಂತ್ರೋಪಕರಣ ಖರೀಧಿ, ಒಂದು ಜಿಲ್ಲೆ ಒಂದು ಬೆಳೆ ಅಡಿಯಲ್ಲಿ ಸ್ಪೈಸ್ ಕ್ಲಸ್ಟರ್ ನಿರ್ಮಾಣಕ್ಕೆ ಕಂಪನಿ ಆಯ್ಕೆ ಆಗಿರುವ ಕುರಿತು ಮಾಹಿತಿ ನೀಡಿದರು.
ಇದೇ ವೇಳೆಯಲ್ಲಿ ಸಾಂಬಾರು ಬೆಳೆಗಳ ಮೌಲ್ಯವರ್ಧನೆ ಕುರಿತು ಸಾತ್ವಿಕ ಹೆಗಡೆ ಶಿರಸಿ ಅವರು ಪ್ರಾತ್ಯಕ್ಷಿಕೆ ನೀಡಿ ಸದಸ್ಯರೊಂದಿಗೆ ಚರ್ಚೆ ನಡೆಸಿದರು.ಕಂಪನಿ ನಿರ್ದೇಶಕರು ಉಪಸ್ಥಿತರಿದ್ದರು.
ನಿರ್ದೇಶಕ ಜಿ.ಎಂ.ಹೆಗಡೆ ಬಾಳೇಸರ ಸ್ವಾಗತಿಸಿದರು.ಸಿಇಓ ದರ್ಶನ ಹೆಗಡೆ ವಾರ್ಷಿಕ ವರದಿ ವಾಚಿಸಿದರು.ನಾಗಪತಿ ಹೆಗಡೆ ಹರ್ತೆಬೈಲ್ ವಂದಿಸಿದರು. ಲೋಕೇಶ ಹೆಗಡೆ ನಿರ್ವಹಿಸಿದರು. ಸಿಬ್ಬಂದಿಗಳಾದ ಪ್ರಮೋದ ಕೊಡಿಯಾ, ಕೆ.ಎಸ್.ಭಟ್ಟ ಸಹಕರಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *