ಜನವರಿ 15ರ ನಂತರ ಜೆ.ಡಿ.ಎಸ್.ಸೇರಲಿರುವ ಸಿ.ಎಂ.ಇಬ್ರಾಹಿಂ !!!

ರಾಜ್ಯ ರಾಜಕೀಯದಲ್ಲಿ ಧ್ರುವೀಕರಣ ಪ್ರಾರಂಭವಾಗಿದ್ದು ಮಾಜಿ ಕೇಂದ್ರ ಸಚಿವ,ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಜನವರಿ 15 ರ ನಂತರ ಜೆಡಿಎಸ್ ಗೆ ಸೇರ್ಪಡೆಯಾಗುವುದು ಖಚಿತವಾಗಿದೆ.

CM Ibrahim

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಧ್ರುವೀಕರಣ ಪ್ರಾರಂಭವಾಗಿದ್ದು ಮಾಜಿ ಕೇಂದ್ರ ಸಚಿವ,ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಜನವರಿ 15 ರ ನಂತರ ಜೆಡಿಎಸ್ ಗೆ ಸೇರ್ಪಡೆಯಾಗುವುದು ಖಚಿತವಾಗಿದೆ.

ಯುಎನ್ಐ ಸುದ್ದಿಸಂಸ್ಥೆ ವರದಿ ಮಾಡಿರುವಂತೆ, ಕಾಂಗ್ರೆಸ್ ಪಕ್ಷ ತಮ್ಮನ್ನು ನಿರ್ಲಕ್ಷಿಸಿದೆ ಎಂಬ ಕಾರಣಕ್ಕಾಗಿ ಅಸಮಾಧಾನಗೊಂಡಿರುವ ಸಿ.ಎಂ.ಇಬ್ರಾಹಿಂ ಈಗಾಗಲೇ ಪಕ್ಷ ಬಿಡುವ ಸುಳಿವು ನೀಡಿದ್ದಾರೆ.ಆದರೆ ಅದಕ್ಕೂ ಮುನ್ನ ರಾಜ್ಯಾದ್ಯಂತ ಇರುವ ತಮ್ಮ ಬೆಂಬಲಿಗರು,ಆಪ್ತರ ಜತೆ  ಚರ್ಚಿಸಲು ಇಬ್ರಾಹಿಂ ನಿರ್ಧರಿಸಿದ್ದು ಇದಕ್ಕೆ ಪೂರಕವಾಗಿ ಮಾತುಕತೆ ಆರಂಭಿಸಿದ್ದಾರೆ.

ಜನವರಿ 15 ರ ನಂತರ ವಿದ್ಯುಕ್ತವಾಗಿ ಜೆಡಿಎಸ್ ಸೇರಲಿರುವ ಅವರು ನಂತರ ಪಕ್ಷದ ನಾಯಕರ ಜತೆ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆರಾಜ್ಯ ರಾಜಕಾರಣದಲ್ಲಿ ಮಾಂತ್ರಿಕ ಮಾತುಗಾರ ಎಂದೇ ಹೆಸರಾಗಿರುವ ಇಬ್ರಾಹಿಂ ಸೇರ್ಪಡೆಯಿಂದ ಜೆಡಿಎಸ್ ಬಲ ಹೆಚ್ಚಲಿದೆ.ಈ ಹಿಂದೆ  ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾದ ನಂತರ ರಾಜ್ಯ ಜನತಾದಳದ ಅಧ್ಯಕ್ಷರಾಗಿದ್ದ ಇಬ್ರಾಹಿಂ,ಬಹುಕಾಲ ಬಗೆಹರಿಯದೆ ಉಳಿದಿದ್ದ ಈದ್ಗಾ ಮೈದಾನದ ವಿವಾದ ಬಗೆಹರಿಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಹೊರಟ್ಟಿ ಸ್ಪಷ್ಟನೆ
ಇನ್ನು ಈ ಹಿಂದೆ ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರೂ ಕೂಡ ಸಿಎಂ ಇಬ್ರಾಹಿಂ ಜೆಡಿಎಸ್ ಸೇರುವ ಕುರಿತು ಮಾತನಾಡಿದ್ದರು. ಇತ್ತೀಚೆಗಷ್ಟೇ ಸಿ ಎಂ ಇಬ್ರಾಹಿಂ ಅವರು ಹುಬ್ಬಳಿಯ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ  ನೀಡಿದ್ದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ, ಸಿ.ಎಂ.ಇಬ್ರಾಹಿಂ ಭೇಟಿ ಬಗ್ಗೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಹುಬ್ಬಳ್ಳಿಗೆ ಬಂದಾಗೊಮ್ಮೆ ನಾವು ಭೇಟಿಯಾಗುತ್ತಲೇ ಇರುತ್ತೇವೆ. ಸಿ.ಎಂ.ಇಬ್ರಾಹಿಂ ಬಿಜೆಪಿ ಸೇರಲ್ಲ, ಅದು ಉಹಾಪೋಹ. ಅವರು ಜನತಾದಳದಲ್ಲಿ  ಮೊದಲಿನಿಂದ ಇದ್ದವರು, ಜನತಾದಳಕ್ಕೆ ಬರಬಹುದು. ಆದರೆ ಬಿಜೆಪಿಗೆ ಹೋಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.
 (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *