curfew cancelled!- ಇಂದಿನಿಂದ ನಿಶೇಧಾಜ್ಞೆ ಇಲ್ಲ!

ವ್ಯಾಪಕ ಟೀಕೆ ಬೆನ್ನಲ್ಲೇ ನೈಟ್ ಕರ್ಫ್ಯೂ ಆದೇಶ ಹಿಂಪಡೆದ ರಾಜ್ಯ ಸರ್ಕಾರ!ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮಾರಣಹೋಮ: ಬಂದೂಕುಧಾರಿಗಳಿಂದ ಮನಬಂದಂತೆ ಗುಂಡು ಹಾರಿಸಿ 100ಕ್ಕೂ ಹೆಚ್ಚು ಜನರ ಭೀಕರ ಹತ್ಯೆ!

ಇಥಿಯೋಪಿಯಾದ ಪಶ್ಚಿಮ ಬೆನಿಶಾಂಗುಲ್-ಗುಮುಜ್ ಪ್ರಾದೇಶಿಕ ರಾಜ್ಯದಲ್ಲಿ ಅಪರಿಚಿತ ಬಂದೂಕುಧಾರಿಗಳು ಮನ ಬಂದಂತೆ ಗುಂಡಿನ ದಾಳಿ ನಡೆಸಿ 100ಕ್ಕೂ ಹೆಚ್ಚು ನಾಗರಿಕರನ್ನು ಭೀಕರವಾಗಿ ಕೊಂದಿದ್ದಾರೆ. 

Villagers

ಅಡಿಸ್ ಅಬಾಬಾ: ಇಥಿಯೋಪಿಯಾದ ಪಶ್ಚಿಮ ಬೆನಿಶಾಂಗುಲ್-ಗುಮುಜ್ ಪ್ರಾದೇಶಿಕ ರಾಜ್ಯದಲ್ಲಿ ಅಪರಿಚಿತ ಬಂದೂಕುಧಾರಿಗಳು ಮನ ಬಂದಂತೆ ಗುಂಡಿನ ದಾಳಿ ನಡೆಸಿ 100ಕ್ಕೂ ಹೆಚ್ಚು ನಾಗರಿಕರನ್ನು ಭೀಕರವಾಗಿ ಕೊಂದಿದ್ದಾರೆ. 

ಈ ಘಟನೆ ಬುಧವಾರ ಮುಂಜಾನೆ ಬೆಕುಜಿ ಕೆಬೆಲ್ಲೆ, ಬುಲೆನ್ ವೆರೆಡಾ ಮತ್ತು ಮೆಟೆಕೆಲ್ ವಲಯದಲ್ಲಿ ಸಂಭವಿಸಿದೆ. ದಾಳಿಕೋರರು ನಿದ್ರೆಯಲ್ಲಿದ್ದ ನಿವಾಸಿಗಳ ಮೇಲೆ ಮನ ಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.

“ಜನರನ್ನು ಕೊಂದು ಅವರ ಮನೆಗಳನ್ನು ಸಹ ಸುಟ್ಟು ಹಾಕಲಾಗಿದೆ ಎಂದು ನ್ಯಾಷನಲ್ ಆಡಿಸ್ ಸ್ಟ್ಯಾಂಡರ್ಡ್ ಸುದ್ದಿ ನಿಯತಕಾಲಿಕವು ಪ್ರತ್ಯಕ್ಷದರ್ಶಿಯೊಬ್ಬರನ್ನು ಉಲ್ಲೇಖಿಸಿ ವರದಿ ಮಾಡಿದೆ. ಭದ್ರತಾ ಪಡೆಗಳ ಮೇಲೂ ದಾಳಿ ನಡೆಸಲಾಗಿದೆ ಎನ್ನಲಾಗಿದೆ ಆದರೆ ದಾಳಿ ಕೋರರು ಬಂದು ಹೋದ ಮೇಲೆ ಭದ್ರತಾಪಡೆಗಳು ಸ್ಥಳಕ್ಕೆ ಆಗಮಿಸಿದ್ದವು. 

ಇನ್ನು ಭೀಕರ ನರಹತ್ಯೆಗೈದಿದ್ದ ಶಸ್ತ್ರಸರ್ಜಿತ 42 ಮಂದಿಯನ್ನು ಇಥಿಯೋಪಿಯಾ ಸೇನೆ ಹುಡುಕಿ ಹುಡುಕಿ ಕೊಂದು ಹಾಕಿದೆ.

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ನೈಟ್ ಕರ್ಫ್ಯೂ ಜಾರಿ ಆದೇಶ ಹಿಂಪಡೆದಿರುವ ಬಗ್ಗೆ ಮುಖ್ಯಮಂತ್ರಿ ಬಿ..ಎಸ್. ಯಡಿಯೂರಪ್ಪ ಮಾದ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಸಿಎಂ ಮಾದ್ಯಮ ಪ್ರಕಟನೆ ಸಂಪೂರ್ಣ ವಿವರ ಹೀಗಿದೆ-

“ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಫ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು.

“ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂವಿನ ಅಗತ್ಯವಿಲ್ಲವೆಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕಫ್ರ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.

“ಸಾರ್ವಜನಿಕರು ಸ್ವಯಂ ನಿರ್ಬಂ ಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಲು ಕೋರಿದೆ.”

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *