ಸರ್ಕಾರಿ ಪದವಿ, ಎಂಜಿನಿಯರಿಂಗ್‌, ಪಾಲಿಟೆಕ್ನಿಕ್‌ ಕಾಲೇಜುಗಳ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌‌

ರಾಜ್ಯದ ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ ಕಾಲೇಜು ಗಳುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ನೀಡಲಾಗುವುದು.

Tablet

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ ಕಾಲೇಜು ಗಳುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಒಟ್ಟು 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ನೀಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್‌ ತಿಳಿಸಿದ್ದಾರೆ.
 
ಕೋವಿಡ್‌ ಹಿನ್ನೆಲೆಯಲ್ಲಿ ಡಿಜಿಟಲ್‌ ಕಲಿಕೆಯನ್ನು ವ್ಯಾಪಕವಾಗಿ ಉತ್ತೇಜಿಸುವ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯವಾದ ಗುಣಮಟ್ಟದ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದರು. 

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನದ ನಿಮಿತ್ತ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದʼ ಉತ್ತಮ ಆಡಳಿತ ದಿನʼ(ಗುಡ್‌ ಗವರ್ನೆನ್ಸ್‌ ಡೇ)ಕಾರ್ಯಕ್ರಮದಲ್ಲಿ ಆಯೋಜಿಸಲಾಗಿದ್ದ ʼಉನ್ನತ ಶಿಕ್ಷಣದಲ್ಲಿ ಜಾಗತಿಕ ಮಟ್ಟದ ಸಿದ್ಧತೆʼ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಷಯದ ಬಗ್ಗೆ ಮಾಹಿತಿ ನೀಡಿದರು.
 
ಗೋಷ್ಠಿಯನ್ನು ನಡೆಸಿಕೊಟ್ಟ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಜಮದಗ್ನಿ ಅವರ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದ ಪ್ರದೀಪ್, ಸದ್ಯಕ್ಕೆ ಕೋವಿಡ್‌ ಕಾರಣಕ್ಕೆ ಆನ್‌ಲೈನ್‌ ಶಿಕ್ಷಣ ನಡೆಯುತ್ತಿದೆ. ಇದು ತಾತ್ಕಾಲಿಕ ವ್ಯವಸ್ಥೆ ಮಾತ್ರ. ಕಾಲೇಜುಗಳು ಆರಂಭವಾಗಿಯೇ ಆಗುತ್ತವೆ. ನೇರ ತರಗತಿಗಳೂ ನಡೆಯುತ್ತವೆ. ಆದರೆ, ತಾಂತ್ರಿಕವಾಗಿ ನಮ್ಮ ವಿದ್ಯಾರ್ಥಿಗಳನ್ನು ಜಾಗತಿಕ ಗುಣಮಟ್ಟಕ್ಕೆ ಅಣಿಗೊಳಿಸಲು ಎಲ್ಲ ರೀತಿಯ ಆರ್ಥಿಕ ಸಹಕಾರ ನೀಡಲು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಉದ್ದೇಶಿಸಿದ್ದಾರೆ ಎಂದರು.

ಪ್ರಸಕ್ತ 2020-21ರ ಶೈಕ್ಷಣಿಕ ವರ್ಷದಲ್ಲಿ 430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾ ರ್ಥಿಗಳು, 14 ಸರಕಾರಿ ಎಂಜನಿಯರಿಂಗ್‌ ಕಾಲೇಜುಗಳಲ್ಲಿನ ಪ್ರಥಮ, ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿಗಳು ಹಾಗೂ 87 ಸರಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಓದುತ್ತಿರುವ ಪ್ರಥಮ, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಈ ಟ್ಯಾಬ್ಲೆಟ್‌ಗಳನ್ನು ನೀಡಲಾಗುತ್ತಿದೆ ಎಂದರು.
 
ಟ್ಯಾಬ್ಲೆಟ್‌ಗಳ ಖರೀದಿಗೆ ಒಟ್ಟು 155.4ಕೋಟಿ ರೂ.ವೆಚ್ಚವಾಗುತ್ತಿದ್ದು, ಪ್ರತಿ ಒಂದು ಟ್ಯಾಬ್ಲೆಟ್‌ ಅನ್ನು 10,000 ರೂ.ಬೆಲೆಯಂತೆ ಖರೀದಿ ಮಾಡಲಾಗುತ್ತಿದೆ. ಒಂದು ವೇಳೆ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಈ ಟ್ಯಾಬ್‌ಗಳು ಪೂರಕವಾಗದಿದ್ದರೆ ಅಡ್ವಾನ್ಸ್ಡ್‌ ವರ್ಷನ್‌ ಲ್ಯಾಪ್‌ಟಾಪ್‌ ಖರೀದಿಗೆ ಕಾಲೇಜುಗಳ ಮೂಲಕವೇ ಶಿಕ್ಷಣ ಸಾಲಕ್ಕೆ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಡಿಜಿಟಲ್‌ ಅಥವಾ ಆನ್‌ಲೈನ್‌ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಅಂತರ್ಜಾಲ ಸಂಪರ್ಕಕ್ಕೆ ಯಾವುದೇ ಅಡಚಣೆ ಆಗದಂತೆ ಈಗಾಗಲೇ ಎಲ್ಲ ಟೆಲಿಕಾಂ ಕಂಪನಿಗಳ ಜತೆ ಮಾತುಕತೆ ನಡೆಸಿ ಬಹುತೇಕ ಕಡೆ ಸಮಸ್ಯೆಯನ್ನು ನೀಗಿಸಲಾಗಿದೆ. ಸರಕಾರಿ ಸ್ವಾಮ್ಯದ ಪ್ರತೀ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಸ್ಮಾರ್ಟ್‌ ಕ್ಲಾಸ್‌ ನಡೆಸಲು ಹಾಗೂ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಹೈ-ಸ್ಪೀಡ್‌ ಇಂಟರ್‌ನೆಟ್‌ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ಪ್ರದೀಪ್‌ ಮಾಹಿತಿ ನೀಡಿದರು.

ಈ ಗೋಷ್ಠಿಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ, ಲ್ಯಾಬ್‌ ಇನ್ ಆಪ್‌ನ ಪವನ್‌ ಶಿಂದೆ ಪಾಲ್ಗೊಂಡಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *