ರೈತರ ಹೊಡೆತಕ್ಕೆ ಹೆದರಿ ದಿಕ್ಕುಪಾಲಾದ ಬಿ.ಜೆ.ಪಿ. ಕಾರ್ಯಕರ್ತರು- ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಳಿ, ಮೊಬೈಲ್ ಟವರ್ ಗೆ ಹಾನಿ

ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ: ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಳಿ, ಮೊಬೈಲ್ ಟವರ್ ಗೆ ಹಾನಿ.  ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಬಗ್ಗೆ ಪ್ರತಿಭಟನೆ ತೀವ್ರವಾಗಿರುವುದರ ಮಧ್ಯೆ, ರೈತರು ಇತ್ತೀಚೆಗೆ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದೆ. ನಿನ್ನೆ ಶುಕ್ರವಾರ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣ ವರದಿಯಾಗಿವೆ.

Bathinda Police intervene after a mild altercation between BJP supporters and a section of protestors who were agitating against the new farm laws.

ಚಂಡೀಗಢ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಬಗ್ಗೆ ಪ್ರತಿಭಟನೆ ತೀವ್ರವಾಗಿರುವುದರ ಮಧ್ಯೆ, ರೈತರು ಇತ್ತೀಚೆಗೆ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದೆ. ನಿನ್ನೆ ಶುಕ್ರವಾರ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣ ವರದಿಯಾಗಿವೆ.

ಪಂಜಾಬ್ ರಾಜ್ಯದ ಬಟಿಂಡಾದಲ್ಲಿ ರೈತರು ಬಿಜೆಪಿ ಕಚೇರಿ ಮೇಲೆ ಗುರಿಯಾಗಿಟ್ಟು ದಾಳಿ ಮಾಡಿದ್ದಾರೆ. ನಿನ್ನೆ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಮಯದಲ್ಲಿ ಪ್ರತಿಭಟನಾ ನಿರತ ರೈತರು ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ನುಗ್ಗಿ ದಾಂಧಲೆ ನಡೆಸಿ ಕುರ್ಚಿಗಳನ್ನು ಮುರಿದು ಹಾಕಿ ಎಲ್ ಇಡಿ ಟಿವಿಯನ್ನು ಒಡೆದು ಹಾಕಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.

ಬಟಿಂಡ ಬಿಜೆಪಿ ಮುಖ್ಯಸ್ಥ ವಿನೋದ್ ಗುಪ್ತ ಮತ್ತು ರಾಜ್ಯ ಬಿಜೆಪಿ ಕಾನೂನು ಘಟಕದ ಸಹ ಸಂಚಾಲಕ ರವೀಂದರ್ ಗುಪ್ತ ಸೇರಿದಂತೆ ಐವರು ಪಕ್ಷದ ಕಾರ್ಯಕರ್ತರು ಘಟನೆಯಲ್ಲಿ ಗಾಯಗೊಂಡಿದ್ದಾರೆ.

ಈ ಎಲ್ಲಾ ಘಟನಾವಳಿಗಳು ಸಿಸಿಟಿವಿ ವಿಡಿಯೊದಲ್ಲಿ ಸೆರೆಯಾಗಿದ್ದು ರೈತರು ಹಿಂಸಾಕೃತ್ಯ ನಡೆಸುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಭೀತಿಯಿಂದ ದಿಕ್ಕುಪಾಲಾಗಿ ಓಡುತ್ತಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಗುಂಪನ್ನು ಚದುರಿಸಿದರು.

ಆದರೆ ನಿನ್ನೆ ದಾಂಧಲೆ ಮಾಡಿದವರು ರೈತರಲ್ಲಿ, ಕೆಲವು ಸಮಾಜ ವಿರೋಧಿ ಕೃತ್ಯದಲ್ಲಿ ತೊಡಗಿರುವವರು ಎಂದು ಕೆಲವು ರೈತರು ಹೇಳುತ್ತಿದ್ದಾರೆ.

ಪಂಜಾಬ್ ನ ಜಲಂದರ್ ಕಂಟೋನ್ಮೆಂಟ್ ನಲ್ಲಿ ಸಹ, ಬಿಜೆಪಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ರೈತರು ಹೋಗಿ ದಾಂಧಲೆ ನಡೆಸಿದ್ದಾರೆ. ನಂತರ ಬಿಜೆಪಿ ನಾಯಕ ಮನೋರಂಜನ್ ಕಳಿಯಾ ಅವರ ನಿವಾಸದ ಮೇಲೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪನ್ನು ಚದುರಿಸಿದರು. ಈ ವೇಳೆ ಕೆಲವು ರೈತರಿಗೆ ಗಾಯಗಳಾಗಿವೆ.

ಕಳೆದ ನಾಲ್ಕೈದು ದಿನಗಳಿಂದ ಪಂಜಾಬ್ ನಲ್ಲಿ ಖಾಸಗಿ ಟೆಲಿಕಾಂ ಕಂಪೆನಿಗಳ ಮೊಬೈಲ್ ಟವರ್ ಗಳ ಮೇಲೆ ರೈತರು ಗುರಿಯಾಗಿರಿಸಿಕೊಂಡು ದಾಳಿ ಮಾಡಿದ್ದಾರೆ. ಈ ಟವರ್ ಗಳಿಗೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ. ಸುಮಾರು ಸಾವಿರ ಟವರ್ ಗಳನ್ನು ಹಾನಿ ಮಾಡಲಾಗಿದೆ. 

ಸಾರ್ವಜನಿಕ ತೊಂದರೆ ಮಾಡದಂತೆ ಮತ್ತು ಶಾಂತಿಯುತವಾಗಿ ಪ್ರತಿಭಟನೆ ಸಾಗಿಸುವಂತೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರತಿಭಟನಾ ನಿರತ ರೈತರಿಗೆ ಮನವಿ ಮಾಡಿದ್ದಾರೆ. 

ಉತ್ತರಾಖಂಡ್ ನಲ್ಲಿ ರೈತರು ಪೊಲೀಸರೊಂದಿಗೆ ಚಕಮಕಿ ನಡೆಸಿದ ಘಟನೆ ವರದಿಯಾಗಿದೆ.ದೆಹಲಿಗೆ ಹೊರಟಿದ್ದ ರೈತರನ್ನು ತಡೆದ ಪೊಲೀಸರೊಂದಿಗೆ ಉದಮ್ ಸಿಂಗ್ ನಗರ್ ನಲ್ಲಿ ರೈತರು ಮಾತಿನ ಚಕಮಕಿ ನಡೆಸಿದ್ದಾರೆ.

ವೈರಲ್ ಆದ ವಿಡಿಯೊವೊಂದರಲ್ಲಿ ಟ್ರಾಕ್ಟರ್ ಒಂದರಲ್ಲಿ ಪೊಲೀಸ್ ಬ್ಯಾರಿಕೇಡ್ ನ್ನು ತಳ್ಳುವ ದೃಶ್ಯವಿದೆ. ನಮ್ಮ ಹಕ್ಕುಗಳನ್ನು ಪೊಲೀಸರು ಕಸಿಯಲು ಸಾಧ್ಯವಿಲ್ಲ. ನಾವು ದೆಹಲಿಗೆ ಶಾಂತಿಯುತವಾಗಿ ಮೆರವಣಿಗೆ ಹೊರಟಿದ್ದು ಪೊಲೀಸರು ನಮ್ಮನ್ನು ತಡೆಯುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *