ರೈತರ ಹೊಡೆತಕ್ಕೆ ಹೆದರಿ ದಿಕ್ಕುಪಾಲಾದ ಬಿ.ಜೆ.ಪಿ. ಕಾರ್ಯಕರ್ತರು- ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಳಿ, ಮೊಬೈಲ್ ಟವರ್ ಗೆ ಹಾನಿ

ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ: ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಳಿ, ಮೊಬೈಲ್ ಟವರ್ ಗೆ ಹಾನಿ.  ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಬಗ್ಗೆ ಪ್ರತಿಭಟನೆ ತೀವ್ರವಾಗಿರುವುದರ ಮಧ್ಯೆ, ರೈತರು ಇತ್ತೀಚೆಗೆ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದೆ. ನಿನ್ನೆ ಶುಕ್ರವಾರ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣ ವರದಿಯಾಗಿವೆ.

Bathinda Police intervene after a mild altercation between BJP supporters and a section of protestors who were agitating against the new farm laws.

ಚಂಡೀಗಢ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಬಗ್ಗೆ ಪ್ರತಿಭಟನೆ ತೀವ್ರವಾಗಿರುವುದರ ಮಧ್ಯೆ, ರೈತರು ಇತ್ತೀಚೆಗೆ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದೆ. ನಿನ್ನೆ ಶುಕ್ರವಾರ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣ ವರದಿಯಾಗಿವೆ.

ಪಂಜಾಬ್ ರಾಜ್ಯದ ಬಟಿಂಡಾದಲ್ಲಿ ರೈತರು ಬಿಜೆಪಿ ಕಚೇರಿ ಮೇಲೆ ಗುರಿಯಾಗಿಟ್ಟು ದಾಳಿ ಮಾಡಿದ್ದಾರೆ. ನಿನ್ನೆ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಮಯದಲ್ಲಿ ಪ್ರತಿಭಟನಾ ನಿರತ ರೈತರು ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ನುಗ್ಗಿ ದಾಂಧಲೆ ನಡೆಸಿ ಕುರ್ಚಿಗಳನ್ನು ಮುರಿದು ಹಾಕಿ ಎಲ್ ಇಡಿ ಟಿವಿಯನ್ನು ಒಡೆದು ಹಾಕಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.

ಬಟಿಂಡ ಬಿಜೆಪಿ ಮುಖ್ಯಸ್ಥ ವಿನೋದ್ ಗುಪ್ತ ಮತ್ತು ರಾಜ್ಯ ಬಿಜೆಪಿ ಕಾನೂನು ಘಟಕದ ಸಹ ಸಂಚಾಲಕ ರವೀಂದರ್ ಗುಪ್ತ ಸೇರಿದಂತೆ ಐವರು ಪಕ್ಷದ ಕಾರ್ಯಕರ್ತರು ಘಟನೆಯಲ್ಲಿ ಗಾಯಗೊಂಡಿದ್ದಾರೆ.

ಈ ಎಲ್ಲಾ ಘಟನಾವಳಿಗಳು ಸಿಸಿಟಿವಿ ವಿಡಿಯೊದಲ್ಲಿ ಸೆರೆಯಾಗಿದ್ದು ರೈತರು ಹಿಂಸಾಕೃತ್ಯ ನಡೆಸುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಭೀತಿಯಿಂದ ದಿಕ್ಕುಪಾಲಾಗಿ ಓಡುತ್ತಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಗುಂಪನ್ನು ಚದುರಿಸಿದರು.

ಆದರೆ ನಿನ್ನೆ ದಾಂಧಲೆ ಮಾಡಿದವರು ರೈತರಲ್ಲಿ, ಕೆಲವು ಸಮಾಜ ವಿರೋಧಿ ಕೃತ್ಯದಲ್ಲಿ ತೊಡಗಿರುವವರು ಎಂದು ಕೆಲವು ರೈತರು ಹೇಳುತ್ತಿದ್ದಾರೆ.

ಪಂಜಾಬ್ ನ ಜಲಂದರ್ ಕಂಟೋನ್ಮೆಂಟ್ ನಲ್ಲಿ ಸಹ, ಬಿಜೆಪಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ರೈತರು ಹೋಗಿ ದಾಂಧಲೆ ನಡೆಸಿದ್ದಾರೆ. ನಂತರ ಬಿಜೆಪಿ ನಾಯಕ ಮನೋರಂಜನ್ ಕಳಿಯಾ ಅವರ ನಿವಾಸದ ಮೇಲೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪನ್ನು ಚದುರಿಸಿದರು. ಈ ವೇಳೆ ಕೆಲವು ರೈತರಿಗೆ ಗಾಯಗಳಾಗಿವೆ.

ಕಳೆದ ನಾಲ್ಕೈದು ದಿನಗಳಿಂದ ಪಂಜಾಬ್ ನಲ್ಲಿ ಖಾಸಗಿ ಟೆಲಿಕಾಂ ಕಂಪೆನಿಗಳ ಮೊಬೈಲ್ ಟವರ್ ಗಳ ಮೇಲೆ ರೈತರು ಗುರಿಯಾಗಿರಿಸಿಕೊಂಡು ದಾಳಿ ಮಾಡಿದ್ದಾರೆ. ಈ ಟವರ್ ಗಳಿಗೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ. ಸುಮಾರು ಸಾವಿರ ಟವರ್ ಗಳನ್ನು ಹಾನಿ ಮಾಡಲಾಗಿದೆ. 

ಸಾರ್ವಜನಿಕ ತೊಂದರೆ ಮಾಡದಂತೆ ಮತ್ತು ಶಾಂತಿಯುತವಾಗಿ ಪ್ರತಿಭಟನೆ ಸಾಗಿಸುವಂತೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರತಿಭಟನಾ ನಿರತ ರೈತರಿಗೆ ಮನವಿ ಮಾಡಿದ್ದಾರೆ. 

ಉತ್ತರಾಖಂಡ್ ನಲ್ಲಿ ರೈತರು ಪೊಲೀಸರೊಂದಿಗೆ ಚಕಮಕಿ ನಡೆಸಿದ ಘಟನೆ ವರದಿಯಾಗಿದೆ.ದೆಹಲಿಗೆ ಹೊರಟಿದ್ದ ರೈತರನ್ನು ತಡೆದ ಪೊಲೀಸರೊಂದಿಗೆ ಉದಮ್ ಸಿಂಗ್ ನಗರ್ ನಲ್ಲಿ ರೈತರು ಮಾತಿನ ಚಕಮಕಿ ನಡೆಸಿದ್ದಾರೆ.

ವೈರಲ್ ಆದ ವಿಡಿಯೊವೊಂದರಲ್ಲಿ ಟ್ರಾಕ್ಟರ್ ಒಂದರಲ್ಲಿ ಪೊಲೀಸ್ ಬ್ಯಾರಿಕೇಡ್ ನ್ನು ತಳ್ಳುವ ದೃಶ್ಯವಿದೆ. ನಮ್ಮ ಹಕ್ಕುಗಳನ್ನು ಪೊಲೀಸರು ಕಸಿಯಲು ಸಾಧ್ಯವಿಲ್ಲ. ನಾವು ದೆಹಲಿಗೆ ಶಾಂತಿಯುತವಾಗಿ ಮೆರವಣಿಗೆ ಹೊರಟಿದ್ದು ಪೊಲೀಸರು ನಮ್ಮನ್ನು ತಡೆಯುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *