ಕೊಬ್ರಿ ಹೋರಿ ಕ್ರೀಡಾಕೂಟದಲ್ಲಿ ದುರಂತ: ಕೆರೆಗೆ ಹಾರಿದ ಎತ್ತು ನೀರಲ್ಲಿ ಮುಳುಗಿ ಸಾವು

ಹಾವೇರಿ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ಗ್ರಾಮೀಣ ಕ್ರೀಡೆಯಾದ ಕೋಬ್ರಿ ಹೋರಿ ಭಾಗವಾದ ಎತ್ತೊಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದೆ. ಹಾವೇರಿಯ ಸುತಗಟ್ಟಿ ಗ್ರಾಮದ ಕೆರೆಯಲ್ಲಿ ಎತ್ತು ಮುಳುಗಿ ಸಾವನ್ನಪ್ಪಿದೆ. ಕ್ರೀಡೆಯ ನಡುವೆ ತನ್ನನ್ನು ಬೆನ್ನಟ್ಟುತ್ತಿದ್ದವರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದ ಎತ್ತು ಪ್ರೇಕ್ಷಕರ ಗುಂಪಿನ ಮೂಲಕ ನುಗ್ಗಿ ಕೆರೆಗೆ ಹಾರಿದ

ಹುಬ್ಬಳ್ಳಿ: ಹಾವೇರಿ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ಗ್ರಾಮೀಣ ಕ್ರೀಡೆಯಾದ ಕೊಬ್ರಿ ಹೋರಿ ಭಾಗವಾದ ಎತ್ತೊಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದೆ. ಹಾವೇರಿಯ ಸುತಗಟ್ಟಿ ಗ್ರಾಮದ ಕೆರೆಯಲ್ಲಿ ಎತ್ತು ಮುಳುಗಿ ಸಾವನ್ನಪ್ಪಿದೆ. ಕ್ರೀಡೆಯ ನಡುವೆ ತನ್ನನ್ನು ಬೆನ್ನಟ್ಟುತ್ತಿದ್ದವರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದ ಎತ್ತು ಪ್ರೇಕ್ಷಕರ ಗುಂಪಿನ ಮೂಲಕ ನುಗ್ಗಿ ಕೆರೆಗೆ ಹಾರಿದೆ.

ಎತ್ತು ಕೆರೆಯಲ್ಲಿ ದೂರಕ್ಕೆ ಈಜಲು ಯತ್ನಿಸಿದರೂ ವಿಫಲವಾಯಿತು ಮತ್ತು ಪ್ರಾಣ ಕಳೆದುಕೊಂಡಿತು. ಕೊಬ್ರಿ ಹೋರಿ ಕ್ರೀಡೆಯಲ್ಲಿ ಮೃತಪಟ್ಟ ಎತ್ತನ್ನು ಬಲರಾಮ ಎನ್ನಲಾಗಿದ್ದು ಇದು ಎಲ್ಲರ ಆಕರ್ಷಣೆಯ ಕೇಂದ್ರವಾಗಿತ್ತು.

ಕೊರೋನಾ ಸಾಂಕ್ರಾಮಿಕದ ನಡುವೆ ಇಷ್ಟು ದೊಡ್ಡ ಕೂಟಕ್ಕೆ ಜಿಲ್ಲಾಡಳಿತ ಹೇಗೆ ಅವಕಾಶ ನೀಡಿತು ಎಂಬ ಬಗ್ಗೆಯೂ ಈ ಘಟನೆಯು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸುತಗಟ್ಟಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ನೂರಾರು ಜನರು ಸೇರಿದ್ದರು. ಕೋಬ್ರಿ ಹೋರಿ ಕ್ರೀಡೆ  ಅಲಂಕೃತ ಎತ್ತುಗಳನ್ನು ಜನಸಮೂಹದ ಮೂಲಕ ಓಡಿಸುವ ಆಟವಾಗಿದ್ದು ಜನರು ಎತ್ತನ್ನು ಹಿಡಿಯಲು ಪ್ರಯತ್ನಿಸುತ್ತಾರೆ. ಸಾಂಪ್ರದಾಯಿಕ ಕಾರ್ಯಕ್ರಮವನ್ನು ಹಾವೇರಿಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಆಡಲಾಗುತ್ತದೆ.

ಇಷ್ಟು ದೊಡ್ಡ ಕೂಟಕ್ಕೆ ಸಂಘಟಕರು ಅನುಮತಿ ಕೋರಿಲ್ಲ ಎಂದು ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ. “ಇದಲ್ಲದೆ ಜನರು ಬೃಹತ್ ಉತ್ಸವ, ಕಾರ್ಯಕ್ರಮಗಳನ್ನು ನಡೆಸದಂತೆ ಜನರಿಗೆ ಮನವಿ ಮಾಡುವ ಮೂಲಕ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇಲ್ಲಿಯವರೆಗೆ ಯಾವುದೇ ಪ್ರಕರಣಗಳನ್ನು ದಾಖಲಿಸಲಾಗಿಲ್ಲ. ಯಾರಾದರೂ ದೂರು ನೀಡಲು ಮುಂದೆ ಬಂದರೆ ನಾವು ಈ ಬಗ್ಗೆ ಕ್ರಮ ಜರುಗಿಸುತ್ತೇವೆ” ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಲ್ಲಿಕಟ್ಟು ಕ್ರೀಡೆಯಂತೆಯೇ ಕೊಬ್ರಿ ಹೋರಿ ಸಹ ಇಂತಹಾ ದುರಂತಗಳಿಂದ ಮುಕ್ತವಾಗಿಲ್ಲ.ಈ ಕ್ರೀಡೆಯ ವೇಳೆ ಹಿಂದೆ ಸಹ ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಜನವರಿ 2018 ರಲ್ಲಿ ಸಹ ಇದೇ ಕೊಬ್ರಿ ಹೋರಿ ನಡೆಯುವಾಗ ಒಬ್ಬ ವ್ಯಕ್ತಿ ಗಾಯಗೊಂಡು ಪ್ರಾಣ ಬಿಟ್ಟಿದ್ದನು.ಅಲ್ಲದೆ ಇನ್ನೂ ಆರು ಜನರು ಗಾಯಗೊಂಡಿದ್ದರು. ಕೊಬ್ರಿ ಹೋರಿ ಕಾರ್ಯಕ್ರಮವನ್ನು ಜನದಟ್ಟಣೆಯ ಕಾರ್ಯಕ್ರಮ ಎನ್ನಲಾಗುತ್ತದೆ. ಇದಕ್ಕಾಗಿ ಸುತ್ತಮುತ್ತಲಿನ ಜಿಲ್ಲೆಗಳ ಜನರು ಕೂಡ ಈ ಗ್ರಾಮೀಣ ಸಾಂಪ್ರದಾಯಿಕ ಕ್ರೀಡೆಯನ್ನು ವೀಕ್ಷಿಸಲು ಬರುತ್ತಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

ಬಿ.ಜೆ.ಪಿ. & ಕಾಂಗ್ರೆಸ್‌ ಗಳಿಂದ ತುಷ್ಟೀಕರಣದ ಸ್ಫರ್ಧೆ… ಕಾಂಗ್ರೆಸ್‌ ಬಸ್ಮಾಸುರ,ಬಿ.ಜೆ.ಪಿ. ಬಕಾಸುರ….

ಮುಸ್ಲಿಂ ಅಲ್ಪಸಂಖ್ಯಾತರನ್ನು ಒಲೈಸುವಲ್ಲಿ ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಗಳು ಸ್ಫರ್ಧೆ ನಡೆಸಿದ್ದು ಅಪಾಯಕಾರಿ ನಡೆಗಳಲ್ಲಿ ಎರಡೂ ಪಕ್ಷಗಳೂ ಒಂದೇ ನಾಣ್ಯದ ಎರಡು ಮುಖಗಳಿಂತಿವೆ ಎಂದು...

ಬಹಿರಂಗ ಶುದ್ಧಿ ಜೊತೆಗೆ ಅಂತರಂಗ ಶುದ್ಧಿ ಮಹತ್ವ

ಸಿದ್ದಾಪುರದಲ್ಲಿ ಪವಿತ್ರ ರಂಜಾನ್ ಸಂಭ್ರಮಾಚರಣೆಸಿದ್ದಾಪುರ :31ಒಂದು ತಿಂಗಳ ಕಾಲ ಉಪವಾಸ ವ್ರತವನ್ನು ಆಚರಿಸಿದ ಮುಸ್ಲಿಮ್ ಬಾಂಧವರು ಪವಿತ್ರ ರಂಜಾನ್ (ಈದ್ ಉಲ್ ಫಿತ್ರ )ಹಬ್ಬವನ್ನು...

samajamukhi.net exclusive- ಇಂದು ಕರ್ನಾಟಕ….ಪತ್ರಕರ್ತ ವಿಶ್ವಾಮಿತ್ರ ಹೆಗಡೆ ವಿಧಿವಶ,ಶಿರಸಿಗೆ ಬಾರದ ಗೃಹಸಚಿವ,ಹಳದೋಟದಲ್ಲಿ ನಡೆಯಿತು ಸೇನಾವಿಧಿ!

ಶಿರಸಿಯ ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ಭತ್ತಗುತ್ತಿಗೆ ಇಂದು ವಿಧಿವಶರಾಗಿದ್ದಾರೆ. ಪ್ರತಿಷ್ಠಿತ ಭತ್ತಗುತ್ತಿಗೆ ಕುಟುಂಬದ ವಿಶ್ವಾಮಿತ್ರ ಹೆಗಡೆ ಕನ್ನಡಪ್ರಭ,ವಿಶ್ವವಾಣಿ ಸೇರಿದಂತೆ ಕೆಲವು ಪತ್ರಿಕೆಗಳಲ್ಲಿ ಕೆಲಸಮಾಡಿದ್ದರು....

ಸೈನಿಕ ಸುರೇಶ್‌ ನಾಯ್ಕ ಸಾವು

ಕೆಂದ್ರ ರಕ್ಷಣಾ ಪಡೆ ಸಿ.ಆರ್.ಪಿ.ಎಫ್.‌ ನಲ್ಲಿ ಸಹಾಯಕ ಸಬ್‌ ಇನ್ಫೆಕ್ಟರ್‌ ಆಗಿ ಸೇವೆಯಲ್ಲಿದ್ದ ಸುರೇಶ್‌ ಮೂಕಾ ನಾಯ್ಕ ಹಳದೋಟ ರವಿವಾರ ಬೆಂಗಳೂರಿನ ಆಸ್ಫತ್ರೆಯಲ್ಲಿ ನಿಧನರಾದರು....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *