ವಿಧಾನಸಭಾ ಅಧ್ಯಕ್ಷರ ಆಪ್ತರ ಸೋಲು- ಸಿಎಂ ಯಡಿಯೂರಪ್ಪ ತವರಲ್ಲಿ ಲಾಟರಿ ಮೂಲಕ ಬಿಜೆಪಿಗೆ ಒಲಿದ ಜಯ

ಗ್ರಾಮ ಪಂಚಾಯ್ತಿ ಫಲಿತಾಂಶ:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರೂರು ಬೂಕನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೊಮ್ಮೇಗೌಡನಕೊಪ್ಪಲು ಗ್ರಾಮದಿಂದ ಸ್ಪರ್ಧೆ ಮಾಡಿದ್ದ ಬಿಜೆಪಿ ಬೆಂಬಲಿತ ಮಂಜುಳಾಗೆ ಲಾಟರಿ ಹೊಡೆದಿದೆ.

ವಿಧಾನಸಭಾ ಅಧ್ಯಕ್ಷರ ಆಪ್ತರ ಸೋಲು-

ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕ್ಷೇತ್ರದಲ್ಲಿ ಅವರ ಆಪ್ತರನ್ನೇ ಗುರಿಮಾಡಿ ಸೋಲಿಸುವ ಕೆಲಸದಲ್ಲಿ ಅವರ ಪಕ್ಷದವರೇ ಯಶಸ್ವಿಯಾಗಿದ್ದಾರೆ ಎನ್ನಲಾಗುತ್ತಿದೆ.

ಶಿರಸಿ ಕ್ಷೇತ್ರ ಶಿರಸಿ-ಸಿದ್ಧಾಪುರ ತಾಲೂಕುಗಳನ್ನು ಒಳಗೊಳ್ಳುತ್ತದೆ. ಒಂದೇ ತಾಲೂಕಿನವರಾಗಿರುವ ಸಂಸದ ಅನಂತಕುಮಾರ ಹೆಗಡೆ ಮತ್ತು ಶಾಸಕ ವಿಶ್ವೇಶ್ವರ ಹೆಗಡೆ ಉತ್ತಮ ಸಂಬಂಧ ಹೊಂದಿದವರಲ್ಲ. ಅನಂತಕುಮಾರ ಹೆಗಡೆ ಶಿರಸಿ ತಾಲೂಕಿನಲ್ಲಿ ತುಸು ಹಿಡಿತ ಹೊಂದಿದ್ದರೂ ಸಿದ್ಧಾಪುರ ತಾಲೂಕಿನಲ್ಲಿ ಅವರ ಶಿಷ್ಯರ ಸಾಮರ್ಥ್ಯ ಹೊಡಿ-ಬಡಿ ಕೆಲಸಕ್ಕೆ ಸೀಮಿತ. ವಿಶ್ವೇಶ್ವರ ಹೆಗಡೆ ಈ ಹಿಂದೆ ಸಿದ್ಧಾಪುರವನ್ನೇ ನಂಬಿ ಗೆಲ್ಲುತಿದ್ದರು. ಆದರೆ ಕಾಗೇರಿ, ಅನಂತಕುಮಾರ ಹೆಗಡೆಗಳ ಜಾತೀಯತೆ ಅರಿತ ಕ್ಷೇತ್ರದ ಜನತೆ ಅನಂತಕುಮಾರ ಹೆಗಡೆ ಶಿಷ್ಯರು ಮತ್ತು ಶಾಸಕ ವಿಶ್ವೇಶ್ವರ ಹೆಗಡೆ ಶಿಷ್ಯರನ್ನು ಹುಡುಕಿ ಸೋಲಿಸಿದ್ದಾರೆ. ಹೀಗೆ ವಿಧಾನಸಭಾ ಅಧ್ಯಕ್ಷ ಕಾಗೇರಿಯವರ ಸೋತ ಶಿಷ್ಯರ ಪಟ್ಟಿಯಲ್ಲಿ ಕೋಲಶಿರ್ಸಿಯ ನಾರಾಯಣ ನಾಯ್ಕ,ಇಟಗಿಯ ಗಣಪತಿ ಹೆಗಡೆ, ಬಿದ್ರಕಾನಿನ ಹಳದೋಟ ವಿ.ಎನ್. ಹೆಗಡೆ ಪ್ರಮುಖರು.

ಅನಂತಕುಮಾರ ಹೆಗಡೆಯವರ ಸೋತ ಶಿಷ್ಯರ ಪಟ್ಟಿಯಲ್ಲಿ ಮಾರುತಿ ನಾಯ್ಕ ಕಾನಗೋಡು ಸೇರಿದಂತೆ ಅನೇಕರಿದ್ದಾರೆ.

ಬಿ.ಜೆ.ಪಿ. ಮಾಜಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ ಹಣಜಿಬೈಲ್ ಬಣ ಅನಂತಕುಮಾರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದರೂ ಶಾಸಕ ಕಾಗೇರಿ ಒಳಹೊಡೆತದಿಂದಾಗಿ ಕೆ.ಜಿ.ಬಣ ಪಟ್ಟಣದಲ್ಲಿ ಯಶಸ್ವಿಯಾದಂತೆ ಗ್ರಾಮೀಣ ಪ್ರದೇಶದಲ್ಲಿ ಯಶಸ್ವಿಯಾಗಿಲ್ಲ! ಮಾಜಿ ಜಿ.ಪಂ. ಸದಸ್ಯ ವಿ.ಎನ್. ನಾಯಕರ ಹಠದಿಂದಾಗಿ ಬೇಡ್ಕಣಿ ಸೇರಿದಂತೆ ದೊಡ್ಮನೆ ಪಂಚಾಯತ್ ನಲ್ಲಿ ಕಾಂಗ್ರೆಸ್ ಗೆ ತುಸು ಹಿನ್ನಡೆಯಾಗಿದ್ದರೂ ಬಿ.ಜೆ.ಪಿ. ನೆರವು ಪಡೆದಿರುವ ಕಾಂಗ್ರೆಸ್ಸಿಗರು, ಕೆಲವು ಕಾಂಗ್ರೆಸ್ ಬೆಂಬಲಿತರು ಗೆದ್ದು ಬಿ.ಜೆ.ಪಿ.ಗೇ ಹಿನ್ನಡೆ ಮಾಡಿದ್ದಾರೆ! ಈ ಮಧ್ಯೆ ಬೇಡ್ಕಣಿ ಗ್ರಾಮ ಪಂಚಾಯತ್ ನಲ್ಲಿ ಕೃಷ್ಣಮೂರ್ತಿ ಮಡಿವಾಳ ದಿಗ್ವಿಜಯ, ಹೊಸ ಹುಡುಗ ಉಲ್ಲಾಸ್ ಗೌಡರ್ ಗೆಲುವಿನ ಹಿಂದೆ ಕೆ.ಜಿ.ಬಣದ ಕೈವಾಡ ನಿಸಂಶಯ. ಕಾಂಗ್ರೆಸ್ ಅಧಿಕಾರದ ಕೋಲಶಿರ್ಸಿ ಕಾಂಗ್ರೆಸ್ ಬಂಡಾಯಗಾರರ ನೆರವಿನಿಂದ ಅಧಿಕಾರ ಹಿಡಿಯುವ ಸಾಧ್ಯತೆ ಹೆಚ್ಚಿದೆ. ಇಲ್ಲಿ ತಾಲೂಕಾ ಪಂಚಾಯತ್ ಅಧ್ಯಕ್ಷರು ಶಾಸಕರ ಜೊತೆಗಿನ ನಿಕಟ ಸಂಪರ್ಕ ಕೋಲಶಿರ್ಸಿಯಲ್ಲಿ ಬಿ.ಜೆ.ಪಿ. ಆಡಳಿತ ಮಾಡುವಂತಾದರೂ ಆಶ್ಚರ್ಯವಿಲ್ಲ ಎನ್ನುವ ಹೊಸ ಸಾಧ್ಯತೆಗೂ ಕಾರಣವಾಗಬಹುದು!

ಬಿದ್ರಕಾನ್ ನಲ್ಲಿ ಬಿ.ಜೆ.ಪಿ. ಆಡಳಿತದ ಗ್ರಾಮ ಪಂಚಾಯತ್ ಕೈ ತಪ್ಪಲು ಬಿ.ಜೆ.ಪಿ. ಬಣ ರಾಜಕೀಯ ಕಾರಣವಾದರೂ ಹೊಸ ತಾಲೂಕಾ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಸ್ಥಳಿಯ ಘಟಕದ ಪ್ರಯತ್ನದಿಂದಾಗಿ ಕಾಂಗ್ರೆಸ್ ಬೆಂಬಲಿತರು ಅಧಿಕಾರ ಪಡೆಯಲು ಅನುಕೂಲವಾಗಿದೆ.

ಹೊಸ ಪಂಚಾಯತ್ ತಂಡಾಗುಂಡಿಯಲ್ಲಿ ಕಾಂಗ್ರೆಸ್ ಆಡಳಿತ ನಿಶ್ಚಿತವಾಗಿದೆ. ಬಿ.ಜೆ.ಪಿ. ಆಡಳಿತದಲ್ಲಿದ್ದ ಕಾನಸೂರು ಮತ್ತು ತ್ಯಾಗಲಿ ಪಂಚಾಯತ್ ಗಳು ಕಾಂಗ್ರೆಸ್ ತೆಕ್ಕೆಗೆ ಜಾರುವ ಸಾಧ್ಯತೆ ಇದೆ. ಇಲ್ಲೆಲ್ಲಾ ಹೊಸ ಬಿ.ಜೆ.ಪಿ.ಗರು ಅನಂತಕುಮಾರ ಹೆಗಡೆ, ಶಾಸಕ ಕಾಗೇರಿ, ಇವರ ನಡುವೆ ಕೆ.ಜಿ.ನಾಯ್ಕ ಬಣಗಳ ಪ್ರತಿಷ್ಠೆಯಿಂದಾಗಿ ಕಾಂಗ್ರೆಸ್ ಬೆಂಬಲಿತರಿಗೆ ಅನುಕೂಲವಾಗಿದೆ ಎನ್ನಲಾಗುತ್ತಿದೆ.

BJP

ಬೂಕನಕೆರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರೂರು ಬೂಕನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೊಮ್ಮೇಗೌಡನಕೊಪ್ಪಲು ಗ್ರಾಮದಿಂದ ಸ್ಪರ್ಧೆ ಮಾಡಿದ್ದ ಬಿಜೆಪಿ ಬೆಂಬಲಿತ ಮಂಜುಳಾಗೆ ಲಾಟರಿ ಹೊಡೆದಿದೆ.

ಇದೇ ರೀತಿ ರಾಜ್ಯದ ಹಲವು ಗ್ರಾಮ ಪಂಚಾಯತ್ ಗಳಲ್ಲಿ ಜಿದ್ದಾಜಿದ್ದಿನ ಪೈಪೋಟಿ ನಡೆದಿದ್ದು, ಅಭ್ಯರ್ಥಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಗಿದೆ.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮಂಜುಳಾ ಹಾಗೂ ಕಾಂಗ್ರೆಸ್‌ನ ವನಜಾಕ್ಷಿ ಅವರು ತಲಾ 301 ಮತಗಳನ್ನು ಸಮನಾಗಿ ಪಡೆದ ಕಾರಣ ಚುನಾವಣಾಧಿಕಾರಿಗಳು ಲಾಟರಿ ವಿಧಾನದ ಮೂಲಕ ವಿಜೇತರನ್ನು ಆಯ್ಕೆ ಮಾಡಿದರು. ಈ ಸಂದರ್ಭದಲ್ಲಿ ಮಂಜುಳಾ ಅವರಿಗೆ ಅದೃಷ್ಠ ಒಲಿದು ಆಯ್ಕೆಯಾಗಿದ್ದಾರೆ. 

ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾ.ಪಂ.ನ ಮತಗಟ್ಟೆ 2ರಲ್ಲಿ ಇಬ್ಬರು ಅಭ್ಯರ್ಥಿಗಳ ಸಮಬಲದ ಹೋರಾಟ ನಡೆಯಿತು. ಇಬ್ಬರೂ ತಲಾ 316 ಮತಗಳನ್ನು ಪಡೆದರು. ಸ್ಪರ್ಧಿಸಿದ್ದ ಸತೀಶ್ ಹಾಗೂ ತ್ಯಾಗರಾಜು ಅವರ ನಡುವೆ ತೀವ್ರ ಪೈಪೋಟಿ ನಡೆದು ಸಮಬಲ ಸಾಧಿಸಿದ್ದರು. ಅಂತಿಮವಾಗಿ ಲಾಟರಿ ಮೊರೆ ಹೋದ ವೇಳೆ ಸತೀಶ್‌ಗೆ ಜಯ ಒಲಿದಿದೆ.

ಮಂಡ್ಯ ತಾಲ್ಲೂಕು ಶಿವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಗುನ್ನಾಯ್ಕನಹಳ್ಳಿ ಗ್ರಾಮದ ರಾಜೇಶ್ ಅವರು ತಮ್ಮ ಪ್ರತಿಸ್ಪರ್ಧಿ ದಿವ್ಯಶ್ರೀ ವಿರುದ್ಧ ಕೇವಲ 1 ಮತಗಳ ಅಂತರದಿಂದ ಜಯಗಳಿಸಿದ್ದಾರೆ. 

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮ ಪಂಚಾಯಿತಿಗೆ ವ್ಯಾಪ್ತಿಯ ಹೊಸೂರು ಗ್ರಾಮದಿಂದ ಸ್ಪರ್ಧಿಸಿದ್ದ ಎಪಿಎಂಸಿ ನಿರ್ದೇಶಕ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸೋಮಣ್ಣ ಅವರು ತಾಲ್ಲೂಕು ಕುರುಬ ಸಮಾಜದ ಯುವ ಘಟಕದ ಅಧ್ಯಕ್ಷ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಿಂಗರಾಜು ಅವರನ್ನು ಕೇವಲ 1 ಮತದ ಅಂತರದಿಂದ ಪರಾಭವಗೊಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *