ಉಳಿದ ಎರಡೂವರೆ ವರ್ಷ ನಾನೇ ಸಿಎಂ: ಸಿಎಂ ಯಡಿಯೂರಪ್ಪ, ಒಗ್ಗಟ್ಟು,ಸಂಘಟನೆಯಿಂದ ಸಮಾಜದ ಅಭಿವೃದ್ಧಿ-ನಿಶ್ಚಲಾನಂದ ಸ್ವಾಮೀಜಿ

ಉಳಿದ ಎರಡೂವರೆ ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಪೂರ್ಣಗೊಳಿಸುತ್ತೇನೆ. ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎಂದು ಬಿ.ಎಸ್ ಯಡಿಯೂರಪ್ಪ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.

Yediyurappa

ಸಿದ್ದಾಪುರ
ಎಲ್ಲರೂ ಒಂದಾಗಿರಬೇಕು.ಒಗ್ಗಟ್ಟಾಗಿರಬೇಕು ಹಾಗೂ ಸಂಘಟನೆ ಬೇಕು. ಸಂಘಟನೆ ಎನ್ನುವುದು ಯಾರ ಮೇಲೆ ಹೋರಾಟ ಮಾಡುವುದಕ್ಕೆ ಅಲ್ಲ. ಸಮಾಜದ ಸುಧಾರಣೆಗೆ ಇರಬೇಕೆಂದು ಕುಮಟಾ ಮಿರ್ಜಾನಿನ ಆದಿಚುಂಚನಗಿರಿ ಶಾಖಾಮಠದ ಶ್ರೀ ನಿಶ್ಚಲಾನಂದ ಸ್ವಾಮೀಜಿಯವರು ಹೇಳಿದರು.
ತಾಲೂಕಿನ ಕಾನಗದ್ದೆಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ದಿವ್ಯಸಾನ್ನಿಧ್ಯವಹಿಸಿ ಶ್ರೀಗಳು ಸೋಮವಾರ ಆಶೀರ್ವಚನ ನೀಡಿದರು.

ಸಮಾಜದ ಎಲ್ಲ ವರ್ಗದವರು ಶಿಕ್ಷಣವಂತರಾಗಬೇಕು ಎನ್ನುವ ಉದ್ದೇಶ ನಮ್ಮದು. ಬಡವರು ಶಿಕ್ಷಣದಿಂದ ವಂಚಿತರಾಗಬಾರದು ಆಧಿಚುಂಚನಗಿರಿ ಮಠ ಎಲ್ಲ ವರ್ಗದವರಿಗೂ ಉಚಿತ ಶಿಕ್ಷಣ ನೀಡುವುದಕ್ಕೆ ಮುಂದಾಗಿದೆ.
ಇಂದು ಜನತೆಯಲ್ಲಿ ಶೃದ್ಧೆ-ಭಕ್ತಿ ಕಡಿಮೆ ಆಗುತ್ತಿದೆ. ದೇವರ ಧ್ಯಾನವನ್ನು ನಿಷ್ಕಲಮನಸ್ಸಿನಿಂದ ಮಾಡಬೇಕು. ಮಠಗಳಿಗೆ ಭೇಟಿ ನೀಡಿ ಗುರುಗಳ ಸೇವೆ ಮಾಡಬೇಕು. ಗುರುಗಳ ಮಾರ್ಗದರ್ಶನದಂತೆ ನಡೆದರೆ ಸಮಾಜಕ್ಕೆ ಒಳಿತಾಗುತ್ತದೆ ಎಂದು ಹೇಳಿದರು.
ಉದ್ಯಮಿ ಉಪೇಂದ್ರ ಪೈ ಮಾತನಾಡಿ ಎಲ್ಲರಲ್ಲೂ ಧಾರ್ಮಿಕ ಭಾವನೆ ಮೂಡಬೇಕಾದರೆ ಪ್ರತಿ ಊರಿನಲ್ಲಿ ದೇವಸ್ಥಾನ ಇರಬೇಕು.ಸಂಘಟನೆ ಬೇಕು. ಒಳ್ಳೆಯ ಮನಸ್ಸಿದ್ದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಸಿದ್ದಾಪುರ:ತಾಲೂಕಿನಲ್ಲಿ ನಡೆದಗ್ರಾಮ ಪಂಚಾಯತಚುನಾವಣೆ ಮತಏಣಿಕೆಯ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು. ಮುಂಜಾನೆ 8 ಗಂಟೆಯಿಂದಆರಂಭವಾದ ಮತಏಣಿಕೆ ಸಂಜೆ 7 ಆದರೂ ಪೂರ್ತಿ ಫಲಿತಾಂಶದೊರೆಯಲಿಲ್ಲಾ.23 ಪಂಚಾಯತಗಳಲ್ಲಿ 8 ಪಂಚಾಯಗಳ ಫಲಿತಾಂಶ ಮಾತ್ರ ಪೂರ್ತಿ ಪ್ರಮಾಣದಲ್ಲಿ ಲಭ್ಯವಾಗಲಿಲ್ಲಾ. ಪಂಚಾಯತ ಹಾಗೂ ವಿಜೇತ ಸದಸ್ಯರಯಾದಿ;-
ಬೇಡ್ಕಣಿ:- ಕೃಷ್ಣಮೂರ್ತಿ ಟಿ ಮಡಿವಾಳ, ಈರಪ್ಪ ನಾಯ್ಕ, ಗೋವಿಂದ ಜಿ ನಾಯ್ಕ, ಬಾಬಜಾನ್ ಮಹಮದ್ ಸಾಬ್, ಉಲ್ಲಾಸ್‍ಗೌಡ, ಶರಾವತಿ ಹನುಮಂತ ನಾಯ್ಕ, ಹೇಮಾವತಿ ಜಿ ನಾಯ್ಕ, ವಾಸಂತಿ ಪಿ ಹಸ್ಲರ್, ಸರಸ್ವತಿ ನಾರಾಯಣ ಹಸ್ಲರ್, ಪದ್ಮಪ್ರಿಯಾ ನಾಯ್ಕ, ರೇಣುಕಾ ಪ್ರಕಾಶ ನಾಯ್ಕ,
ಕೋಲ್‍ಸಿರ್ಸಿ:_ ಕೆ ಆರ್ ವಿನಾಯಕ, ಗೋವಿಂದ ಬಿ ನಾಯ್ಕ, ಆನಂದ ಮಡಿವಾಳ, ವಿನಯ್‍ಎಸ್‍ಗೌಡರ್, ತಿಲಕಕುಮಾರ ನಾಯ್ಕ, ಮಹಾಬಲೇಶ್ವರ ನಾಯ್ಕ, ಗಣಪತಿಜಟ್ಟುಗೊಂಡ, ದುರ್ಗಮ್ಮ ವಿ ಮೇದಾರ್, ಉಮಾ ಪಿ ನಾಯ್ಕ. ಸುಮಾಎನ್ ನಾಯ್ಕ ,ಯಮುನಾಎಸ್ ಮಡಿವಾಳ, ಶ್ವೇತಾ ನಾಯ್ಕ, ವೀಣಾ ಕೆ ಕಾನಡೆ,
ಬಿದ್ರಕಾನ:- ಮಧುಕೇಶ್ವರ ಭಟ್‍ಜಯಂತ ಹೆಗಡೆ, ಮಂಜುನಾಥಗೌಡ, ಮಮತಾ ಸಿ ಹರಿಜನ್, ಸರೋಜಾ ಡಿ ನಾಯ್ಕ, ಬಾಬು ನಾಯ್ಕ, ಶ್ಯಾಮಲಾಗೌಡ, ಬಂಗಾರಿ ಸಿ ಹರಿಜನ್, ಸಾವಿತ್ರಿಗೌಡಾ,
ತಂಡಾಗುಂಡಿ;- ಪದ್ಮಾವತಿ ಎಂ ಗೌಡಾ, ಬೀರಾ ಕೆ ಗೌಡಾ, ಶಂಕುಂತಲಾ ಹರಿಜನ್ , ತಾರಾ ಹರಿಜನ್, ಮಂಜುನಾಥ ಬಿ ಹೆಗಡೆ, ಹುಲಿಯಾಆರ್‍ಗೌಡಾ, ರವೀಶಗೌಡಾ,
ಹೆಗ್ಗರಣೆ;- ನವೀನ್‍ಎಣ ಹೆಗಡೆ, ಮಂಜುನಾಥ ಬಿ ಮಡಿವಾಳ ,ಸವಿತಾಗೌಡಾ, ನವೀನ್ ಹೆಗಡೆ, ಮಂಜುನಾಥ ಮಡಿವಾಳ, ಮಂಧುರಾ ಭಟ್, ರಾಘವೇಂದ್ರರಾಯ್ಕರ್, ಮಾರುತಿಚನ್ನಯ್ಯ, ಅಬ್ದುಲ್ ಸಾಬ್, ಸರೋಜಾರಾವ್,
ಕ್ಯಾದಗಿ;-ರಾಜಾರಾಮ ನಾಯ್ಕ, ರಾಮಕೃಷ್ಣ ಬಿ ನಾಯ್ಕ, ಶಾಂತಲಾ ನಾಯ್ಕ, ತ್ರೀವೆಣಿ ನಾಯ್ಕ, ರೇಣುಕಾಗೌಡಾ, ವೀಣಾ ಹಸ್ಲರ್, ಎಸ್‍ಎನ್ ಹೆಗಡೆ, ದತ್ತಾತ್ರೇಯ ಭಟ್, ಸರಸ್ವತಿ ಹಸ್ಲರ್,
ನಿಲ್ಕುಂದ;-ರಾಘವೇಂದ್ರಆರ್ ಹೆಗಡೆ, ರಾಜರಾಮ ಹೆಗಡೆ, ಮಂಗಲಾ ಮುಕ್ರಿ, ನೇತ್ರಾವತಿ ಮಡಿವಾಳ, ಪ್ರಭಾಕರ ಟಿ ಹೆಗಡೆ, ಸವಿತಾಚನ್ನಯ್ಯ,
ಅಣಲೇಬೈಲ್;-ರಾಜೀವ್ ಭಾಗ್ವತ್, ಪ್ರೇಮಾ ಹರಿಜನ್, ಮಂಗಲಾಹೆಗಡೆ, ಸುಜಾತಾ ನಾಯ್ಕ, ಯಶೋಧಾ ಮುಕ್ರಿ, ಮಹೇಶ ಗೌಡಾ, ಗೀತಾ ಹೆಗಡೆ, ಶ್ರೀಮತಿ ಭಟ್ಟ, ವೀಣಾಗೌಡಾ, ಚಣದ್ರಶೇಖರ್‍ಗೌಡಾ, ವೇದಾವತಿ ಶೇಟ್, ಯಂಕಾಗೌಡಾ, ದತ್ತಾತ್ರೇಯ ಹೆಗಡೆ,
ಇಟಗಿ;-ಮಹೇಶ ನಾಯ್ಕ, ಸಾವಿತ್ರಿ ತಳವಾರ, ಕನ್ನೆ ಮಂಜಾ ಹರಿಜನ್, ರಾಮಚಂದ್ರ ನಾಯ್ಕ, ಪಾರ್ವತಿ ಶಿವಕುಮಾರ, ಸುರೇಂದ್ರಜೆಗೌಡಾ, ವೆಂಕಟ್ರಮಣ ನಾರಾಯಣ ನಾಯ್ಕ, ಗೀರಿಜಾಎಲ್ ನಾಯ್ಕ,
ಸೋವಿನಕೊಪ್ಪಾ;-ರಾಧಾಗೌಡಾ, ಗೀರಿಶ ಶೇಟ್, ಕಲಾವತಿ ಹರಿಜನ್, ಮೋಹನ್‍ಗೌಡಾ, ಸುಮಾಗೌಡಾ, ಭವಾನಿ ಹಸ್ಲರ್, ರವಿ ಗೌರ್ಯಾ ನಾಯ್ಕ, ಗಣಪತಿಗೌಡಾ, ಸುರೇಖಾಎಸ್ ನಾಯ್ಕ,
ಇವರುಗಳು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ಉಳಿದ ಎರಡೂವರೆ ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಪೂರ್ಣಗೊಳಿಸುತ್ತೇನೆ. ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎಂದು ಬಿ.ಎಸ್ ಯಡಿಯೂರಪ್ಪ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸಚಿವರ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಒಂದೂವರೆ ವರ್ಷ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದು, ಉಳಿದ ಅವಧಿಯೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ನಾನು ಪೂರ್ಣಾವಧಿ ಮುಖ್ಯಮಂತ್ರಿ ಎಂಬುದನ್ನು ಈಗಾಗಲೇ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಒಂದಿಬ್ಬರು ಶಾಸಕರಷ್ಟೇ ಪತ್ರ ಬರೆದು, ಹೇಳಿಕೆ ನೀಡಿರಬಹುದು. ಶಾಸಕರ ವಿಭಾಗವಾರು ಸಭೆಯನ್ನು ಕರೆದಿದ್ದೇನೆ. ಅಲ್ಲಿ ಎಲ್ಲವನ್ನು ಚೆರ್ಚಿಸುತ್ತೇನೆ ಎಂದು ಅವರು ಹೇಳುವ ಮೂಲಕ ತಮ್ಮನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲವೆಂದರು.

ಕರ್ನಾಟಕದಲ್ಲಿ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಶೇ.60ಕ್ಕೂ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 5,728 ಗ್ರಾಮ ಪಂಚಾಯಿತಿಗಳ ಪೈಕಿ 3,800 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ. ಇದಕ್ಕೆ ಬಿಜೆಪಿಯ ಸಾಮೂಹಿಕ ನಾಯಕತ್ವ ಕಾರಣ. ನಮ್ಮ ಕಾರ್ಯಕರ್ತರ ಶ್ರಮದ ಪ್ರತಿಫಲವಾಗಿದೆ. 3000 ಸಾವಿರಕ್ಕೂ ಹೆಚ್ಚು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಅತ್ಯಂತ ಸಂತಸದ ವಿಷಯವಾಗಿದೆ ಎಂದರು.

ಅಭಿವೃದ್ಧಿ ಭೂಪಟದಲ್ಲಿ ಕರ್ನಾಟಕವನ್ನು ಒಂದನೇ ಸ್ಥಾನಕ್ಕೆ ಕೈಗೊಂಡು ಹೋಗುವ ಬಗ್ಗೆ ಸಚಿವ ಸಂಪುಟದ ಸಹೋದ್ಯೋಗಿಗಳ ಜತೆ ಚರ್ಚೆ ಮಾಡುತ್ತಿದ್ದೇವೆ. ಇದರ ಮಧ್ಯೆ ಬರಗಾಲ, ಅತಿ ವೃಷ್ಠಿ, ಕೋವಿಡ್ ನಂತಹ ಸಂದಿಗ್ದ ಪರಿಸ್ಥಿತಿಯನ್ನು ಎದುರಿಸಿದ್ದೇವೆ. ಆರ್ಥಿಕ ಸಂಕಷ್ಟದ ನಡುವೆಯೂ ಬಜೆಟ್ ನಲ್ಲಿ ತಿಳಿಸಿದಂತಹ ಗುರಿಯನ್ನು ತಲುಪುವ ಕೆಲಸ ಮಾಡುತ್ತೇವೆ. ರಾಜ್ಯವನ್ನು ಅಭಿವೃದ್ಧಿಯ ಭೂಪಟದಲ್ಲಿ 1ನೇ ಸ್ಥಾನದಲ್ಲಿರುವುದನ್ನು ನೋಡಬೇಕು. ಈ ಪ್ರಯತ್ನ ಮಾಡುವ ನಿಟ್ಟಿನಲ್ಲಿ ನಮ್ಮ ಸಂಪುಟದ ಸಹೋದ್ಯೋಗಿಗಳ ಜೊತೆಗೆಗೂಡಿ ಕೆಲಸ ಮಾಡುತ್ತೇನೆ. ಕೊರೋನಾದಂತಹ ಸಂಕಷ್ಟದ ಕಾಲದಲ್ಲೂ ರಾಜ್ಯದ ಅಭಿವೃದ್ದಿ ಪ್ರಗತಿ ಚಕ್ರ ಮುನ್ನಡೆಯುವಂತೆ ನೋಡಿಕೊಳ್ಳುತ್ತಿದ್ದೇವೆ. ಪ್ರಧಾನಿ ಮಾರ್ಗದರ್ಶನದಲ್ಲಿ ಇಡೀ ದೇಶದಲ್ಲಿ ಕೋವಿಡ್ ರೋಗವನ್ನ ಯಶಸ್ವಿಯಾಗಿ ನಿಯಂತ್ರಿಸಲಾಗಿದೆ. ನಮ್ಮ ಸರ್ಕಾರ ಕರ್ನಾಟದಲ್ಲೂ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿದೆ. ರೈತರು, ಕಾರ್ಮಿಕರು, ಆಟೋಚಾಲಕರು ಇತ್ಯಾದಿ ದುಡಿಯುವ ವರ್ಗದವರಿಗೆ ಪರಿಹಾರ ನೀಡಿ ಅವರ ಹಿತಾಸಕ್ತಿಯನ್ನ ಕಾಪಾಡಿದೆ. ಕೋವಿಡ್ ಸಂಕಷ್ಟದಲ್ಲೂ ವ್ಯಾಪಾರ ವ್ಯವಹಾರಕ್ಕೆ ಅನುವು ಮಾಡಿ ಕೊಟ್ಟಿದೆ. ವಿದೇಶೀ ನೇರ ಬಂಡವಾಳ ಹರಿದುಬರುತ್ತಿರುವುದು ಇದಕ್ಕೆ ಪೂರಕವಾಗಿದೆ.1.54 ಕೋಟಿ ಮೊತ್ತದ 90 ಹೂಡಿಕೆ ಪ್ರಸ್ತಾಪಗಳು ಬಂದಿವೆ ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ವಿರೋಧ ಪಕ್ಷಗಳು ನರೇಂದ್ರ ಮೋದಿ ಅವರನ್ನ ಟೀಕೆ ಮಾಡಬಹುದು. ಆದರೆ, ಮೋದಿ ರೂಪಿಸಿರುವ ದೂರದೃಷ್ಟಿ ಕಾರ್ಯಕ್ರಮಗಳನ್ನ ಟೀಕಿಸಲು ಸಾಧ್ಯವಿಲ್ಲ. ಕಿಸಾನ್ ಯೋಜನೆ, ಜಗಜೀವನ್ ಮಿಷನ್ ಯೋಜನೆ, ಮಾಸಿಕ ಪಿಂಚಣಿ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ ಮೊದಲಾದ ಯೋಜನೆಗಳು ನಮ್ಮ ಮುಂದಿದೆ. ಪ್ರಧಾನಿ ಮೋದಿ ಅವರ ದೂರದೃಷ್ಟಿಯ ಈ ಕಾರ್ಯಕ್ರಮಗಳನ್ನು ರೈತರು ಅರ್ಥ ಮಾಡಿಕೊಂಡು ತಮ್ಮ ಪ್ರತಿಭಟನೆಗಳನ್ನ ಕೈಬಿಡಬೇಕು ಎಂದು ಮನವಿ ಮಾಡಿದರು.

ದೇಶಾದ್ಯಂತ ನಡೆದ ಎಲ್ಲಾ ಸಾರ್ವತ್ರಿಕ ಚುನಾವಣೆ, ಉಪಚುನಾವಣೆ, ಸ್ಥಳೀಯ ಸಂಸ್ಥೆ ಚನಾವಣೆಗಳಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿರುವುದಕ್ಕೆ ಪ್ರಧಾನಿ ಮೋದಿ ಅವರ ಸ್ಫೂರ್ತಿದಾಯಕ ನಾಯಕತ್ವ ಕಾರಣ. ಕರ್ನಾಟಕದಲ್ಲೂ ಡಿಸೆಂಬರ್​ನಲ್ಲಿ ನಡೆದ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ 12ರಲ್ಲಿ ಗೆದ್ದಿತ್ತು. ಆರ್ ಆರ್ ನಗರ, ಶಿರಾ ಉಪಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದಿದೆ. ಈ ಹಿಂದೆ ಪಕ್ಷ ಜಯಗಳಿಸದ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿ ಸಾಮರ್ಥ್ಯ ನಿರೂಪಿಸಿದ್ದೇವೆ ಎಂದು ಅವರು ಹೇಳಿಕೊಂಡರು.

ರೈತರಿಗೆ ಅನುಕೂಲಕರವಾದಂತೆ ಕಾಯ್ದೆಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ಆದರೆ ಇದನ್ನು ತಪ್ಪಾಗಿ ಅರ್ಥೈಸುವ ಮೂಲಕ ರೈತರನ್ನು ದಾರಿ ತಪ್ಪಿಸುವಂತ ಕೆಲಸವನ್ನು ಕೆಲವು ಪಕ್ಷಗಳು ಮಾಡುತ್ತಿವೆ. 2025 ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸಬೇಕು ಎನ್ನುವ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ರೂಪಿಸಿದೆ. ರೈತರ ಅಭಿವೃದ್ಧಿಗಾಗಿ ಕೃಷಿ ಮಾರುಕಟ್ಟೆ ಸುಧಾರಣೆಗಾಗಿ ಕಾಯ್ದೆಗೆ ತಿದ್ದುಪಡಿ ತಂದಿದ್ದಾರೆ. ಆ ಮೂಲಕ ರೈತರು ಎಲ್ಲಿ ಬೇಕಾದರು ತಾವು ಬೆಳೆದಂತಹ ಬೆಳೆಯನ್ನು ಮಾರಾಟ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಹೇಳುವ ಮೂಲಕ ಎಪಿಎಂಸಿ ಕಾಯ್ದೆಯನ್ನು ಅವರು ಸಮರ್ಥಿಸಿಕೊಂಡರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *