5956 ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟ

ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಮಾರ್ಗ ಸೂಚಿಯನ್ನು ರಾಜ್ಯ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ಶನಿವಾರ ಅಧಿಸೂಚನೆ ಹೊರಡಿಸಿದೆ.

vidhan-soudha

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಮಾರ್ಗ ಸೂಚಿಯನ್ನು ರಾಜ್ಯ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ಶನಿವಾರ ಅಧಿಸೂಚನೆ ಹೊರಡಿಸಿದೆ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತಲಾ 30 ತಿಂಗಳ ಅಧಿಕಾರವಧಿ ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಕಳೆದ ಡಿಸೆಂಬರ್ 22 ಮತ್ತು 27ರಂದು ಎರಡು ಹಂತದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಡಿ.30 ರಂದು ಫಲಿತಾಂಶ ಪ್ರಕಟವಾಗಿದೆ.

ಇಂದು 5956 ಗ್ರಾಮ ಪಂಚಾಯಿತಿಗಳಿಗೆ ಮೀಸಲಾತಿ ಪ್ರಕಟಿಸುವ ಮೂಲಕ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯನ್ನು ಸುಗಮಗೊಳಿಸಿದೆ. ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿ ನೀಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಜನಸಂಖ್ಯೆಯ ಅನುಪಾತಕ್ಕೆ ತಕ್ಕಂತೆ ಸಮಾನವಾಗಿ ಹಂಚಿಕೆ ಮಾಡಬೇಕು. ಹಿಂದುಳಿದ ವರ್ಗಕ್ಕೆ ಸರಿ ಸುಮಾರು1/3 ಸಂಖ್ಯೆಯಷ್ಟು ಹುದ್ದೆಗಳನ್ನು ಮೀಸಲಿರಿಸತಕ್ಕದ್ದು, ಎಸ್ಸಿ,ಎಸ್ಟಿ ಹಾಗೂ ಓಬಿಸಿ ವರ್ಗಗಳಿಗೆ ಒಟ್ಟು ಹುದ್ದೆಗಳ ಸಂಖ್ಯೆಯು ಪಂಚಾಯಿತಿಗಳ ಒಟ್ಟು ಹುದ್ದೆಗಳ ಶೇ. 50ರಷ್ಟನ್ನು ಮೀರತಕ್ಕದ್ದಲ್ಲ ಎಂದು ನಿಬಂಧನೆ ಹಾಕಲಾಗಿದೆ.

ಗ್ರಾಮ ಪಂಚಾಯಿತಿಗಳಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ವೇಳೆ ಹುದ್ದೆಗಳ ಸಂಖ್ಯೆ ಕಡಿಮೆ ಇದ್ದು, ಸದಸ್ಯರ ಸಂಖ್ಯೆ ಸಮವಾಗಿದ್ದರೆ ಅಂತಹ ಪಂಚಾಯಿತಿಗಳ ಸದಸ್ಯರ ಸಮ್ಮುಖದಲ್ಲಿ ಲಾಟರಿ ಎತ್ತುವ ಮೂಲಕ ಅಧ್ಯಕ್ಷರು, ಉಪಾಧ್ಯಕ್ಷರನ್ನು ಆಯ್ಕೆ ಮಾಡಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳನ್ನು ಆಯ್ಕೆ ಮಾಡುವಾಗ ಗ್ರಾಮ ಪಂಚಾಯಿತಿಗಳಿಗೆ ಅನುಸೂಚಿತ ಜಾತಿ, ಅನುಸೂಚಿತ ಪಂಗಡ, ಹಿಂದುಳಿದ ವರ್ಗ(ಅ), ಹಿಂದುಳಿದ ವರ್ಗ(ಬ), ಸಾಮಾನ್ಯ(ಮಹಿಳೆ) ಸಾಮಾನ್ಯ ಕ್ರಮದಲ್ಲಿ ನಿಗದಿಪಡಿಸತಕ್ಕದ್ದು, ಒಂದೇ ಗ್ರಾಮ ಪಂಚಾಯಿತಿಯಲ್ಲಿ ಏಕ ಕಾಲದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳನ್ನು ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳಿಗೆ ನಿಗದಿಪಡಿಸುವಂತಿಲ್ಲ. ಅಂತೆಯೇ ಹಿಂದುಳಿದ ವರ್ಗ(ಅ)ಮತ್ತು ಹಿಂದುಳಿದ ವರ್ಗ(ಅ) ಹಿಂದುಳಿದ ವರ್ಗ(ಬ) ಮತ್ತು ಹಿಂದುಳಿದ ವರ್ಗ(ಬ)ಗಳಿಗೆ ಏಕಕಾಲದಲ್ಲಿ ನೀಡಲು ಸಾಧ್ಯವಿಲ್ಲ.

ತಾಲೂಕುವಾರು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳನ್ನು ನಿಗದಿಪಡಿಸುವಾಗ ಮೊದಲು ಎಲ್ಲಾ ಅಧ್ಯಕ್ಷರ ಸ್ಥಾನಗಳ ಮೀಸಲಾತಿಯನ್ನು ನಿಗದಿಪಡಿಸಿ ಬಳಿಕ ಉಪಾಧ್ಯಕ್ಷರ ಮೀಸಲಾತಿಯನ್ನು ನಿಗದಿಪಡಿಸಿದರೆ ಸ್ಥಾನ ಹಂಚಿಕೆ, ಮೀಸಲಾತಿಯಲ್ಲಿ ಯಾರಿಗೂ ಅನ್ಯಾಯವಾಗುವುದನ್ನು ತಡೆಯಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. (kpc)

ಕಾಡುಪ್ರಾಣಿ ಹಾವಳಿ-

ಸಿದ್ದಾಪುರ
ತಾಲೂಕಿನ ಹಾರ್ಸಿಕಟ್ಟಾ ಗ್ರಾಪಂ ವ್ಯಾಪ್ತಿಯ ಹಾರ್ಸಿಮನೆಯ ಸುಬ್ರಾಯ ಗಣಪತಿ ಹೆಗಡೆ ಹಾಗೂ ರವೀಂದ್ರ ಸುಬ್ರಾಯ ಹೆಗಡೆ ಅವರ ಅಡಕೆ ತೋಟಕ್ಕೆ ಕಾಡೆಮ್ಮೆ ಹಾಗೂ ಕಾಡು ಹಂದಿಗಳ ಹಿಂಡು ಅಡಕೆ ತೋಟಕ್ಕೆ ದಾಳಿ ನಡೆಸಿ ಅಡಕೆ ಹಾಗೂ ಬಾಳೆ ಗಿಡಗಳನ್ನು ನಾಶಪಡಿಸಿದೆ.
35ಕ್ಕೂ ಹೆಚ್ಚು ಅಡಕೆ ಸಸಿ ಹಾಗೂ ಬಾಳೆಗಿಡಗಳನ್ನು ನಾಶಪಡಿಸಿದ್ದು ಅರಣ್ಯ ಇಲಾಖೆ ಈ ಕುರಿತು ಸೂಕ್ತ ಪರಿಹಾರ ನೀಡುವುದರೊಂದಿಗೆ ಕಾಡುಪ್ರಾಣಿಗಳ ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳಬೇಕು ಹಾಗೂ ಶಾಶ್ವ ತ ಪರಿಹಾರ ನೀಡಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.ಸ್ಥಳಕ್ಕೆ ನಿಡಗೋಡ ಉಪವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪಂಚನಾಮೆ ನಡೆಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *