5956 ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟ

ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಮಾರ್ಗ ಸೂಚಿಯನ್ನು ರಾಜ್ಯ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ಶನಿವಾರ ಅಧಿಸೂಚನೆ ಹೊರಡಿಸಿದೆ.

vidhan-soudha

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಮಾರ್ಗ ಸೂಚಿಯನ್ನು ರಾಜ್ಯ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ಶನಿವಾರ ಅಧಿಸೂಚನೆ ಹೊರಡಿಸಿದೆ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತಲಾ 30 ತಿಂಗಳ ಅಧಿಕಾರವಧಿ ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಕಳೆದ ಡಿಸೆಂಬರ್ 22 ಮತ್ತು 27ರಂದು ಎರಡು ಹಂತದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಡಿ.30 ರಂದು ಫಲಿತಾಂಶ ಪ್ರಕಟವಾಗಿದೆ.

ಇಂದು 5956 ಗ್ರಾಮ ಪಂಚಾಯಿತಿಗಳಿಗೆ ಮೀಸಲಾತಿ ಪ್ರಕಟಿಸುವ ಮೂಲಕ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯನ್ನು ಸುಗಮಗೊಳಿಸಿದೆ. ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿ ನೀಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಜನಸಂಖ್ಯೆಯ ಅನುಪಾತಕ್ಕೆ ತಕ್ಕಂತೆ ಸಮಾನವಾಗಿ ಹಂಚಿಕೆ ಮಾಡಬೇಕು. ಹಿಂದುಳಿದ ವರ್ಗಕ್ಕೆ ಸರಿ ಸುಮಾರು1/3 ಸಂಖ್ಯೆಯಷ್ಟು ಹುದ್ದೆಗಳನ್ನು ಮೀಸಲಿರಿಸತಕ್ಕದ್ದು, ಎಸ್ಸಿ,ಎಸ್ಟಿ ಹಾಗೂ ಓಬಿಸಿ ವರ್ಗಗಳಿಗೆ ಒಟ್ಟು ಹುದ್ದೆಗಳ ಸಂಖ್ಯೆಯು ಪಂಚಾಯಿತಿಗಳ ಒಟ್ಟು ಹುದ್ದೆಗಳ ಶೇ. 50ರಷ್ಟನ್ನು ಮೀರತಕ್ಕದ್ದಲ್ಲ ಎಂದು ನಿಬಂಧನೆ ಹಾಕಲಾಗಿದೆ.

ಗ್ರಾಮ ಪಂಚಾಯಿತಿಗಳಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ವೇಳೆ ಹುದ್ದೆಗಳ ಸಂಖ್ಯೆ ಕಡಿಮೆ ಇದ್ದು, ಸದಸ್ಯರ ಸಂಖ್ಯೆ ಸಮವಾಗಿದ್ದರೆ ಅಂತಹ ಪಂಚಾಯಿತಿಗಳ ಸದಸ್ಯರ ಸಮ್ಮುಖದಲ್ಲಿ ಲಾಟರಿ ಎತ್ತುವ ಮೂಲಕ ಅಧ್ಯಕ್ಷರು, ಉಪಾಧ್ಯಕ್ಷರನ್ನು ಆಯ್ಕೆ ಮಾಡಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳನ್ನು ಆಯ್ಕೆ ಮಾಡುವಾಗ ಗ್ರಾಮ ಪಂಚಾಯಿತಿಗಳಿಗೆ ಅನುಸೂಚಿತ ಜಾತಿ, ಅನುಸೂಚಿತ ಪಂಗಡ, ಹಿಂದುಳಿದ ವರ್ಗ(ಅ), ಹಿಂದುಳಿದ ವರ್ಗ(ಬ), ಸಾಮಾನ್ಯ(ಮಹಿಳೆ) ಸಾಮಾನ್ಯ ಕ್ರಮದಲ್ಲಿ ನಿಗದಿಪಡಿಸತಕ್ಕದ್ದು, ಒಂದೇ ಗ್ರಾಮ ಪಂಚಾಯಿತಿಯಲ್ಲಿ ಏಕ ಕಾಲದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳನ್ನು ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳಿಗೆ ನಿಗದಿಪಡಿಸುವಂತಿಲ್ಲ. ಅಂತೆಯೇ ಹಿಂದುಳಿದ ವರ್ಗ(ಅ)ಮತ್ತು ಹಿಂದುಳಿದ ವರ್ಗ(ಅ) ಹಿಂದುಳಿದ ವರ್ಗ(ಬ) ಮತ್ತು ಹಿಂದುಳಿದ ವರ್ಗ(ಬ)ಗಳಿಗೆ ಏಕಕಾಲದಲ್ಲಿ ನೀಡಲು ಸಾಧ್ಯವಿಲ್ಲ.

ತಾಲೂಕುವಾರು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳನ್ನು ನಿಗದಿಪಡಿಸುವಾಗ ಮೊದಲು ಎಲ್ಲಾ ಅಧ್ಯಕ್ಷರ ಸ್ಥಾನಗಳ ಮೀಸಲಾತಿಯನ್ನು ನಿಗದಿಪಡಿಸಿ ಬಳಿಕ ಉಪಾಧ್ಯಕ್ಷರ ಮೀಸಲಾತಿಯನ್ನು ನಿಗದಿಪಡಿಸಿದರೆ ಸ್ಥಾನ ಹಂಚಿಕೆ, ಮೀಸಲಾತಿಯಲ್ಲಿ ಯಾರಿಗೂ ಅನ್ಯಾಯವಾಗುವುದನ್ನು ತಡೆಯಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. (kpc)

ಕಾಡುಪ್ರಾಣಿ ಹಾವಳಿ-

ಸಿದ್ದಾಪುರ
ತಾಲೂಕಿನ ಹಾರ್ಸಿಕಟ್ಟಾ ಗ್ರಾಪಂ ವ್ಯಾಪ್ತಿಯ ಹಾರ್ಸಿಮನೆಯ ಸುಬ್ರಾಯ ಗಣಪತಿ ಹೆಗಡೆ ಹಾಗೂ ರವೀಂದ್ರ ಸುಬ್ರಾಯ ಹೆಗಡೆ ಅವರ ಅಡಕೆ ತೋಟಕ್ಕೆ ಕಾಡೆಮ್ಮೆ ಹಾಗೂ ಕಾಡು ಹಂದಿಗಳ ಹಿಂಡು ಅಡಕೆ ತೋಟಕ್ಕೆ ದಾಳಿ ನಡೆಸಿ ಅಡಕೆ ಹಾಗೂ ಬಾಳೆ ಗಿಡಗಳನ್ನು ನಾಶಪಡಿಸಿದೆ.
35ಕ್ಕೂ ಹೆಚ್ಚು ಅಡಕೆ ಸಸಿ ಹಾಗೂ ಬಾಳೆಗಿಡಗಳನ್ನು ನಾಶಪಡಿಸಿದ್ದು ಅರಣ್ಯ ಇಲಾಖೆ ಈ ಕುರಿತು ಸೂಕ್ತ ಪರಿಹಾರ ನೀಡುವುದರೊಂದಿಗೆ ಕಾಡುಪ್ರಾಣಿಗಳ ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳಬೇಕು ಹಾಗೂ ಶಾಶ್ವ ತ ಪರಿಹಾರ ನೀಡಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.ಸ್ಥಳಕ್ಕೆ ನಿಡಗೋಡ ಉಪವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪಂಚನಾಮೆ ನಡೆಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *