ಬಿ.ಜೆ.ಪಿ.ಗೆ ವಸಂತ ನಾಯ್ಕ ಸವಾಲು! ಅವರು ಗೆದ್ದ ಪಂಚಾಯತ್ ಗಳ ಲೆಕ್ಕ ಹೇಳಲಿ

ಕಳೆದ ಅವಧಿಗಿಂತ ಈ ಅವಧಿಯಲ್ಲಿ ಕಾಂಗ್ರೆಸ್ ಚೇತರಿಸಿಕೊಂಡಿದೆ ಎಂದಿರುವ ಸಿದ್ಧಾಪುರ ತಾಲೂಕಾ ಬ್ಲಾಕ್ ಅಧ್ಯಕ್ಷ ವಸಂತ ನಾಯ್ಕ ಮಳಲವಳ್ಳಿ ಅನಾರೋಗ್ಯದ ಕಾರಣದಿಂದ ನಮಗೆ ಹೆಚ್ಚಿನ ಕೆಲಸ ಮಾಡಲಾಗಲಿಲ್ಲ ಆದರೂ ತಾಲೂಕಿನಲ್ಲಿ 15 ಗ್ರಾಮ ಪಂಚಾಯತ್ ಗಳಲ್ಲಿ ಕಾಂಗ್ರೆಸ್ ಬೆಂಬಲಿಗರೇ ಹೆಚ್ಚಿನ ಪ್ರಮಾಣದಲ್ಲಿ ಗೆದ್ದಿದ್ದು ಅವರೇ ಹೆಚ್ಚಿನ ಪಂಚಾಯತ್ ಗಳಲ್ಲಿ ಅಧಿಕಾರ ಹಿಡಿಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೋವಿಡ್ ಗೆದ್ದ ನಂತರ ಮೊದಲಬಾರಿ ಕಾಂಗ್ರೆಸ್ ಕಛೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದಿನ ಅವಧಿಯಲ್ಲಿ ತಾಲೂಕಿನಲ್ಲಿ 80 ಸ್ಥಾನಗಳನ್ನು ಗೆದ್ದು 8 ಕಡೆ ಅಧಿಕಾರ ಹಿಡಿದಿದ್ದೆವು. ಈಗ 110 ಜನ ಕಾಂಗ್ರೆಸ್ ಬೆಂಬಲಿತರು ಜಯಸಿದ್ದೇವೆ. ಜೆ.ಡಿ.ಎಸ್.3 ಬಿ.ಜೆ.ಪಿ ಕೆಲವು ಸ್ಥಾನಗಳು, ಪಂಚಾಯತ್ ಗಳನ್ನು ಗೆದ್ದಿದೆ. ಬಿ.ಜೆ.ಪಿ. ಬೆಂಬಲಿಗರು ಗೆದ್ದಿರುವ ಪಂಚಾಯತ್ ಗಳ ಲೆಕ್ಕ ಕೊಟ್ಟರೆ ಅವರ ಸಾಧನೆ ಒಪ್ಪಬಹುದು ಆದರೆ ಆಮಿಷಗಳ ಮೂಲಕ ಇತರರನ್ನು ಸೇರಿಸಿ ಅಧಿಕಾರ ಮಾಡುವ ಆಸೆಯಿಂದ ಸುಳ್ಳುಲೆಕ್ಕ ಕೊಟ್ಟರೆ ಹೇಗೆ ಒಪ್ಪುವುದು ಎಂದು ಪ್ರಶ್ನಿಸಿದರು.

ದೊಡ್ಮನೆ,ಕಾನಸೂರುಗಳಲ್ಲಿ ಬಿ.ಜೆ.ಪಿ. ಕಾಂಗ್ರೆಸ್ ಬಲಾಬಲ ಸಮನಾಗಿದೆ. ಇನ್ನುಳಿದ 13 ಪಂಚಾಯತ್ ಗಳಲ್ಲಿ ಕಾಂಗ್ರೆಸ್ ಅಧಿಕಾರ ಮಾಡಲಿದೆ. ಕನಿಷ್ಟ 16 ಪಂಚಾಯತ್ ಗಳಲ್ಲಿ ಬಹುಮತದಿಂದ ಅಧಿಕಾರ ಮಾಡುವ ಗುರಿ ಇತ್ತು ಮುಂದಿನ ತಾಲೂಕು-ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವವರು, ಪಕ್ಷದ ಅನುಕೂಲ ಪಡೆದು ಅನ್ಯ ಪಕ್ಷ ಬೆಂಬಲಿಸುವವರನ್ನು ನಿರ್ದಾಕ್ಷಿಣ್ಯವಾಗಿ ಪಕ್ಷದಿಂದ ಹೊರಹಾಕುತ್ತೇವೆ. ಕೋಲಶಿರ್ಸಿ ಸೇರಿದಂತೆ ಕೆಲವೆಡೆ ಕಾಂಗ್ರೆಸ್ ಬೆಂಬಲಿತರೇ ದೊಡ್ಡ ಸಂಖ್ಯೆಯಲ್ಲಿ ಆಯ್ಕೆಯಾಗಿ ಅಧಿಕಾರ ಹಿಡಿಯುತ್ತಾರೆ. ಎರಡ್ಮೂರು ವಾರ್ಡಗಳಲ್ಲಿ ಗೆದ್ದು ಪಕ್ಷಕ್ಕೆ ಸವಾಲು ಹಾಕುವವರಿಗೂ ತಕ್ಕ ಉತ್ತರ ನೀಡುತ್ತೇವೆ ಎಂದರು.

ನಮ್ಮ ಕ್ಷೇತ್ರದ ಶಾಸಕರು,ಸಂಸದರು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ, ಇಲಾಖೆಗಳ ಅಧಿಕಾರಿಗಳನ್ನು ನಿಯಂತ್ರಿಸದ ಆಡಳಿತದಿಂದ ಜನರಿಗೆ ತೊಂದರೆಯಾಗಿದೆ. ರಾಷ್ಟ್ರ,ರಾಜ್ಯದ ಬಿ.ಜೆ.ಪಿ. ಆಡಳಿತ ಜನರಿಗೆ ಬೇಸರ ತರಿಸಿದೆ. ರೈತರು, ಜನಸಾಮಾನ್ಯರು, ಬಡವರ ವಿರೋಧಿ ಬಿ.ಜೆ.ಪಿ. ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ.ಶಾಸಕರಿಲ್ಲದೆ ಪಕ್ಷ ಸಂಘಟನೆ ನಡೆಯುತ್ತಿದೆ. ಮುಂದಿನ ಚುನಾವಣೆಗಳಲ್ಲಿ ಶಾಸಕರು, ಸಂಸದರನ್ನು ಆಯ್ಕೆಮಾಡುವ ಮೂಲಕ ಜನರ ನಿರೀಕ್ಷೆ ಪೂರೈಸುತ್ತೇವೆ.

-ವಸಂತ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *