ಸೆಲ್ಯೂಟ್… ನೆಲವನ್ನ ಪ್ರತಿನಿಧಿಸಿದಕ್ಕೆ ಮತ್ತು ಬದ್ಧತೆಯ ನಡೆಗೆ

ರಾಘು… ಚಾರ್ವಾಕ ರಾಘು ಸಾಗರ. ವಕೀಲರು, ಪತ್ರಕರ್ತರು, ಹೋರಾಟಗಾರರು, ಜಗಳಗಳ ನಡುವೆ ಪ್ರೀತಿ ಉಳಿಸಿಕೊಳ್ಳುವ ನನ್ನ ಗೆಳೆಯ.2005 ನಾನು ಎಂ ಎ ಮುಗಿಸಿ ದ್ವೀಪಕ್ಕೆ ಅಗಮಿಸಿದ್ದೆ. ಮೆದುಳು ತುಂಬಾ ಸಮಾಜ ಬದಲಾಗಬೇಕು ಎಂಬ ಯೋಚನೆ. ಎದೆ ಒಳಗೆ ವಿಚಿತ್ರ ತುಡಿತ. ಸಮಾಜದ ವಕ್ರಗಳು ನೋಟಕ್ಕೆ ದಕ್ಕುವಂತೆ ವಿಧ್ಯೆ ಅರಿವಾಗಿತ್ತು. ಆದರೆ ಥಿಯರಿ ಮತ್ತು ಪ್ರಾಕ್ಟಿಕಲ್ ನಡುವೆ ಅಂತರ ಇದ್ದೇ ಇರುತ್ತದೆ. ಸರ್ಕಾರಿ ನೌಕರಿ ಹೋಗಲ್ಲ ಎಂದು ನಿರ್ಧಾರಕ್ಕೆ ಬಂದು ದ್ವೀಪಕ್ಕೆ ಬಂದರೆ ಊರು ತುಂಬಾ ಸಾರಾಯಿ ಅಂಗಡಿ. ಬಡವನ ದುಡಿತ ಸಂಜೆ ಸಾರಾಯಿಗೆ ಮುಗಿದು ದುಡಿಯುವ ಕುಟುಂಬ ಬೀದಿಗೆ ಬಿದ್ದಿದ್ದವು. ಪರಿಣಾಮ ಮಕ್ಕಳು ಶಾಲೆ ಬಿಟ್ಟಿದ್ದವು, ಸಾಲದ ಜತೆ ಕೈ ಕೊಡುವ ಆರೋಗ್ಯ, ಸಾಮಾಜಿಕ ಅಶಾಂತಿ. ಅದೇ ಹೊತ್ತಿಗೆ ಸ್ತ್ರೀ ಶಕ್ತಿ ಸಂಘಗಳು ರಚನೆ ಆಗಿ ಅವು ಸಾರಾಯಿ ಅಂಗಡಿ ವಿರುದ್ದ ಕುದಿಯಲು ಆರಂಭಿಸಿದ್ದವು. ಅಸಹನೆ ಸ್ಪೋಟಗೊಳ್ಳಲು ಕಾಯುತ್ತಾ ಇದ್ದವು.ಅದೇ ಹೊತ್ತಿಗೆ ರಾಘು ಪರಿಚಯವಾಯ್ತು…..ಮೋಹನ್ ಚಂದ್ರಗುತ್ತಿ ಪರಿಚಯಿಸಿದರು.ನಂತರ ಹುಟ್ಟಿಕೊಂಡಿದ್ದು ” ನಮ್ಮೂರಿಗೆ ಸಾರಾಯಿ ಬೇಡ ಚಳುವಳಿ”. ಒಂದು ವರ್ಷ ನಡೆದ ಚಳುವಳಿಯನ್ನ ಹಿನ್ನೆಲೆಯಲ್ಲಿ ನಿಂತು ಮುನ್ನೆಡೆಸಿದವ ರಾಘು. ಲಾಯರ್ ರಾಘು. ದ್ವೀಪ ನೆಲದಲ್ಲಿ ಇಂದಿಗೂ ಐತಿಹಾಸಿಕವಾಗೇ ಉಳಿದಿರುವ ಆ ಚಳುವಳಿ ದುಡಿಯುವ ಜನರ ವ್ಯವಸ್ಥೆ ವಿರುದ್ದ ಆಕ್ರೋಶಕ್ಕೆ ಕಾರಣ ಆಯಿತು. ಹಲವು ಮಜಲು ದಾಟಿ ಸಾರಾಯಿ ಗುತ್ತಿಗೆದಾರರು ಮಹಿಳೆಯರ ಮೇಲೆ ಹಲ್ಲೆ ಮಾಡಿದ ನಂತರ ಸಾಗರ, ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಯಿತು.

ಹಲವು ಹೋರಾಟಗಾರರ ಜತೆ ಆದರು. ಮಾಧ್ಯಮದವರು ನೈತಿಕ ಬೆಂಬಲ ನೀಡಿದರು. ಈ ಹೋರಾಟ ಸಾರಾಯಿ ಅಂಗಡಿ ಮುಚ್ಚುವುದಕ್ಕೆ ಸರ್ಕಾರ ಆದೇಶ ನೀಡಿದ ನಂತರ ಯಶಸ್ವಿ ಹೋರಾಟ ವರ್ಷದ ನಂತರ ಮುಕ್ತಾಯ ಆಯ್ತು. ಆದರೆ 60 ಜನ ಹೋರಾಟಗಾರರ ಮೇಲೆ ಒಟ್ಟು 12 ವಿವಿಧ ಕೇಸುಗಳನ್ನು ಧಾಖಲಾಗಿತ್ತು. 3 ವರ್ಷ ಕಾಲ ನ್ಯಾಯಾಲಯದಲ್ಲಿ ಕೇಸು ನಡೆಯಿತು. ಅಷ್ಟು ಕೇಸುಗಳನ್ನ ಒಂದು ರೂಪಾಯಿ ಶುಲ್ಕ ಕೂಡ ಪಡೆಯದೇ ನಡೆಸಿದವನು ಲಾಯರ್ ರಾಘು. ಇವತ್ತಿಗೂ ಕರೂರು ನೆಲದಲ್ಲಿ ರಾಘು ದುಡಿಯುವ ಮಹಿಳೆಯರ ನೆನಪಿನಲ್ಲಿ ಹಾಗೇ ಇದ್ದಾನೆ. ದ್ವೀಪ ಎಂದರೆ ರಾಘು ಗೂ ಪ್ರೀತಿ. ಆದರೆ ಆ ಹೋರಾಟ ನನಗೆ ಪಾಠ ಹೇಳಿಕೊಟ್ಟಿತು. ಸಮಾಜ ನೋಡುವ ಕ್ರಮ, ಓದು, ಗ್ರಹಿಕೆ, ವಿಷಯ ಜ್ಞಾನ, ಸೀಳುನೋಟದ ಕ್ರಮ ಇಂತ ಹಲವು ವಿಚಾರದಲ್ಲಿ ರಾಘುವಿನಿಂದ ನಾನು ತುಂಬಾ ಕಲಿತಿದ್ದೇನೆ.ದೆಹಲಿಯಲ್ಲಿ ನಡೆಯುತ್ತಾ ಇರುವ ರೈತಹೋರಾಟ ಬೆಂಬಲಿಸಿ ಕರ್ನಾಟಕದ ಚಳುವಳಿಗಾರರ ತಂಡ ಮೊನ್ನೆ ದೆಹಲಿಗೆ ಭೇಟಿ ನೀಡಿತು. ಹೋರಾಟದ ನೆಲ ಶಿವಮೊಗ್ಗ-ಸಾಗರದಿಂದ ಸುದ್ದಿ ಸಾಗರ ಸಂಪಾದಕರೂ ಚಾರ್ವಾಕ ರಾಘು ಈ ತಂಡದ ಜತೆ ದೆಹಲಿ ಹೋಗಿ ಪ್ರತ್ಯಕ್ಷ ವರದಿ ನೀಡುವ ಜತೆ ರೈತರಿಗೆ ನೈತಿಕ ಬೆಂಬಲ ನೀಡುವ ಮಹತ್ವದ ಜವಾಬ್ದಾರಿಯನ್ನು ಪೂರ್ಣಗೊಳಿಸಿ ಹಿಂತಿರುಗಿದ್ದಾರೆ.ದೆಹಲಿ ಚಿತ್ರಗಳನ್ನು ನೋಡಿದಾಗ ಸಾರಾಯಿ ಹೋರಾಟ ಆರಂಭ ಆದಾಗ ರಾಘು ಜತೆ ಆಗಿದ್ದು ನೆನಪಾಯ್ತು. ಜೀವನದ ಹಲವು ಸರಿ ತಪ್ಪುಗಳ ನಡುವೇ ಮನುಷ್ಯ ಪ್ರೀತಿಯ ನೆಲೆ ಮತ್ತು ತಾತ್ವಿಕ ಬದ್ಧತೆ ಹೊಂದಿದಾಗ ಕಾಲದ ನಂತರವೂ ವ್ಯಕ್ತಿ ಗಟ್ಟಿಯಾಗಿ ಉಳಿಯುತ್ತಾನೆ. ಒಂಟಿ ನಡಿಗೆ ಎಂದು ಹೊರನೋಟಕ್ಕೆ ಅನ್ನಿಸಿದರೂ ಆತ ಒಂಟಿಯಾಗಿರುವುದಿಲ್ಲ. ರಾಘು ದೆಹಲಿ ಪಯಣ ಇದಕ್ಕೆ ಒಂದು ಸಾಕ್ಷಿ.ಭೂಮಿ ಹೋರಾಟದ ಸಾಗರ ನೆಲದ ಮಗ ಚಾರ್ವಾಕ ರಾಘು ಭೂಮಿ ತಾಯಿ ಮಕ್ಕಳ ದೆಹಲಿ ಹೋರಾಟಕ್ಕೆ ಬೆಂಬಲ ನೀಡಿ ದೇಶದ ರಾಜಧಾನಿಗೆ ತೆರಳುವುದು ಸಾಗರ ನೆಲದ ಕಸು ಮತ್ತು ಹೆಮ್ಮೆ. ಇದನ್ನು ಗುರುತಿಸುವುದು ಬಹಳ ಮುಖ್ಯ ಎಂದೇ ಈ ಬರಹ.

ಜಗಳ, ಕೋಪ, ಒರಟುತನ, ಅನ್ನಿಸಿದ್ದು ನೇರ ಹೇಳುವ ಸ್ವಭಾವ, ಪ್ರಶ್ನೆ ಮಾಡುವ ಮನೋವೃತ್ತಿ ಇವೆಲ್ಲವೂ ವ್ಯಕ್ತಿಯ ಒಳಗಿನ ಪ್ರೀತಿಯ ಪ್ರತಿರೂಪಗಳೇ… ಚಾರ್ವಾಕ ರಾಘು ಇವೆಲ್ಲವೂ ಒಳಗೊಳ್ಳುತ್ತಲೇ ಆಳದಲ್ಲಿ ಕರಡಿ ಪ್ರೀತಿಯನ್ನು ಕಾಯ್ದುಕೊಂಡವ. ರಾಘು ದೆಹಲಿ ಹೆಜ್ಜೆ ಕೂಡ ಈ ಹಾದಿಯದು. ಸೆಲ್ಯೂಟ್ ಚಾರ್ವಾಕ…. ನೆಲದ ನಿಜ ಪ್ರತಿನಿಧಿಯಾಗಿದ್ದಕ್ಕೆಹೋರಾಟದ ನೆಲಕ್ಕೆ ಧಾವಿಸಿದ್ದಕ್ಕೆ

-.ಜಿ.ಟಿ. ಸತ್ಯನಾರಾಯಣ ಕರೂರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *