ಕಾನಸೂರಿನ ಆರೋಪಿಗಳ ಮೇಲೆ ಶೀಘ್ರ-ಸೂಕ್ತ ಕ್ರಮಕ್ಕೆ bsndp ಆಗ್ರಹ

ಕಾನಸೂರಿನ ಅಣ್ಣಪ್ಪ ನಾಯ್ಕರ ಮೇಲೆ ಹಲ್ಲೆಮಾಡಿದ ಕುಟುಂಬವನ್ನು ತಕ್ಷಣ ಬಂಧಿಸಿ,ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘದ ಪದಾಧಿಕಾರಿಗಳು ಈ ಗಲಾಟೆಯಲ್ಲಿ ಆರೋಪಿಯಾಗಿರುವ ಸರ್ಕಾರಿ ನೌಕರರನ್ನು ಸೇವೆಯಿಂದ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ನಗರದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಈ ಒತ್ತಾಯಮಾಡಿದ ಬಿ.ಎಸ್.ಎನ್.ಡಿ.ಪಿ. ಸಿದ್ಧಾಪುರ ತಾಲೂಕು ಉತ್ತರ ಕನ್ನಡದಲ್ಲಿ ಬಹುಸಂಖ್ಯಾತರಾದ ದೀವರ ಮೇಲೆ ಇಂಥ ಕಿರುಕುಳ,ಹಲ್ಲೆ,ಶೋಷಣೆ ನಡೆಯುತ್ತಿದೆ. ಈ ವಿದ್ಯಮಾನ ನಿಲ್ಲದಿದ್ದರೆ ಪರಿಸ್ಥಿತಿ ಹದಗೆಡಲು ಜಿಲ್ಲಾಡಳಿತವೇ ಅನುವುಮಾಡಿಕೊಟ್ಟಂತಾಗುತ್ತದೆ. ಕಾನಸೂರು ಪ್ರಕರಣದಲ್ಲಿ ಆರೋಪಿಗಳ ಬಂಧನ, ಸರ್ಕಾರಿ ನೌಕರನ ಅಮಾನತ್ತು ಮಾಡಿ ಬಾಧಿತರಿಗೆ ನ್ಯಾಯ ಒದಗಿಸಬೇಕು. ಇವರಿಗೆ ಜಾಮೀನು ಕೂಡಾ ನೀಡಬಾರದು. ಈ ಬೇಡಿಕೆಗಳು ಈಡೇರದಿದ್ದರೆ ಇದೇ ವಾರ ಪ್ರತಿಭಟನೆ ಮಾಡಿ ನ್ಯಾಯಕ್ಕಾಗಿ ಆಗ್ರಹಿಸುವುದಾಗಿ ಎಚ್ಚರಿಸಿದೆ,

ಕಾನಸೂರಿನ ಘಟನೆ ಅಕ್ಷಮ್ಯ ಅಪರಾಧ, ನಮ್ಮ ಸಮಾಜದ ಮೇಲೆ ಯಾರೇ ದಬ್ಬಾಳಿಕೆ ಮಾಡಿದರೂ ಅವರಿಗೆ ಸೂಕ್ತ ಉತ್ತರ ನೀಡಲು ಸಮಾಜ ಬದ್ಧವಾಗಿದೆ, ಬಿ.ಎಸ್.ಎನ್.ಡಿ.ಪಿ.ಇದರ ನೇತೃತ್ವ ವಹಿಸಲು ಸಿದ್ಧ.- ವಿನಾಯಕ ನಾಯ್ಕ ಬಿ.ಎಸ್.ಎನ್.ಡಿ.ಪಿ. (ತಾಲೂಕಾ ಅಧ್ಯಕ್ಷ)

ಕಾನಸೂರು ಮಾತ್ರವಲ್ಲ ಜಿಲ್ಲೆ, ರಾಜ್ಯದ ಎಲ್ಲೇ ಬಹುಸಂಖ್ಯಾತರ ಮೇಲೆ ಹಲ್ಲೆಯಾದರೆ ಪರಿಣಾಮ ಬೇರೆಯಾಗಲಿದೆ.ಕಾನಸೂರಿನ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಧನ್ಯವಾದ.- ಎ.ಜಿ.ನಾಯ್ಕ, ಕಡಕೇರಿ,bsndpಉಪಾಧ್ಯಕ್ಷ

ಕಾನಸೂರಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಜನರನ್ನು ಬಂಧಿಸಿದ ಬಗ್ಗೆ ಸಮಾಜಮುಖಿ ಗೆ ಮಾಹಿತಿ ಸಿಕ್ಕಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *