ರಾಜ್ಯ ರೈತರ ಪ್ರತಿಭಟನೆಯನ್ನೇಕೆ ಭೈರಪ್ಪ ನೋಡುತ್ತಿಲ್ಲ

ಖ್ಯಾತ ಸಾಹಿತಿ ದೇವನೂರು ಮಹಾದೇವ ಅವರು ಮಂಗಳವಾರ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 

Newly elected Gram Panchayat members were felicitated in Mysuru on Tuesday. Writer Devanuru Mahadev and farmer leader Badagalapura Nagendra look on

ಮೈಸೂರು: ಖ್ಯಾತ ಸಾಹಿತಿ ದೇವನೂರು ಮಹಾದೇವ ಅವರು ಮಂಗಳವಾರ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 

ಮೈಸೂರು ಹುಣಸಲೂರು ರಸ್ತೆಯಲ್ಲಿರುವ ಕೃಷಿ ಅಧ್ಯಯನ ಸಂಸ್ಥೆ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನಯು ಮಂಗಳವಾರ ಆಯೋಜಿಸಿದ್ದ ಸ್ವರಾಜ್ ಇಂಡಿಯಾ, ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ದಲಿತ ಸಂಘರ್ಷ ಸಮಿತಿ ಬೆಂಬಲಿತ ಗ್ರಾಮ ಪಂಚಾಯಿತಿ ಅಭ್ಯರ್ಥಿಗಳಿಗೆ ಅಭಿನಂದನೆ ಹಾಗೂ ಗ್ರಾಮ ಅಭಿವೃದ್ಧಿಯಲ್ಲಿ ಸದಸ್ಯರ ಪಾತ್ರ ಕುರಿತು ವಿಚಾರ ಮಂಡನೆ ಕಾರ್ಯಕ್ರಮದಲ್ಲಿ ಮಾತನಾಡಿದರು. 

ಈ ವೇಳೆ ಭೈರಪ್ಪ ವಿರುದ್ಧ ಕಿಡಿಕಾರಿದ ಅವರು, ದೆಹಲಿ ರೈತರ ಹೋರಾಟದಲ್ಲಿ ಪಂಜಾಬ್ ನವರು ಮಾತ್ರ ಭಾಗಿಯಾಗುತ್ತಿರುವುದಾಗಿ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಹೇಳಿದ್ದಾರೆ. ಪ್ರತಿಭಟನೆಯಲ್ಲಿ ಪಂಜಾಬ್ ಮಾತ್ರವಲ್ಲದೆ, ಉತ್ತರಾಖಂಡ, ಹರಿಯಾಣ ಸೇರಿದಂತೆ ಹಲವು ರಾಜ್ಯದ ಜನರು ಭಾಗಿಯಾಗಿದ್ದಾರೆ. ಎಲ್ಲಾ ರಾಜ್ಯಗಳಲ್ಲೂ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಈ ಬಗ್ಗೆ ಅವರಿಗೇಕೆ ತಿಳಿದಿಲ್ಲ? ಅವರಿಗೆ ಕಿವಿ ಕೇಳುತ್ತಿಲ್ಲವೇ? ಕಣ್ಣು ಕಾಣುತ್ತಿಲ್ಲವೇ? ಸಂವೇದನೆ ಇಲ್ಲವೇ? ಇದನ್ನೆಲಲಾ ಮಾಧ್ಯಮದವರು ಅವರಿಗೆ ತಿಳಿಸಬೇಕು ಎಂದು ಹೇಳಿದರು. 

ರಾಜ್ಯದಲ್ಲಿ ರೈತರ ಪ್ರತಿಭಟನೆ ಪರಿಣಾಮಕಾರಿಯಾಗದೇ ಇರಬಹುದು. ಆದರೆ, ರೈತರೊಂದಿಗೆ ಕಾರ್ಮಿಕರು, ದಲಿತರು ಹಾಗೂ ಮಹಿಳೆಯರು ಕೈಜೋಡಿಸಿ ಪ್ರತಿಭಟನೆ ನಡೆಸುತ್ತಿರುವುದು ಹೆಚ್ಚಿನ ಮೌಲ್ಯವನ್ನು ನೀಡಿದೆ. ಈ ಪ್ರತಿಭಟನೆಯ ಸುಳ್ಳು, ದ್ವೇಶ ಹಾಗೂ ಅಸಹಿಷ್ಣುತೆಯ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ. 

ಆಪರೇಷನ್ ಕಮಲದ ಮೂಲಕ ಬಿಜೆಪಿಯವರು ನೈತಿಕ ರಾಜಕಾರಣವನ್ನು ಅನೈತಿಕ ಮಾಡಿದ್ದಾರೆ. ರಾಜಕಾರಣದ ನೈತಿಕತೆಗೆ ವಿಷ ಹಾಕಿದ್ದಾರೆಂದ ಕಿಡಿಕಾರಿದ್ದಾರೆ. 

ಸ್ವರಾಜ್ ಇಂಡಿಯಾ, ದಲಿತ ಸಂಘರ್ಷ ಸಮಿತಿ, ರೈತ ಸಂಘದ ಬೆಂಬಲ ಹೊಂದಿದ್ದ ನೂರಕ್ಕೂ ಹೆಚ್ಚು ಅಭ್ಯರ್ಥಿಗಳು ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣಯಲ್ಲಿ ಗೆದ್ದಿರುವುದು ನಮಗೇ ಅನಿರೀಕ್ಷಿತ. ಇದು ಬದಲಾವಣೆಯ ಕಡಗೆ ನಮ್ಮ ಮೊದಲ ಹೆಜ್ಜೆಯಾಗಿದೆ. ಇದು ಸ್ವರಾಜ್ ಇಂಡಿಯಾ ಪಕ್ಷದ ಸಮತಾವಾದ, ಮೌಲ್ಯಗಳು, ಸಮಾಜಮುಖಿ ಆಶಗಳಿಗೆ ಸಂದ ಜಯ ಎಂದಿದ್ದಾರೆ. 

ಈಗ ನೀವು ಸಾಧಿಸಿರುವ ಗೆಲುವು ಬಹಿರಂಗದ ಗೆಲುವು. ಇದರಿಂದ ನೀವು ಜವಾಬ್ದಾರಿಯ ನೊಗ ಹೊತ್ತಂತಾಗಿದೆ. ಮುಂದೆ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸುವ ಯೋಚನೆ ಮಾಡಿ. ಇನ್ನು ಬೇರೆ ಪಕ್ಷಗಳು ನೀಡುವ ಆಮಿಷದ ಎದುರು  ನೀವು ಗೆಲ್ಲಬೇಕ. ಅದು ನಿಜವಾದ ಗೆಲುವು. ನಿಷ್ಟೆಯಿಂದ ಒಳ್ಳೆಯ ಕೆಲಸ ಮಾಡಬೇಕು. ಗೆದ್ದವರು ಸೋತವರೊಂದಿಗೆ ವಿಶ್ವಾಸದಿಂದ ಇರಬೇಕೆಂದು ಕಿವಿಮಾತು ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *